<p><strong>ಜೇವರ್ಗಿ</strong>: ಪ್ರತಿ ಕ್ವಿಂಟಲ್ ತೊಗರಿಗೆ ₹12 ಸಾವಿರ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಘೋಷಿಸುವಂತೆ ಸೇರಿ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ತಾಲ್ಲೂಕು ಘಟಕದ ವತಿಯಿಂದ ಗುರುವಾರ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಈ ವೇಳೆ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಸುಭಾಷ ಹೊಸಮನಿ ಮಾತನಾಡಿ, ‘₹12,500 ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಮಾಡಿ, ಪ್ರತಿ ಗ್ರಾಮ ಪಂಚಾಯತಿಗೊಂದು ಖರೀದಿ ಕೇಂದ್ರ ತೆರೆದು ತೊಗರಿ ಖರೀದಿ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಸರ್ಕಾರದ ವತಿಯಿಂದ ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಮಾಡಬೇಕು. ಅತಿವೃಷ್ಟಿಯಿಂದ ಹಾಳಾದ ಎಲ್ಲಾ ಬೆಳೆಗಳಿಗೆ ಪ್ರತಿ ಎಕರೆಗೆ ₹25 ಸಾವಿರದಂತೆ ಪರಿಹಾರ ವಿತರಿಸಬೇಕು. ಪರಿಹಾರ ಸಿಗದೆ ಇರುವ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಕೂಡಲೇ ಪರಿಹಾರ ಜಮಾ ಮಾಡಬೇಕು’ ಎಂದು ಒತ್ತಾಯಿಸದರು.</p>.<p>‘ಎಲ್ಲಾ ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ₹5 ಲಕ್ಷದವರೆಗಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಉದ್ಯೋಗ ಖಾತರಿಯಲ್ಲಿ ಕೆಲಸ ಮಿತಿಯನ್ನು 250 ದಿನಗಳಿಗೆ ಹೆಚ್ಚಿಸಿ, ಕೂಲಿಯನ್ನು ₹600ಗೆ ಹೆಚ್ಚಳ ಮಾಡಬೇಕು. ವೃದ್ಧ ರೈತರಿಗೆ ಮತ್ತು ಕಾರ್ಮಿಕರಿಗೆ ಪ್ರತಿ ತಿಂಗಳು ₹7,500 ಮಾಶಾಸನ ಮಂಜೂರು ಎಂಬುದು ಸೇರಿ ಇತರ ಬೇಡಿಕೆಗಳ ಈಡೇರಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ನಂತರ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.<br /> ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಮಲ್ಕಪ್ಪ ಹರನೂರ, ರೇವು ನಾಯಕ ಜಾಧವ, ಸಿದ್ದಣ್ಣ ಆದ್ವಾನಿ, ಗುರಪ್ಪ ಮುಕ್ಕಾ, ರಮೇಶ ಬಂದರವಾಡ, ಶಿವಯೋಗೆಪ್ಪ ಹೊನ್ನೂರ, ಈರಣ್ಣ ಸಾಥಖೇಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ</strong>: ಪ್ರತಿ ಕ್ವಿಂಟಲ್ ತೊಗರಿಗೆ ₹12 ಸಾವಿರ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಘೋಷಿಸುವಂತೆ ಸೇರಿ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ತಾಲ್ಲೂಕು ಘಟಕದ ವತಿಯಿಂದ ಗುರುವಾರ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಈ ವೇಳೆ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಸುಭಾಷ ಹೊಸಮನಿ ಮಾತನಾಡಿ, ‘₹12,500 ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಮಾಡಿ, ಪ್ರತಿ ಗ್ರಾಮ ಪಂಚಾಯತಿಗೊಂದು ಖರೀದಿ ಕೇಂದ್ರ ತೆರೆದು ತೊಗರಿ ಖರೀದಿ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಸರ್ಕಾರದ ವತಿಯಿಂದ ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಮಾಡಬೇಕು. ಅತಿವೃಷ್ಟಿಯಿಂದ ಹಾಳಾದ ಎಲ್ಲಾ ಬೆಳೆಗಳಿಗೆ ಪ್ರತಿ ಎಕರೆಗೆ ₹25 ಸಾವಿರದಂತೆ ಪರಿಹಾರ ವಿತರಿಸಬೇಕು. ಪರಿಹಾರ ಸಿಗದೆ ಇರುವ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಕೂಡಲೇ ಪರಿಹಾರ ಜಮಾ ಮಾಡಬೇಕು’ ಎಂದು ಒತ್ತಾಯಿಸದರು.</p>.<p>‘ಎಲ್ಲಾ ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ₹5 ಲಕ್ಷದವರೆಗಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಉದ್ಯೋಗ ಖಾತರಿಯಲ್ಲಿ ಕೆಲಸ ಮಿತಿಯನ್ನು 250 ದಿನಗಳಿಗೆ ಹೆಚ್ಚಿಸಿ, ಕೂಲಿಯನ್ನು ₹600ಗೆ ಹೆಚ್ಚಳ ಮಾಡಬೇಕು. ವೃದ್ಧ ರೈತರಿಗೆ ಮತ್ತು ಕಾರ್ಮಿಕರಿಗೆ ಪ್ರತಿ ತಿಂಗಳು ₹7,500 ಮಾಶಾಸನ ಮಂಜೂರು ಎಂಬುದು ಸೇರಿ ಇತರ ಬೇಡಿಕೆಗಳ ಈಡೇರಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ನಂತರ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.<br /> ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಮಲ್ಕಪ್ಪ ಹರನೂರ, ರೇವು ನಾಯಕ ಜಾಧವ, ಸಿದ್ದಣ್ಣ ಆದ್ವಾನಿ, ಗುರಪ್ಪ ಮುಕ್ಕಾ, ರಮೇಶ ಬಂದರವಾಡ, ಶಿವಯೋಗೆಪ್ಪ ಹೊನ್ನೂರ, ಈರಣ್ಣ ಸಾಥಖೇಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>