<p>ಜೇವರ್ಗಿ: ತಾಲ್ಲೂಕಿನ ಸುಕ್ಷೇತ್ರ ಗಂವ್ಹಾರ ಗ್ರಾಮದ ಜಗದ್ಗುರು ಶ್ರೀ ಬನ್ನಿಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಏ.20ರ ಸೋಮವಾರ ಸಂಭ್ರಮದ ರಥೋತ್ಸವ ಜರುಗಲಿದೆ.</p>.<p>ವಿಶ್ವರಾಧ್ಯ ಸಿದ್ಧ ಸಂಸ್ಥಾನ ಮಠ ಅಬ್ಬೆತುಮಕೂರ ಹಾಗೂ ಗಂವ್ಹಾರ ಪಂಚಗ್ರಹ ತೋಪಕಟ್ಟಿ ಹಿರೇಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಹಾಗೂ ಕ್ಷೇತ್ರದ ಕಿರಿಯ ಶ್ರೀಗಳಾದ ಶಿವಶೇಖರ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ 6 ಗಂಟೆಗೆ ಬನ್ನಿಬಸವನ ಕರ್ತೃ ಗದ್ದುಗೆ ರುದ್ರಾಭಿಷೇಕ ಹಾಗೂ ಮಹಾ ಪೂಜೆ, ಬೆಳಿಗ್ಗೆ 9 ಗಂಟೆಗೆ ರಥದ ಪೂಜೆ ಮತ್ತು ಕಳಸಾರೋಹಣ, ಮಧ್ಯಾಹ್ನ 2 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ನಂದಿಕೋಲು ಮೆರವಣಿಗೆ ಸಕಲ ವಾದ್ಯಮೇಳ ಹಾಗೂ ವೈಭವಗಳೊಂದಿಗೆ ಶ್ರೀ ಅಮೃತೇಶ್ವರ ದೇವಸ್ಥಾನದಿಂದ ಶ್ರೀ ಬನ್ನಿ ಬಸವೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ.</p>.<p>ಸಂಜೆ 6 ಗಂಟೆಗೆ ಸಹಸ್ರಾರು ಭಕ್ತರ ಜಯಘೋಷಗಳ ನಡುವೆ ಅದ್ದೂರಿ ರಥೋತ್ಸವ ಜರುಗಲಿದೆ. ರಾತ್ರಿ 8 ಗಂಟೆಗೆ ಧರ್ಮ ಸಭೆ, ರಾತ್ರಿ 10 ಗಂಟೆಗೆ ರಸಮಂಜರಿ ಕಾರ್ಯಕ್ರಮ ಜರುಗಲಿದೆ. 21ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜಂಗಿ ಕುಸ್ತಿ ನಡೆಯಲಿವೆ ಎಂದು ಶ್ರೀ ಮಠದ ಸದ್ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-34-463791624</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೇವರ್ಗಿ: ತಾಲ್ಲೂಕಿನ ಸುಕ್ಷೇತ್ರ ಗಂವ್ಹಾರ ಗ್ರಾಮದ ಜಗದ್ಗುರು ಶ್ರೀ ಬನ್ನಿಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಏ.20ರ ಸೋಮವಾರ ಸಂಭ್ರಮದ ರಥೋತ್ಸವ ಜರುಗಲಿದೆ.</p>.<p>ವಿಶ್ವರಾಧ್ಯ ಸಿದ್ಧ ಸಂಸ್ಥಾನ ಮಠ ಅಬ್ಬೆತುಮಕೂರ ಹಾಗೂ ಗಂವ್ಹಾರ ಪಂಚಗ್ರಹ ತೋಪಕಟ್ಟಿ ಹಿರೇಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಹಾಗೂ ಕ್ಷೇತ್ರದ ಕಿರಿಯ ಶ್ರೀಗಳಾದ ಶಿವಶೇಖರ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ 6 ಗಂಟೆಗೆ ಬನ್ನಿಬಸವನ ಕರ್ತೃ ಗದ್ದುಗೆ ರುದ್ರಾಭಿಷೇಕ ಹಾಗೂ ಮಹಾ ಪೂಜೆ, ಬೆಳಿಗ್ಗೆ 9 ಗಂಟೆಗೆ ರಥದ ಪೂಜೆ ಮತ್ತು ಕಳಸಾರೋಹಣ, ಮಧ್ಯಾಹ್ನ 2 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ನಂದಿಕೋಲು ಮೆರವಣಿಗೆ ಸಕಲ ವಾದ್ಯಮೇಳ ಹಾಗೂ ವೈಭವಗಳೊಂದಿಗೆ ಶ್ರೀ ಅಮೃತೇಶ್ವರ ದೇವಸ್ಥಾನದಿಂದ ಶ್ರೀ ಬನ್ನಿ ಬಸವೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ.</p>.<p>ಸಂಜೆ 6 ಗಂಟೆಗೆ ಸಹಸ್ರಾರು ಭಕ್ತರ ಜಯಘೋಷಗಳ ನಡುವೆ ಅದ್ದೂರಿ ರಥೋತ್ಸವ ಜರುಗಲಿದೆ. ರಾತ್ರಿ 8 ಗಂಟೆಗೆ ಧರ್ಮ ಸಭೆ, ರಾತ್ರಿ 10 ಗಂಟೆಗೆ ರಸಮಂಜರಿ ಕಾರ್ಯಕ್ರಮ ಜರುಗಲಿದೆ. 21ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜಂಗಿ ಕುಸ್ತಿ ನಡೆಯಲಿವೆ ಎಂದು ಶ್ರೀ ಮಠದ ಸದ್ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-34-463791624</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>