<p><strong>ಜೇವರ್ಗಿ:</strong> ಕರ್ತವ್ಯ ಲೋಪ ಆರೋಪದ ಮೇಲೆ ಪ್ರಭಾರ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಯಡ್ರಾಮಿ ತಾಲ್ಲೂಕು ಮುತ್ತಕೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಶಿವಶಂಕರ ಅಮಾನತುಗೊಂಡವರು.</p>.<p>ಜೂನ್ 18 ರಂದು ಜಿಲ್ಲಾ ಎ.ಪಿ.ಎಫ್. ತಂಡದ ವತಿಯಿಂದ ಶಾಲೆಗೆ ಭೇಟಿ ನೀಡಲಾಗಿತ್ತು. ಈ ವೇಳೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭದಿಂದ ಮಕ್ಕಳಿಗೆ ಬಿಸಿ ಊಟದಲ್ಲಿ ಮೊಟ್ಟೆ, ಬಾಳೆಹಣ್ಣು ಹಾಗೂ 3–4 ದಿನ ಬಿಸಿ ಊಟ ವಿತರಿಸಿರುವುದಿಲ್ಲವೆಂದು ಶಾಲಾ ಮಕ್ಕಳು ತಿಳಿಸಿದರು. ಈ ಕುರಿತು ಅಡುಗೆ ಸಹಾಯಕರನ್ನು ವಿಚಾರಿಸಿದಾಗ, ಗ್ಯಾಸ್ ಖಾಲಿಯಾಗಿರುವುದರಿಂದ ಅಡುಗೆ ತಯಾರಿಸಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಕೆಲ ಮಕ್ಕಳು ಶಾಲೆಗೆ ಮನೆಯಿಂದ ಊಟ ಕಟ್ಟಿಕೊಂಡು ಬಂದಿರುವುದನ್ನು ಗಮನಿಸಲಾಯಿತು. ಅಲ್ಲದೇ ಕೆಲವು ಮಕ್ಕಳು ಊಟಕ್ಕೆ ಮನೆಗೆ ಹೋಗಿದ್ದರು.</p>.<p>ಬಿಸಿ ಊಟ ವಿತರಿಸಿದ ಕುರಿತು ದಾಖಲೆ ಕೂಡ ಬರೆಯದೇ ನಿರ್ಲಕ್ಷ್ಯ ವಹಿಸಲಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಿವಶಂಕರ ಕರ್ತವ್ಯ ಲೋಪ ಎಸಗಿರುವುದು ಸಾಬೀತಾದ ಹಿನ್ನಲೆಯಲ್ಲಿ ಶಿಸ್ತು ಕ್ರಮ ಜರುಗಿಸುವಂತೆ ತಪಾಸಣೆ ತಂಡದವರು ಶಿಫಾರಸು ಮಾಡಿದ್ದರು. ಹೀಗಾಗಿ ಪ್ರಭಾರ ಮುಖ್ಯಶಿಕ್ಷಕರ ಮೇಲೆ ಶಿಸ್ತುಕ್ರಮ ಜರುಗಿಸಿ ಅಮಾನತುಗೊಳಿಸಲಾಗಿದೆ ಎಂದು ಬಿಇಒ ವೀರಣ್ಣ ಬೊಮ್ಮನಳ್ಳಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ:</strong> ಕರ್ತವ್ಯ ಲೋಪ ಆರೋಪದ ಮೇಲೆ ಪ್ರಭಾರ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಯಡ್ರಾಮಿ ತಾಲ್ಲೂಕು ಮುತ್ತಕೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಶಿವಶಂಕರ ಅಮಾನತುಗೊಂಡವರು.</p>.<p>ಜೂನ್ 18 ರಂದು ಜಿಲ್ಲಾ ಎ.ಪಿ.ಎಫ್. ತಂಡದ ವತಿಯಿಂದ ಶಾಲೆಗೆ ಭೇಟಿ ನೀಡಲಾಗಿತ್ತು. ಈ ವೇಳೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭದಿಂದ ಮಕ್ಕಳಿಗೆ ಬಿಸಿ ಊಟದಲ್ಲಿ ಮೊಟ್ಟೆ, ಬಾಳೆಹಣ್ಣು ಹಾಗೂ 3–4 ದಿನ ಬಿಸಿ ಊಟ ವಿತರಿಸಿರುವುದಿಲ್ಲವೆಂದು ಶಾಲಾ ಮಕ್ಕಳು ತಿಳಿಸಿದರು. ಈ ಕುರಿತು ಅಡುಗೆ ಸಹಾಯಕರನ್ನು ವಿಚಾರಿಸಿದಾಗ, ಗ್ಯಾಸ್ ಖಾಲಿಯಾಗಿರುವುದರಿಂದ ಅಡುಗೆ ತಯಾರಿಸಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಕೆಲ ಮಕ್ಕಳು ಶಾಲೆಗೆ ಮನೆಯಿಂದ ಊಟ ಕಟ್ಟಿಕೊಂಡು ಬಂದಿರುವುದನ್ನು ಗಮನಿಸಲಾಯಿತು. ಅಲ್ಲದೇ ಕೆಲವು ಮಕ್ಕಳು ಊಟಕ್ಕೆ ಮನೆಗೆ ಹೋಗಿದ್ದರು.</p>.<p>ಬಿಸಿ ಊಟ ವಿತರಿಸಿದ ಕುರಿತು ದಾಖಲೆ ಕೂಡ ಬರೆಯದೇ ನಿರ್ಲಕ್ಷ್ಯ ವಹಿಸಲಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಿವಶಂಕರ ಕರ್ತವ್ಯ ಲೋಪ ಎಸಗಿರುವುದು ಸಾಬೀತಾದ ಹಿನ್ನಲೆಯಲ್ಲಿ ಶಿಸ್ತು ಕ್ರಮ ಜರುಗಿಸುವಂತೆ ತಪಾಸಣೆ ತಂಡದವರು ಶಿಫಾರಸು ಮಾಡಿದ್ದರು. ಹೀಗಾಗಿ ಪ್ರಭಾರ ಮುಖ್ಯಶಿಕ್ಷಕರ ಮೇಲೆ ಶಿಸ್ತುಕ್ರಮ ಜರುಗಿಸಿ ಅಮಾನತುಗೊಳಿಸಲಾಗಿದೆ ಎಂದು ಬಿಇಒ ವೀರಣ್ಣ ಬೊಮ್ಮನಳ್ಳಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>