<p><strong>ಜೇವರ್ಗಿ (ಕಲಬುರಗಿ ಜಿಲ್ಲೆ):</strong> ಮೈಕ್ರೊ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಕಿರುಕುಳದಿಂದ ಬೇಸತ್ತು ತಾಲ್ಲೂಕಿನ ಯಾತನೂರ ಗ್ರಾಮದಲ್ಲಿ ಶನಿವಾರ ವ್ಯಕ್ತಿಯೊಬ್ಬ ಮನೆಯಲ್ಲೇ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ನಾಗೇಶ ರಾಮಣ್ಣ ರೂಗಿ (50) ಆತ್ಮಹತ್ಯೆ ಮಾಡಿಕೊಂಡವರು. ಕಲಬುರಗಿ ನಗರದ ಹಿಂದೂಜಾ ಹಣಕಾಸು ಸಂಸ್ಥೆಯಲ್ಲಿ ಒಟ್ಟು ₹ 5 ಲಕ್ಷ ಸಾಲ ಪಡೆದುಕೊಂಡಿದ್ದರು. ಅದರಲ್ಲಿ ₹ 3.5 ಲಕ್ಷ ಮರುಪಾವತಿ ಮಾಡಿದ್ದರು. ಉಳಿದ ₹ 1.5 ಲಕ್ಷ ಸಾಲದ ಹಣ ಕಟ್ಟುವಂತೆ ಹಿಂದೂಜಾ ಹಣಕಾಸು ಸಂಸ್ಥೆಯ ಸಿಬ್ಬಂದಿ ಯಾತನೂರ ಗ್ರಾಮದ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಮನೆಯ ಗೋಡೆ ಮೇಲೆ ‘ಹಿಂದೂಜಾ ಫೈನಾನ್ಸ್ಗೆ ಅಡಮಾನ ಮಾಡಲಾಗಿದೆ’, ‘ಈ ಮನೆ ಮಾರಾಟಕ್ಕೆ ಇದೆ’ ಎಂದು ಫೈನಾನ್ಸ್ ಸಿಬ್ಬಂದಿ ಬರೆದಿದ್ದರು.</p>.<p>ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ ಕಾರಣಕ್ಕೆ ಮನೆಯಲ್ಲಿ ನಿದ್ದೆ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಾಗೇಶ ಪತ್ನಿ ಸುನಂದಾ ರೂಗಿ ನೆಲೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಫೈನಾನ್ಸ್ನ ಅಧಿಕಾರಿ ಹಾಗೂ ಸಿಬ್ಬಂದಿ ಪದೇ ಪದೇ ಮನೆಗೆ ಬಂದು ಸಾಲ ಮರು ಪಾವತಿಸುವಂತೆ ಕಿರುಕುಳ ನೀಡುತ್ತಿದ್ದರು. ಸಾಲ ಮರುಪಾವತಿಸದೇ ಇದ್ದರೆ ಮನೆಗೆ ಕೀಲಿ ಹಾಕುತ್ತೇವೆ ಎಂದು ಎಂದು ಮಾನಸಿಕ ಹಿಂಸೆ ಕೊಡುತ್ತಿದ್ದರು’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ (ಕಲಬುರಗಿ ಜಿಲ್ಲೆ):</strong> ಮೈಕ್ರೊ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಕಿರುಕುಳದಿಂದ ಬೇಸತ್ತು ತಾಲ್ಲೂಕಿನ ಯಾತನೂರ ಗ್ರಾಮದಲ್ಲಿ ಶನಿವಾರ ವ್ಯಕ್ತಿಯೊಬ್ಬ ಮನೆಯಲ್ಲೇ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ನಾಗೇಶ ರಾಮಣ್ಣ ರೂಗಿ (50) ಆತ್ಮಹತ್ಯೆ ಮಾಡಿಕೊಂಡವರು. ಕಲಬುರಗಿ ನಗರದ ಹಿಂದೂಜಾ ಹಣಕಾಸು ಸಂಸ್ಥೆಯಲ್ಲಿ ಒಟ್ಟು ₹ 5 ಲಕ್ಷ ಸಾಲ ಪಡೆದುಕೊಂಡಿದ್ದರು. ಅದರಲ್ಲಿ ₹ 3.5 ಲಕ್ಷ ಮರುಪಾವತಿ ಮಾಡಿದ್ದರು. ಉಳಿದ ₹ 1.5 ಲಕ್ಷ ಸಾಲದ ಹಣ ಕಟ್ಟುವಂತೆ ಹಿಂದೂಜಾ ಹಣಕಾಸು ಸಂಸ್ಥೆಯ ಸಿಬ್ಬಂದಿ ಯಾತನೂರ ಗ್ರಾಮದ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಮನೆಯ ಗೋಡೆ ಮೇಲೆ ‘ಹಿಂದೂಜಾ ಫೈನಾನ್ಸ್ಗೆ ಅಡಮಾನ ಮಾಡಲಾಗಿದೆ’, ‘ಈ ಮನೆ ಮಾರಾಟಕ್ಕೆ ಇದೆ’ ಎಂದು ಫೈನಾನ್ಸ್ ಸಿಬ್ಬಂದಿ ಬರೆದಿದ್ದರು.</p>.<p>ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ ಕಾರಣಕ್ಕೆ ಮನೆಯಲ್ಲಿ ನಿದ್ದೆ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಾಗೇಶ ಪತ್ನಿ ಸುನಂದಾ ರೂಗಿ ನೆಲೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಫೈನಾನ್ಸ್ನ ಅಧಿಕಾರಿ ಹಾಗೂ ಸಿಬ್ಬಂದಿ ಪದೇ ಪದೇ ಮನೆಗೆ ಬಂದು ಸಾಲ ಮರು ಪಾವತಿಸುವಂತೆ ಕಿರುಕುಳ ನೀಡುತ್ತಿದ್ದರು. ಸಾಲ ಮರುಪಾವತಿಸದೇ ಇದ್ದರೆ ಮನೆಗೆ ಕೀಲಿ ಹಾಕುತ್ತೇವೆ ಎಂದು ಎಂದು ಮಾನಸಿಕ ಹಿಂಸೆ ಕೊಡುತ್ತಿದ್ದರು’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>