ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಟಾಚಾರದ ಪ್ರವಾಹ ವೀಕ್ಷಣೆ: ಶಾಸಕ ಅಜಯ ಸಿಂಗ್ ಆರೋಪ

Last Updated 16 ಅಕ್ಟೋಬರ್ 2020, 10:24 IST
ಅಕ್ಷರ ಗಾತ್ರ

ಜೇವರ್ಗಿ (ಕಲಬುರ್ಗಿ ಜಿಲ್ಲೆ): ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ವೀಕ್ಷಣೆಗೆ ಶುಕ್ರವಾರ ಕಲಬುರ್ಗಿ ಜಿಲ್ಲೆಗೆ ಭೇಟಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ ಅವರು ಜೇವರ್ಗಿ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಲಿಲ್ಲ. ಜನರ ಸಮಸ್ಯೆಗಳನ್ನು ಆಲಿಸಲಿಲ್ಲ ಎಂದು ಜೇವರ್ಗಿ ಶಾಸಕ ಅಜಯ್ ಸಿಂಗ್ ಆರೋಪಿಸಿದರು.

ಜೇವರ್ಗಿ ತಾಲ್ಲೂಕಿನ ಇಂತಿಂಥ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಕೋರಿದ್ದೆವು. ಆದರೆ, ಅವರು ಸಮರ್ಪಕವಾಗಿ ವೀಕ್ಷಿಸಲಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರವಾಹ ಪರಿಸ್ಥಿತಿಯ ವೀಕ್ಷಣೆಗೆ ಬಂದಿರುವ ಸಚಿವರು ಈ ಭಾಗದ ಸಮಸ್ಯೆ, ಸಂಕಷ್ಟಗಳಿಗೆ ಸ್ಪಂದಿಸಬೇಕು. ಪ್ರವಾಹ ಸಮಸ್ಯೆ ನಿವಾರಿಸುವ, ಪರಿಹಾರ ಘೋಷಿಸುವ ಮತ್ತು ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ಆದರೆ, ಇದ್ಯಾವುದನ್ನು ಅವರು ಮಾಡಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT