<p><strong>ಜೇವರ್ಗಿ</strong>: ಯಡ್ರಾಮಿ ಮತ್ತು ಜೇವರ್ಗಿ ತಾಲ್ಲೂಕಿನಾದ್ಯಂತ ಕೃಷಿ ಚಟುವಟಿಕೆ ಗರಿಗೆದರಿದ್ದು, ರೈತರು ಉಳುಮೆ ಮಾಡಿ ಭೂಮಿ ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ಅಗತ್ಯ ರಸಗೊಬ್ಬರ ದಾಸ್ತಾನು ಸಂಗ್ರಹಿಸಿಡುವ ಮೂಲಕ ಕೃಷಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.</p>.<p>ಪ್ರಸಕ್ತ ಸಾಲಿನಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದು, ಬಹುತೇಕ ರೈತರು ತಮ್ಮ ಭೂಮಿ ಹದಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಕಾರಣ ಕೃಷಿ ಇಲಾಖೆ ಕೂಡ ಹಂಗಾಮಿಗೆ ಸಿದ್ಧತೆ ನಡೆಸಿದ್ದು, ಬಿತ್ತನೆ ಬೀಜ, ರಸಗೊಬ್ಬರಗಳ ದಾಸ್ತಾನು ಮಾಡಿಟ್ಟಿರುವುದು ರೈತರಲ್ಲಿ ಉತ್ಸಾಹ ಹೆಚ್ಚಿಸಿದೆ.</p>.<p>ತೊಗರಿ ಎರಡೂ ತಾಲ್ಲೂಕಿನ ಪ್ರಮುಖ ಬೆಳೆಯಾಗಿದ್ದರಿಂದ ಬಿತ್ತನೆ ಬೀಜಕ್ಕೆ ಭಾರಿ ಬೇಡಿಕೆ ಇದೆ. ಇದರಿಂದ ಕೃಷಿ ಇಲಾಖೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ದಾಸ್ತಾನು ಮಾಡಿದೆ.</p>.<p>ಜೇವರ್ಗಿ, ಯಡ್ರಾಮಿ, ಆಂದೋಲಾ, ಇಜೇರಿ, ನೆಲೋಗಿ ಹೋಬಳಿಗಳ ಒಟ್ಟು 1,80,847 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹಾಗೂ ಮುಂಗಾರು ಹಂಗಾಮಿನಲ್ಲಿ 10,6,418 ಟನ್ ಉತ್ಪಾದನಾ ಗುರಿ ಹೊಂದಲಾಗಿದೆ.</p>.<p>ತಾಲ್ಲೂಕಿನ ಪ್ರಮುಖ ಬೆಳೆಗಳಾದ ತೊಗರಿ 83,460 ಹೆಕ್ಟೇರ್, ಹತ್ತಿ 60,959 ಹೆಕ್ಟೇರ್, ಸಜ್ಜೆ, ಸೂರ್ಯಕಾಂತಿ ಮತ್ತು ಮೆಕ್ಕೆ ಜೋಳ-1,000, ಹೆಸರು-1,290, ಎಳ್ಳು-140 ಹೆಕ್ಟೇರ್, ಭತ್ತ-11,000, ಕಬ್ಬು-800 ಹೆಕ್ಟೇರ್ ಸೇರಿದಂತೆ ಒಟ್ಟು 1,80,847 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ.</p>.<p>ಮುಂಗಾರು ಆರಂಭವಾಗುತ್ತಿದ್ದಂತೆ ಬಿತ್ತನೆ ಬೀಜ ವಿತರಣೆ ಪ್ರಕ್ರಿಯೆ ಆರಂಭಿಸಲು ಇಲಾಖೆ ಕ್ರಮ ಕೈಗೊಂಡಿದೆ. ಮುಂಗಾರು ಹಂಗಾಮಿಗೆ ಬೇಕಾಗುವ ಬೀಜಗಳು ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ರಸಗೊಬ್ಬರವನ್ನು ಅಧಿಕೃತ ಕೃಷಿ ಪರಿಕರಗಳ ಮಾರಾಟಗಾರರ ಮೂಲಕ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ಅಧಿಕೃತ ಬೀಜ ಮಾರಾಟಗಾರರಿಂದ ಮಾತ್ರ ಬಿತ್ತನೆ ಬೀಜಗಳನ್ನು ಅಧಿಕೃತ ಬಿಲ್ಲುಗಳ ಸಮೇತ ಪಡೆದು ಬೀಜ ಖರೀದಿಸಲು ಸೂಚಿಸಲಾಗಿದೆ.</p>.<p>ಎರಡೂ ಅವಳಿ ತಾಲ್ಲೂಕಿನ ರೈತರು ಡಿಎಪಿ ಗೊಬ್ಬರ ಒಂದಕ್ಕೆ ಅವಲಂಬಿತವಾಗದೇ ಲಭ್ಯವಿರುವ ಸಂಯುಕ್ತ ಗೊಬ್ಬರಗಳಾದ 20:20:0:13, 10:26:26, 12:32:16, 20:10:10, 14:28:14 ರಸಗೊಬ್ಬರಗಳನ್ನು ಬಳಸಬಹುದಾಗಿದೆ. ರೈತರು ಬಿತ್ತನೆಗೆ ಪೂರ್ವ ತಯ್ಯಾರಿ ಸಿದ್ದತೆ ಕೈಗೊಳ್ಳುತ್ತಿದ್ದು, ಬಿತ್ತನೆಗೆ ಭೂಮಿಯ ಹದ ಅರಿತು ಬಿತ್ತನೆ ಕಾರ್ಯ ಕೈಗೊಳ್ಳಬಹುದಾಗಿದೆ. ಬಿತ್ತನೆಗೆ ಮುನ್ನ ರೋಗ ಮತ್ತು ಕೀಟಗಳ ಹತೋಟಿಗೆ ಬೀಜಗಳ ಬೀಜೋಪಚಾರ ಕೈಗೊಳ್ಳಲು ತಾಂತ್ರಿಕ ಸಲಹೆಗಳನ್ನು ಅನುಸರಿಸಲು ಕೋರಲಾಗಿದೆ. </p>.<div><blockquote>ರೈತರು ಬಿತ್ತನೆ ಸಮಯದಲ್ಲಿ ಅನಗತ್ಯ ಗಡಿಬಿಡಿ ಮಾಡುವ ಬದಲಾಗಿ ಭೂಮಿಯ ತೇವಾಂಶ ನೋಡಿಕೊಂಡು ಬಿತ್ತನೆ ಮಾಡಬೇಕು</blockquote><span class="attribution">ಚಂದ್ರಕಾಂತ ಜೀವಣಗಿ ಸಹಾಯಕ ಕೃಷಿ ನಿರ್ದೇಶಕ ಜೇವರ್ಗಿ </span></div>.<div><blockquote>ಮುಂಗಾರು ಪೂರ್ವ ಮಳೆಯಿಂದ ಬಿತ್ತನೆಗೆ ಜಮೀನು ಹದ ಮಾಡಿಕೊಳ್ಳಲಾಗುತ್ತಿದೆ. ಹದಗೊಂಡ ಜಮೀನು ತೇವಾಂಶ ಹಿಡಿದಿಟ್ಟು ಕೊಳ್ಳುವುದರಿಂದ ಬಿತ್ತನೆಗೆ ಅನೂಕೂಲವಾಗಲಿದೆ</blockquote><span class="attribution"> ಮಲ್ಲಿಕಾರ್ಜುನ ಅವಂಟಿ ರೈತ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ</strong>: ಯಡ್ರಾಮಿ ಮತ್ತು ಜೇವರ್ಗಿ ತಾಲ್ಲೂಕಿನಾದ್ಯಂತ ಕೃಷಿ ಚಟುವಟಿಕೆ ಗರಿಗೆದರಿದ್ದು, ರೈತರು ಉಳುಮೆ ಮಾಡಿ ಭೂಮಿ ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ಅಗತ್ಯ ರಸಗೊಬ್ಬರ ದಾಸ್ತಾನು ಸಂಗ್ರಹಿಸಿಡುವ ಮೂಲಕ ಕೃಷಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.</p>.<p>ಪ್ರಸಕ್ತ ಸಾಲಿನಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದು, ಬಹುತೇಕ ರೈತರು ತಮ್ಮ ಭೂಮಿ ಹದಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಕಾರಣ ಕೃಷಿ ಇಲಾಖೆ ಕೂಡ ಹಂಗಾಮಿಗೆ ಸಿದ್ಧತೆ ನಡೆಸಿದ್ದು, ಬಿತ್ತನೆ ಬೀಜ, ರಸಗೊಬ್ಬರಗಳ ದಾಸ್ತಾನು ಮಾಡಿಟ್ಟಿರುವುದು ರೈತರಲ್ಲಿ ಉತ್ಸಾಹ ಹೆಚ್ಚಿಸಿದೆ.</p>.<p>ತೊಗರಿ ಎರಡೂ ತಾಲ್ಲೂಕಿನ ಪ್ರಮುಖ ಬೆಳೆಯಾಗಿದ್ದರಿಂದ ಬಿತ್ತನೆ ಬೀಜಕ್ಕೆ ಭಾರಿ ಬೇಡಿಕೆ ಇದೆ. ಇದರಿಂದ ಕೃಷಿ ಇಲಾಖೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ದಾಸ್ತಾನು ಮಾಡಿದೆ.</p>.<p>ಜೇವರ್ಗಿ, ಯಡ್ರಾಮಿ, ಆಂದೋಲಾ, ಇಜೇರಿ, ನೆಲೋಗಿ ಹೋಬಳಿಗಳ ಒಟ್ಟು 1,80,847 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹಾಗೂ ಮುಂಗಾರು ಹಂಗಾಮಿನಲ್ಲಿ 10,6,418 ಟನ್ ಉತ್ಪಾದನಾ ಗುರಿ ಹೊಂದಲಾಗಿದೆ.</p>.<p>ತಾಲ್ಲೂಕಿನ ಪ್ರಮುಖ ಬೆಳೆಗಳಾದ ತೊಗರಿ 83,460 ಹೆಕ್ಟೇರ್, ಹತ್ತಿ 60,959 ಹೆಕ್ಟೇರ್, ಸಜ್ಜೆ, ಸೂರ್ಯಕಾಂತಿ ಮತ್ತು ಮೆಕ್ಕೆ ಜೋಳ-1,000, ಹೆಸರು-1,290, ಎಳ್ಳು-140 ಹೆಕ್ಟೇರ್, ಭತ್ತ-11,000, ಕಬ್ಬು-800 ಹೆಕ್ಟೇರ್ ಸೇರಿದಂತೆ ಒಟ್ಟು 1,80,847 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ.</p>.<p>ಮುಂಗಾರು ಆರಂಭವಾಗುತ್ತಿದ್ದಂತೆ ಬಿತ್ತನೆ ಬೀಜ ವಿತರಣೆ ಪ್ರಕ್ರಿಯೆ ಆರಂಭಿಸಲು ಇಲಾಖೆ ಕ್ರಮ ಕೈಗೊಂಡಿದೆ. ಮುಂಗಾರು ಹಂಗಾಮಿಗೆ ಬೇಕಾಗುವ ಬೀಜಗಳು ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ರಸಗೊಬ್ಬರವನ್ನು ಅಧಿಕೃತ ಕೃಷಿ ಪರಿಕರಗಳ ಮಾರಾಟಗಾರರ ಮೂಲಕ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ಅಧಿಕೃತ ಬೀಜ ಮಾರಾಟಗಾರರಿಂದ ಮಾತ್ರ ಬಿತ್ತನೆ ಬೀಜಗಳನ್ನು ಅಧಿಕೃತ ಬಿಲ್ಲುಗಳ ಸಮೇತ ಪಡೆದು ಬೀಜ ಖರೀದಿಸಲು ಸೂಚಿಸಲಾಗಿದೆ.</p>.<p>ಎರಡೂ ಅವಳಿ ತಾಲ್ಲೂಕಿನ ರೈತರು ಡಿಎಪಿ ಗೊಬ್ಬರ ಒಂದಕ್ಕೆ ಅವಲಂಬಿತವಾಗದೇ ಲಭ್ಯವಿರುವ ಸಂಯುಕ್ತ ಗೊಬ್ಬರಗಳಾದ 20:20:0:13, 10:26:26, 12:32:16, 20:10:10, 14:28:14 ರಸಗೊಬ್ಬರಗಳನ್ನು ಬಳಸಬಹುದಾಗಿದೆ. ರೈತರು ಬಿತ್ತನೆಗೆ ಪೂರ್ವ ತಯ್ಯಾರಿ ಸಿದ್ದತೆ ಕೈಗೊಳ್ಳುತ್ತಿದ್ದು, ಬಿತ್ತನೆಗೆ ಭೂಮಿಯ ಹದ ಅರಿತು ಬಿತ್ತನೆ ಕಾರ್ಯ ಕೈಗೊಳ್ಳಬಹುದಾಗಿದೆ. ಬಿತ್ತನೆಗೆ ಮುನ್ನ ರೋಗ ಮತ್ತು ಕೀಟಗಳ ಹತೋಟಿಗೆ ಬೀಜಗಳ ಬೀಜೋಪಚಾರ ಕೈಗೊಳ್ಳಲು ತಾಂತ್ರಿಕ ಸಲಹೆಗಳನ್ನು ಅನುಸರಿಸಲು ಕೋರಲಾಗಿದೆ. </p>.<div><blockquote>ರೈತರು ಬಿತ್ತನೆ ಸಮಯದಲ್ಲಿ ಅನಗತ್ಯ ಗಡಿಬಿಡಿ ಮಾಡುವ ಬದಲಾಗಿ ಭೂಮಿಯ ತೇವಾಂಶ ನೋಡಿಕೊಂಡು ಬಿತ್ತನೆ ಮಾಡಬೇಕು</blockquote><span class="attribution">ಚಂದ್ರಕಾಂತ ಜೀವಣಗಿ ಸಹಾಯಕ ಕೃಷಿ ನಿರ್ದೇಶಕ ಜೇವರ್ಗಿ </span></div>.<div><blockquote>ಮುಂಗಾರು ಪೂರ್ವ ಮಳೆಯಿಂದ ಬಿತ್ತನೆಗೆ ಜಮೀನು ಹದ ಮಾಡಿಕೊಳ್ಳಲಾಗುತ್ತಿದೆ. ಹದಗೊಂಡ ಜಮೀನು ತೇವಾಂಶ ಹಿಡಿದಿಟ್ಟು ಕೊಳ್ಳುವುದರಿಂದ ಬಿತ್ತನೆಗೆ ಅನೂಕೂಲವಾಗಲಿದೆ</blockquote><span class="attribution"> ಮಲ್ಲಿಕಾರ್ಜುನ ಅವಂಟಿ ರೈತ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>