<p><strong>ಕಲಬುರಗಿ</strong>: ‘ಆಸಕ್ತಿಯಿಂದ ತರಬೇತಿ ಪಡೆದು ಸೂಕ್ತ ಉದ್ಯೋಗ ಪಡೆಯಬೇಕು. ಕೆಲಸವನ್ನು ನಿಷ್ಠೆಯಿಂದ ಮಾಡಬೇಕು’ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಹೇಳಿದರು.</p>.<p>ನಗರದ ಐಟಿಐ ಕಾಲೇಜು ಆವರಣದಲ್ಲಿ ಬುಧವಾರ ಸರ್ಕಾರಿ ಹಾಗೂ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಶಿಕ್ಷು ಹಾಗೂ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘25 ವರ್ಷಗಳ ಹಿಂದೆ ಐಟಿಐ ತರಬೇತಿ ಪಡೆದ ನನ್ನ ಸ್ನೇಹಿತರೊಬ್ಬರು ಪ್ರಾರಂಭದಲ್ಲಿ ₹2,000 ಸಂಬಳದೊಂದಿಗೆ ಉದ್ಯೋಗ ಆರಂಭಿಸಿದರು. ಅದರೊಂದಿಗೆ ಡಿಪ್ಲೋಮಾ ಕೋರ್ಸ್ ಮುಗಿಸಿ ಉದ್ಯೋಗದಲ್ಲಿ ಮುಂಬಡ್ತಿ ಹೊಂದಿ ಪ್ರಸ್ತುತ ಮಾಸಿಕ ₹2.5 ಲಕ್ಷ ಸಂಬಳ ಪಡೆಯುತ್ತಿದ್ದಾರೆ‘ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಮುರಳೀಧರ ರತ್ನಗಿರಿ, ‘ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸಿದ್ದು ಸುಮಾರು 800 ಅಭ್ಯರ್ಥಿಗಳು ಆನ್ಲೈನ್ನಲ್ಲಿ ನೋಂದಣಿ ಮಾಡಿಸಿಕೊಂಡಿದ್ದರು. ಸುಮಾರು 300ಕ್ಕೂ ಹೆಚ್ಚು ಅಭ್ಯರ್ಥಿಗಳು ಶಿಶಿಕ್ಷು/ಉದ್ಯೋಗ ಪಡೆಯುವುರು’ ಎಂದು ತಿಳಿಸಿದರು.</p>.<p>ವಿಭಾಗೀಯ ಕಚೇರಿಯ ಜಂಟಿ ನಿರ್ದೇಶಕ ರಾಜೇಶ ಬಾವಗಿ ಮಾತನಾಡಿ, ‘ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕ ಕೋರ್ಸ್ಗಳಾದ ಐಟಿಐ ವೃತ್ತಿಯನ್ನು ಅಭ್ಯಾಸ ಮಾಡಿ ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಿ. ಸ್ವಯಂ ಉದ್ಯೋಗದ ಅವಕಾಶಗಳು ಕೂಡ ಸಾಕಷ್ಟು ಇವೆ’ ಎಂದು ವಿವರಿಸಿದರು.</p>.<p>ಆಡಳಿತಾಧಿಕಾರಿ ಸುರೇಶ ವಗ್ಗೆ, ವಿಭಾಗೀಯ ಕಚೇರಿಯ ಉಪನಿರ್ದೇಶಕಿ ಡಾ.ರುಬಿನಾ ಪರ್ವೀನ್, ಪಿಯೂಶ್ ಪರಿಹಾರ, ಪ್ರಾಚಾರ್ಯ ಶಕೀಲ್ ಅನ್ಸಾರಿ, ಉದ್ಯಮಿ ವೀರೇಶ, ತರಬೇತಿ ಅಧಿಕಾರಿ ಭಾರತಿ ಮಹಾದೇವಪ್ಪ, ವಿಜಯಕುಮಾರ ಮೇಳಕುಂದಿ, ಬಸನಗೌಡ ಪಾಟೀಲ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಉದ್ಯೋಗದಾತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಆಸಕ್ತಿಯಿಂದ ತರಬೇತಿ ಪಡೆದು ಸೂಕ್ತ ಉದ್ಯೋಗ ಪಡೆಯಬೇಕು. ಕೆಲಸವನ್ನು ನಿಷ್ಠೆಯಿಂದ ಮಾಡಬೇಕು’ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಹೇಳಿದರು.</p>.<p>ನಗರದ ಐಟಿಐ ಕಾಲೇಜು ಆವರಣದಲ್ಲಿ ಬುಧವಾರ ಸರ್ಕಾರಿ ಹಾಗೂ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಶಿಕ್ಷು ಹಾಗೂ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘25 ವರ್ಷಗಳ ಹಿಂದೆ ಐಟಿಐ ತರಬೇತಿ ಪಡೆದ ನನ್ನ ಸ್ನೇಹಿತರೊಬ್ಬರು ಪ್ರಾರಂಭದಲ್ಲಿ ₹2,000 ಸಂಬಳದೊಂದಿಗೆ ಉದ್ಯೋಗ ಆರಂಭಿಸಿದರು. ಅದರೊಂದಿಗೆ ಡಿಪ್ಲೋಮಾ ಕೋರ್ಸ್ ಮುಗಿಸಿ ಉದ್ಯೋಗದಲ್ಲಿ ಮುಂಬಡ್ತಿ ಹೊಂದಿ ಪ್ರಸ್ತುತ ಮಾಸಿಕ ₹2.5 ಲಕ್ಷ ಸಂಬಳ ಪಡೆಯುತ್ತಿದ್ದಾರೆ‘ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಮುರಳೀಧರ ರತ್ನಗಿರಿ, ‘ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸಿದ್ದು ಸುಮಾರು 800 ಅಭ್ಯರ್ಥಿಗಳು ಆನ್ಲೈನ್ನಲ್ಲಿ ನೋಂದಣಿ ಮಾಡಿಸಿಕೊಂಡಿದ್ದರು. ಸುಮಾರು 300ಕ್ಕೂ ಹೆಚ್ಚು ಅಭ್ಯರ್ಥಿಗಳು ಶಿಶಿಕ್ಷು/ಉದ್ಯೋಗ ಪಡೆಯುವುರು’ ಎಂದು ತಿಳಿಸಿದರು.</p>.<p>ವಿಭಾಗೀಯ ಕಚೇರಿಯ ಜಂಟಿ ನಿರ್ದೇಶಕ ರಾಜೇಶ ಬಾವಗಿ ಮಾತನಾಡಿ, ‘ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕ ಕೋರ್ಸ್ಗಳಾದ ಐಟಿಐ ವೃತ್ತಿಯನ್ನು ಅಭ್ಯಾಸ ಮಾಡಿ ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಿ. ಸ್ವಯಂ ಉದ್ಯೋಗದ ಅವಕಾಶಗಳು ಕೂಡ ಸಾಕಷ್ಟು ಇವೆ’ ಎಂದು ವಿವರಿಸಿದರು.</p>.<p>ಆಡಳಿತಾಧಿಕಾರಿ ಸುರೇಶ ವಗ್ಗೆ, ವಿಭಾಗೀಯ ಕಚೇರಿಯ ಉಪನಿರ್ದೇಶಕಿ ಡಾ.ರುಬಿನಾ ಪರ್ವೀನ್, ಪಿಯೂಶ್ ಪರಿಹಾರ, ಪ್ರಾಚಾರ್ಯ ಶಕೀಲ್ ಅನ್ಸಾರಿ, ಉದ್ಯಮಿ ವೀರೇಶ, ತರಬೇತಿ ಅಧಿಕಾರಿ ಭಾರತಿ ಮಹಾದೇವಪ್ಪ, ವಿಜಯಕುಮಾರ ಮೇಳಕುಂದಿ, ಬಸನಗೌಡ ಪಾಟೀಲ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಉದ್ಯೋಗದಾತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>