ಕಾಲೇಜಿಗೆ ಮತ್ತು ಕಲಬುರ್ಗಿ ಜಿಲ್ಲೆಗೆ ಕೀರ್ತಿ ತಂದ ಪ್ರಯುಕ್ತ ಸಂಸ್ಥೆ ಸಂಸ್ಥಾಪಕ ಎಂ.ಬಿ. ಅಂಬಲಗಿ ಮತ್ತು ಕಾಲೇಜಿನ ಆಡಳಿತ ಮಂಡಳಿ ಅಭಿಲಾಶನ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ತರಬೇತಿದಾರ ಅಶೋಕ ಮಾರ್ಗದರ್ಶನ ಮಾಡುತ್ತಿದ್ದಾರೆ. ಅಭಿಲಾಷ್ ಚಿಂಚೋಳಿ ತಾಲ್ಲೂಕಿನ ಪಸ್ತಪುರ ಗ್ರಾಮದ ರೈತ ರಮೇಶ ತಳವಾರ ಅವರ ಮಗ. ವಿದ್ಯಾರ್ಥಿಗೆ ಸಂಸ್ಥೆ ಎಲ್ಲ ರೀತಿಯ ಸಹಾಯ ಮಾಡಲಿದೆ ಎಂದು ಸಂಸ್ಥೆ ಕಾರ್ಯದರ್ಶಿ ಗುರುಪ್ರಸಾದ ಅಂಬಲಗಿ ತಿಳಿಸಿದ್ದಾರೆ.