₹ 639 ಕೋಟಿ ವೆಚ್ಚದ ಏತ ನೀರಾವರಿ ಯೋಜನೆಯ ಮೊದಲ ಹಂತದ ಯಡ್ಡಳ್ಳಿ, ತರನಳ್ಳಿ ಏತ ನೀರಾವರಿ ಯೋಜನೆಯ ಮೊದಲ ಹಂತವಾಗಿ ಈಗ ₹ 143.80 ಕೋಟಿ ವೆಚ್ಚದ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗೆ ಈ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತಂದ ನಂತರ ₹ 639.30 ಕೋಟಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರು. ಈಗ ಬಸವರಾಜ ಬೊಮ್ಮಾಯಿ ಅವರು ಯೋಜನೆಗೆ ಅನುಮೋದನೆ ನೀಡಿದ್ದಾರೆ. ಶೀಘ್ರದಲ್ಲೇ ಅವರನ್ನು ಸೇಡಂಗೆ ಕರೆಯಿಸಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದ್ದಾರೆ.