ಹೊಲಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದರಿಂದ ತೊಗರಿ ಹಾಗೂ ಹತ್ತಿ ಬೆಳೆಗಳು ನೀರಲ್ಲಿ ನಿಂತಿದ್ದು, ರೈತರ ಚಿಂತೆಗೆ ಕಾರಣವಾಗಿದೆ. ಅಲ್ಲಲ್ಲಿ ತಗ್ಗುಪ್ರದೇಶಗಳಲ್ಲಿ ನೀರು ನಿಂತಿದ್ದು, ಕೆರೆಗಳಂತೆ ಭಾಸವಾಗುತ್ತಿದೆ. ಮಧ್ಯಾಹ್ನ ತಹಶೀಲ್ದಾರ್ ಉಮಾಕಾಂತ ಹಳ್ಳೆ ಬಳವಡ್ಗಿ ಗ್ರಾಮಕ್ಕೆ ಭೇಟಿ ನೀಡಿದ್ದು, ಸಂತ್ರಸ್ತರು ಉಳಿದುಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯ ಪಂಚಾಯತಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.