<p><strong>ಚಿತ್ತಾಪುರ:</strong> ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತಾಲ್ಲೂಕಿನಲ್ಲಿ ಹರಿಯುತ್ತಿರುವ ಕಾಗಿಣಾ ನದಿಯಲ್ಲಿ ಕಟ್ಟಿರುವ ದಂಡೋತಿ ಸೇತುವೆ ಸೇರಿದಂತೆ ಮುಡಬೂಳ, ಮುತ್ತಗಾ, ಶಂಕರವಾಡಿ, ಇಂಗಳಗಿ ಬಾಂದಾರು ಸೇತುವೆಗಳು ಮುಳಗಡೆಯಾಗಿದ್ದವು.</p>.<p>ದಂಡೋತಿ ಸೇತುವೆ ಮಾರ್ಗದ ಸಾರಿಗೆ ಸಂಚಾರ ಶುಕ್ರವಾರ ಮಧ್ಯರಾತ್ರಿಯಿಂದ ಸಂಪೂರ್ಣ ಬಂದ್ ಆಗಿತ್ತು. ಕಲಬುರಗಿಗೆ ಸಂಚರಿಸುತ್ತಿದ್ದ ಬಸ್ ಸಂಚಾರ ಶಹಾಬಾದ್ ಮಾರ್ಗಕ್ಕೆ, ಸೇಡಂ ಪಟ್ಟಣಕ್ಕೆ ಸಂಚರಿಸುತ್ತಿದ್ದ ಬಸ್ ಸಂಚಾರ ಮಳಖೇಡ ಮಾರ್ಗಕ್ಕೆ ಬದಲಾಯಿಸಲಾಗಿದೆ.</p>.<p>ಮುತ್ತಗಾ-ಕದ್ದರಗಿ ನಡುವಿನ ಬಾಂದಾರ ಸೇತುವೆ, ಮಲಕೂಡ ಗ್ರಾಮದ ಹತ್ತಿರ ಬೆಣ್ಣೆತೊರಾ ನದಿಗೆ ಕಟ್ಟಿರುವ ಬಾಂದಾರ ಸೇತುವೆ ಪ್ರವಾಹದಲ್ಲಿ ಮುಳುಗಡೆಯಾಗಿದ್ದವು.</p>.<p>ತಾಲ್ಲೂಕಿನ ಮುಡಬೂಳ ಗ್ರಾಮದ ಹತ್ತಿರ ನಾಗಾವಿ ಹಳ್ಳದಲ್ಲಿ ಪ್ರವಾಹ ಹೆಚ್ಚಾಗಿ ಮತ್ತು ಕಾಗಿಣಾ ನದಿಯ ಪ್ರವಾಹದ ಹಿನ್ನೀರಿನಿಂದ ಮತ್ತು ಮರಗೋಳ ನಾಲಾ ಪ್ರವಾಹದಿಂದ ರಸ್ತೆಯ ಮೇಲೆ ನೀರು ಹರಿಯುತ್ತಿದೆ. </p>.<p>ಇವಣಿ ಗ್ರಾಮದ ಹಳ್ಳದ ಪ್ರವಾಹ ಹಾಗೂ ಕಾಗಿಣಾ ನದಿಯ ಹಿನ್ನೀರು ಸೇರಿ ಸೇತುವೆ ಸಂಪೂರ್ಣ ಮುಳುಗಿದೆ. ಹೊಲಕ್ಕೆ ನುಗ್ಗಿದೆ.</p>.<p>ನಿದ್ದೆಗೆಟ್ಟು ಅಧಿಕಾರಿಗಳ ಅಲೆದಾಟ: ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಮತ್ತು ಬೆಣ್ಣೆತೊರಾ, ಕಾಗಿಣಾ, ಭೀಮಾ ನದಿಗಳು ಭೋರ್ಗರೆಯುತ್ತಿದ್ದು ಸಾರ್ವಜನಿಕರು ಅಪಾಯಕ್ಕೆ ಸಿಲುಕದಂತೆ ಎಚ್ಚರಿಕೆ ವಹಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ನಿದ್ದೆಗೆಟ್ಟು ರಾತ್ರಿಯಿಡಿ ಅಲೆದಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ:</strong> ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತಾಲ್ಲೂಕಿನಲ್ಲಿ ಹರಿಯುತ್ತಿರುವ ಕಾಗಿಣಾ ನದಿಯಲ್ಲಿ ಕಟ್ಟಿರುವ ದಂಡೋತಿ ಸೇತುವೆ ಸೇರಿದಂತೆ ಮುಡಬೂಳ, ಮುತ್ತಗಾ, ಶಂಕರವಾಡಿ, ಇಂಗಳಗಿ ಬಾಂದಾರು ಸೇತುವೆಗಳು ಮುಳಗಡೆಯಾಗಿದ್ದವು.</p>.<p>ದಂಡೋತಿ ಸೇತುವೆ ಮಾರ್ಗದ ಸಾರಿಗೆ ಸಂಚಾರ ಶುಕ್ರವಾರ ಮಧ್ಯರಾತ್ರಿಯಿಂದ ಸಂಪೂರ್ಣ ಬಂದ್ ಆಗಿತ್ತು. ಕಲಬುರಗಿಗೆ ಸಂಚರಿಸುತ್ತಿದ್ದ ಬಸ್ ಸಂಚಾರ ಶಹಾಬಾದ್ ಮಾರ್ಗಕ್ಕೆ, ಸೇಡಂ ಪಟ್ಟಣಕ್ಕೆ ಸಂಚರಿಸುತ್ತಿದ್ದ ಬಸ್ ಸಂಚಾರ ಮಳಖೇಡ ಮಾರ್ಗಕ್ಕೆ ಬದಲಾಯಿಸಲಾಗಿದೆ.</p>.<p>ಮುತ್ತಗಾ-ಕದ್ದರಗಿ ನಡುವಿನ ಬಾಂದಾರ ಸೇತುವೆ, ಮಲಕೂಡ ಗ್ರಾಮದ ಹತ್ತಿರ ಬೆಣ್ಣೆತೊರಾ ನದಿಗೆ ಕಟ್ಟಿರುವ ಬಾಂದಾರ ಸೇತುವೆ ಪ್ರವಾಹದಲ್ಲಿ ಮುಳುಗಡೆಯಾಗಿದ್ದವು.</p>.<p>ತಾಲ್ಲೂಕಿನ ಮುಡಬೂಳ ಗ್ರಾಮದ ಹತ್ತಿರ ನಾಗಾವಿ ಹಳ್ಳದಲ್ಲಿ ಪ್ರವಾಹ ಹೆಚ್ಚಾಗಿ ಮತ್ತು ಕಾಗಿಣಾ ನದಿಯ ಪ್ರವಾಹದ ಹಿನ್ನೀರಿನಿಂದ ಮತ್ತು ಮರಗೋಳ ನಾಲಾ ಪ್ರವಾಹದಿಂದ ರಸ್ತೆಯ ಮೇಲೆ ನೀರು ಹರಿಯುತ್ತಿದೆ. </p>.<p>ಇವಣಿ ಗ್ರಾಮದ ಹಳ್ಳದ ಪ್ರವಾಹ ಹಾಗೂ ಕಾಗಿಣಾ ನದಿಯ ಹಿನ್ನೀರು ಸೇರಿ ಸೇತುವೆ ಸಂಪೂರ್ಣ ಮುಳುಗಿದೆ. ಹೊಲಕ್ಕೆ ನುಗ್ಗಿದೆ.</p>.<p>ನಿದ್ದೆಗೆಟ್ಟು ಅಧಿಕಾರಿಗಳ ಅಲೆದಾಟ: ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಮತ್ತು ಬೆಣ್ಣೆತೊರಾ, ಕಾಗಿಣಾ, ಭೀಮಾ ನದಿಗಳು ಭೋರ್ಗರೆಯುತ್ತಿದ್ದು ಸಾರ್ವಜನಿಕರು ಅಪಾಯಕ್ಕೆ ಸಿಲುಕದಂತೆ ಎಚ್ಚರಿಕೆ ವಹಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ನಿದ್ದೆಗೆಟ್ಟು ರಾತ್ರಿಯಿಡಿ ಅಲೆದಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>