<p><strong>ಕಲಬುರಗಿ</strong>: ನಗರದ ಆಳಂದ ಚೆಕ್ಪೋಸ್ಟ್ ಸಮೀಪದ ಕೃಷಿ ಕಾಲೇಜು ಆವರಣದಲ್ಲಿ ನಡೆಯುತ್ತಿರುವ 16ನೇ ಅಂತರ ಕಾಲೇಜುಗಳ ಯುವಜನೋತ್ಸವದಲ್ಲಿ ಎರಡನೇ ದಿನವಾದ ಶನಿವಾರ ವಿದ್ಯಾರ್ಥಿಗಳು ಮಣ್ಣಿನಲ್ಲಿ ತಾಯಿ–ಮಗುವನ್ನು ಅರಳಿಸಿದರು.</p>.<p>ಮಣ್ಣಿನ ಕಲಾಕೃತಿ ತಯಾರಿಕೆ ಸ್ಪರ್ಧೆಗೆ ‘ತಾಯಿ ಮತ್ತು ಮಗು’ ವಿಷಯ ನೀಡಲಾಗಿತ್ತು. ಕಲಾಕೃತಿಗಳು ಗಮನಸೆಳೆದವು. ‘ವೃದ್ಧಾಶ್ರಮ ಮತ್ತು ಮೊಮ್ಮಕ್ಕಳ ಭೇಟಿ’ ವಿಷಯದ ಕುರಿತು ಏಕಪಾತ್ರಾಭಿನಯ ಸ್ಪರ್ಧೆ ನಡೆಯಿತು. </p>.<p>ಭಾಷಣ, ಆಶು ಭಾಷಣ ಸ್ಪರ್ಧೆಯನ್ನೂ ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.</p>.<p>ಸ್ಥಳದಲ್ಲಿಯೇ ವಿಷಯ ನೀಡಿ ಅದರ ಕುರಿತು ಮಾತನಾಡುವ ಹಾಗೂ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಏಳು ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಿ ಕಲಾತ್ಮಕವಾಗಿ ರಂಗೋಲಿ ಬಿಡಿಸಿದರು. ಮಹನೀಯರ, ಪ್ರಕೃತಿಯ ಚಿತ್ರಗಳನ್ನು ರಂಗೋಲಿಯಲ್ಲಿ ಅರಳಿಸಿದರು.</p>.<p>ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆಯಲ್ಲೂ ವಿದ್ಯಾರ್ಥಿಗಳು ಉತ್ಸಾಹ ತೋರಿಸಿದರು. </p>.<p>ಭಾನುವಾರ (ಡಿ.28) ನಡೆಯುವ ರಸಪ್ರಶ್ನೆ ಸ್ಪರ್ಧೆಗೆ ಪೂರ್ವಭಾವಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ಆಳಂದ ಚೆಕ್ಪೋಸ್ಟ್ ಸಮೀಪದ ಕೃಷಿ ಕಾಲೇಜು ಆವರಣದಲ್ಲಿ ನಡೆಯುತ್ತಿರುವ 16ನೇ ಅಂತರ ಕಾಲೇಜುಗಳ ಯುವಜನೋತ್ಸವದಲ್ಲಿ ಎರಡನೇ ದಿನವಾದ ಶನಿವಾರ ವಿದ್ಯಾರ್ಥಿಗಳು ಮಣ್ಣಿನಲ್ಲಿ ತಾಯಿ–ಮಗುವನ್ನು ಅರಳಿಸಿದರು.</p>.<p>ಮಣ್ಣಿನ ಕಲಾಕೃತಿ ತಯಾರಿಕೆ ಸ್ಪರ್ಧೆಗೆ ‘ತಾಯಿ ಮತ್ತು ಮಗು’ ವಿಷಯ ನೀಡಲಾಗಿತ್ತು. ಕಲಾಕೃತಿಗಳು ಗಮನಸೆಳೆದವು. ‘ವೃದ್ಧಾಶ್ರಮ ಮತ್ತು ಮೊಮ್ಮಕ್ಕಳ ಭೇಟಿ’ ವಿಷಯದ ಕುರಿತು ಏಕಪಾತ್ರಾಭಿನಯ ಸ್ಪರ್ಧೆ ನಡೆಯಿತು. </p>.<p>ಭಾಷಣ, ಆಶು ಭಾಷಣ ಸ್ಪರ್ಧೆಯನ್ನೂ ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.</p>.<p>ಸ್ಥಳದಲ್ಲಿಯೇ ವಿಷಯ ನೀಡಿ ಅದರ ಕುರಿತು ಮಾತನಾಡುವ ಹಾಗೂ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಏಳು ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಿ ಕಲಾತ್ಮಕವಾಗಿ ರಂಗೋಲಿ ಬಿಡಿಸಿದರು. ಮಹನೀಯರ, ಪ್ರಕೃತಿಯ ಚಿತ್ರಗಳನ್ನು ರಂಗೋಲಿಯಲ್ಲಿ ಅರಳಿಸಿದರು.</p>.<p>ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆಯಲ್ಲೂ ವಿದ್ಯಾರ್ಥಿಗಳು ಉತ್ಸಾಹ ತೋರಿಸಿದರು. </p>.<p>ಭಾನುವಾರ (ಡಿ.28) ನಡೆಯುವ ರಸಪ್ರಶ್ನೆ ಸ್ಪರ್ಧೆಗೆ ಪೂರ್ವಭಾವಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>