ಬುಧವಾರ, 1 ಅಕ್ಟೋಬರ್ 2025
×
ADVERTISEMENT
ADVERTISEMENT

ಕಲಬುರಗಿ: ಬೆಳೆ ಹಾನಿ ವೀಕ್ಷಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Published : 1 ಅಕ್ಟೋಬರ್ 2025, 8:10 IST
Last Updated : 1 ಅಕ್ಟೋಬರ್ 2025, 8:10 IST
ಫಾಲೋ ಮಾಡಿ
Comments
‘ವಿರೋಧ ಪಕ್ಷದವರು ಈಗ ಎದ್ದಿದ್ದಾರೆ’
‘ವಿರೋಧ ಪಕ್ಷದವರು ಈತನಕ ಮಲಗಿದ್ದರು. ಈಗ ಎದ್ದಿದ್ದಾರೆ. ನಾವು ತಿಂಗಳಿಂದ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದೇವೆ. ಶಾಸಕರು ಸಚಿವರು ಹಾನಿಯಾದಲ್ಲೆ ಭೇಟಿ ಕೊಟ್ಟು ರೈತರಿಗೆ ಸ್ಪಂದಿಸುತ್ತಿದ್ದಾರೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸರಣಿ ಸಭೆ ವಿಡಿಯೊ ಸಂವಾದ ಮಾಡುತ್ತಿದ್ದೇವೆ. ಬಿಜೆಪಿಯ ಆರ್‌.ಅಶೋಕ ವಿಜಯೇಂದ್ರ ಹತ್ತಿರ ಪಾಠ ಕಲಿತು ರೈತರ ಬಗೆಗೆ ನಾವು ಕಾಳಜಿ ವಹಿಸುವ ಅಗತ್ಯವಿಲ್ಲ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.  ‘ಬೆಳೆ ಹಾನಿ ಪ್ರಮಾಣ ನಿತ್ಯ ಹೆಚ್ಚುತ್ತಿದ್ದು ಪ್ರಾಥಮಿಕ ವರದಿ ಪ್ರಕಾರ ಈತನಕ ರಾಜ್ಯದಲ್ಲಿ ಅಂದಾಜು 9 ಲಕ್ಷ ಹೆಕ್ಟೇರ್‌ಗಳಷ್ಟು ಹಾನಿಯಾಗಿದೆ. ಈ ಪೈಕಿ ಬೀದರ್ ಕಲಬುರಗಿ ಯಾದಗಿರಿ ರಾಯಚೂರು ಜಿಲ್ಲೆಗಳಲ್ಲೇ ಬಹುತೇಕ 6–7 ಲಕ್ಷ ಹೆಕ್ಟೇರ್‌ ಪ್ರದೇಶಗಳಲ್ಲಿ ಹಾನಿ ಅಂದಾಜಿಸಲಾಗಿದೆ’ ಎಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT