<p>ಕಲಬುರಗಿ: ‘ವಿಜಯಲಕ್ಷ್ಮಿ ವೃದ್ಧಾಶ್ರಮಕ್ಕೆ ಸಂಬಂಧಿಸಿದಂತೆ ಅಂಬಾಜಿ ಮೇಟಿ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ’ ಎಂದು ದಲಿತ ಮಾದಿಗ ಸಮನ್ವಯ ಸಮಿತಿಯ ಜಿಲ್ಲಾ ಮಾಧ್ಯಮ ವಕ್ತಾರ ರವಿ ಎನ್.ಬೆಳಮಗಿ ಪ್ರತಿಪಾದಿಸಿದರು.</p>.<p>‘ವೃದ್ಧಾಶ್ರಮಕ್ಕೆ ಸಂಬಂಧಿಸಿದಂತೆ ದಲಿತ ಮಾದಿಗ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ತಾರಫೈಲ್ ಹಾಗೂ ಅವರ ಕುಟುಂಬದ ವಿರುದ್ಧ ಮೇಟಿ ಯಾವುದೇ ಪೂರಕ ದಾಖಲೆಗಳಿಲ್ಲದೇ ಆರೋಪ ಮಾಡುತ್ತಿರುವುದು ಖಂಡನೀಯ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮೇಟಿ ಆರೋಪಗಳಿಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಟಿ ಆರೋಪಗಳು ದುರುದ್ದೇಶದಿಂದ ಕೂಡಿದ್ದು, ವೃದ್ಧಾಶ್ರಮವು ಸರಿಯಾಗಿ ನಡೆಯುತ್ತಿರುವುದಾಗಿ ಬೆಂಗಳೂರಿನ ಮೇಲಾಧಿಕಾರಿಗಳಿಗೆ ವರದಿಯನ್ನೂ ನೀಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಕಾಶ ಮಾಳಗೆ, ಅರ್ಜುನ ಕಾಳನೂರ, ಬಸವರಾಜ ಅಯ್ಯಳಕರ, ಬಾಲರಾಜ ಗುರುಶಿಣಗಿ, ಸೂರಜ ಬೆಳಗುಂದಿ, ರಜನಿಕಾಂತ ಹಾಗರಗಿ, ರಾಜು ಯಾದಗಿರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-34-1020640742</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ವಿಜಯಲಕ್ಷ್ಮಿ ವೃದ್ಧಾಶ್ರಮಕ್ಕೆ ಸಂಬಂಧಿಸಿದಂತೆ ಅಂಬಾಜಿ ಮೇಟಿ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ’ ಎಂದು ದಲಿತ ಮಾದಿಗ ಸಮನ್ವಯ ಸಮಿತಿಯ ಜಿಲ್ಲಾ ಮಾಧ್ಯಮ ವಕ್ತಾರ ರವಿ ಎನ್.ಬೆಳಮಗಿ ಪ್ರತಿಪಾದಿಸಿದರು.</p>.<p>‘ವೃದ್ಧಾಶ್ರಮಕ್ಕೆ ಸಂಬಂಧಿಸಿದಂತೆ ದಲಿತ ಮಾದಿಗ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ತಾರಫೈಲ್ ಹಾಗೂ ಅವರ ಕುಟುಂಬದ ವಿರುದ್ಧ ಮೇಟಿ ಯಾವುದೇ ಪೂರಕ ದಾಖಲೆಗಳಿಲ್ಲದೇ ಆರೋಪ ಮಾಡುತ್ತಿರುವುದು ಖಂಡನೀಯ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮೇಟಿ ಆರೋಪಗಳಿಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಟಿ ಆರೋಪಗಳು ದುರುದ್ದೇಶದಿಂದ ಕೂಡಿದ್ದು, ವೃದ್ಧಾಶ್ರಮವು ಸರಿಯಾಗಿ ನಡೆಯುತ್ತಿರುವುದಾಗಿ ಬೆಂಗಳೂರಿನ ಮೇಲಾಧಿಕಾರಿಗಳಿಗೆ ವರದಿಯನ್ನೂ ನೀಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಕಾಶ ಮಾಳಗೆ, ಅರ್ಜುನ ಕಾಳನೂರ, ಬಸವರಾಜ ಅಯ್ಯಳಕರ, ಬಾಲರಾಜ ಗುರುಶಿಣಗಿ, ಸೂರಜ ಬೆಳಗುಂದಿ, ರಜನಿಕಾಂತ ಹಾಗರಗಿ, ರಾಜು ಯಾದಗಿರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-34-1020640742</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>