<p>ಕಲಬುರಗಿ: ನಗರದಲ್ಲಿ 2024ರ ಸೆಪ್ಟೆಂಬರ್ 17ರಂದು ನಡೆದ ಸಚಿವ ಸಂಪುಟದಲ್ಲಿ ಜಿಲ್ಲೆಯಲ್ಲಿ 515 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದ್ದರೂ ಇನ್ನೂ ಒಂದು ಅಂಗನವಾಡಿಯ ಕಟ್ಟಡ ನಿರ್ಮಾಣ ಕಾರ್ಯವೂ ಶುರುವಾಗಿಲ್ಲ.</p>.<p>ಇದರಿಂದಾಗಿ ಮಕ್ಕಳು ಇನ್ನೂ ಶಿಥಿಲಾವಸ್ಥೆಯಲ್ಲಿರುವ, ಮೂಲಸೌಕರ್ಯಗಳಿಂದ ಬಳಲುತ್ತಿರುವ ಬಾಡಿಗೆ ಕಟ್ಟಡದಲ್ಲಿಯೇ ತಾತ್ಕಾಲಿಕವಾಗಿ ಕಲಿಕಾ ಚಟುವಟಿಕೆ ಮಾಡಬೇಕಿದೆ.</p>.<p>ಕೇಂದ್ರ ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್)ಯಡಿ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 3,420 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಪೈಕಿ 1960 ಅಂಗನವಾಡಿಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದವು ಶಾಲಾ ಕಟ್ಟಡ, ಸಮುದಾಯ ಭವನ, ಪಂಚಾಯಿತಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, 1,159 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿವೆ.</p>.<p>ಈ ಸಮಸ್ಯೆಯನ್ನು ತಕ್ಕಮಟ್ಟಿಗೆ ಪರಿಹರಿಸುವ ನಿಟ್ಟಿನಲ್ಲಿ ಹಿಂದಿನ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಆಸಕ್ತಿ ವಹಿಸಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸತತವಾಗಿ ಸಭೆ ನಡೆಸಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಜಾಗ ಗುರುತಿಸಿದ್ದರು. ಅದಾದ ಬಳಿಕ 515 ಅಂಗನವಾಡಿಗಳಿಗೆ ಆರ್ಥಿಕ ನೆರವು ನೀಡುವಂತೆ ಪ್ರಸ್ತಾವ ಸಲ್ಲಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಿದ್ದ ಸಂಪುಟ ಸಭೆಯು ಈ ಪ್ರಸ್ತಾವವನ್ನು ಅನುಮೋದಿಸಿತ್ತು.</p>.<p>ಈ ಕಟ್ಟಡಗಳಿಗೆ ಐಸಿಡಿಎಸ್ ಯೋಜನೆಯಡಿ ₹7 ಲಕ್ಷ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (ಕೆಕೆಆರ್ಡಿಬಿ) ₹8 ಲಕ್ಷ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ₹8 ಲಕ್ಷ ಸೇರಿದಂತೆ ಒಟ್ಟು ₹23 ಲಕ್ಷ ವೆಚ್ಚ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಐಸಿಡಿಎಸ್ ಮತ್ತು ನರೇಗಾ ಯೋಜನೆಯಡಿ ಹಣಕಾಸು ನೆರವು ಒದಗಿಸಲು ಅಧಿಕಾರಿಗಳು ಹಿಂದೇಟು ಹಾಕಿದರು. ಅಲ್ಲದೇ, ಇಡೀ ಮೊತ್ತವನ್ನು ಕೆಕೆಆರ್ಡಿಬಿಯಿಂದಲೇ ಭರಿಸಬೇಕು ಎಂದು ಪಟ್ಟು ಹಿಡಿದರು. ಇಷ್ಟೂ ಮೊತ್ತವನ್ನು ಭರಿಸಲು ಮಂಡಳಿ ಒಪ್ಪಿಗೆ ನೀಡಲಿಲ್ಲ. ಹೀಗಾಗಿ, ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯ ನನೆಗುದಿಗೆ ಬಿತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ಬದಲಾದ ಪರಿಸ್ಥಿತಿಯಲ್ಲಿ ನರೇಗಾ ಯೋಜನೆ ಸ್ಥಗಿತಗೊಂಡು ವಿಬಿ ಜಿ ರಾಮ್ ಜಿ ಯೋಜನೆ ಜಾರಿಗೆ ಬರಲಿದೆ. ಹೀಗಾಗಿ, ನರೇಗಾದಿಂದ ಪ್ರತಿ ಅಂಗನವಾಡಿಗೆ ಬರಬೇಕಿದ್ದ ₹8 ಲಕ್ಷ ಹಣ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ, ಹಣ ಹೊಂದಿಸುವುದು ಹೇಗೆ ಎಂಬ ಚಿಂತೆಯಲ್ಲಿ ಅಧಿಕಾರಿಗಳು ಇದ್ದಾರೆ.</p><p><strong>‘119 ಅಂಗನವಾಡಿಗಳಿಗೆ ಅನುದಾನ’</strong></p><p>‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಿಂದ ಜಿಲ್ಲೆಯಲ್ಲಿ ಲಭ್ಯವಿರುವ 663 ನಿವೇಶನಗಳ ಮಾಹಿತಿಯನ್ನು ಕೇಳಿದ್ದರು. ಅದನ್ನು ಕಳುಹಿಸಿಕೊಟ್ಟಿದ್ದೇವೆ. ಸಚಿವ ಸಂಪುಟದಲ್ಲಿ ಅನುಮೋದನೆಯಾಗಿದ್ದ 515 ನಿವೇಶನಗಳ ಪೈಕಿ 119 ಅಂಗನವಾಡಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯ ಅನುದಾನ ಬಳಸಿಕೊಂಡು ನಿರ್ಮಿಸಲು ಅನುಮೋದನೆ ಸಿಕ್ಕಿದೆ. ಮೊದಲಿನ ಅಂದಾಜಿನಂತೆ ಪ್ರತಿ ಅಂಗನವಾಡಿಗೆ ₹23 ಲಕ್ಷ ಬಿಡುಗಡೆಯಾಗಬೇಕಿತ್ತು. ಎಸ್ಸಿಎಸ್ಪಿ ಯೋಜನೆಯಡಿ ₹20 ಲಕ್ಷಕ್ಕೆ ಮಾತ್ರ ಅನುಮೋದನೆ ಸಿಕ್ಕಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಕುಮಾರ ರಾಠೋಡ ‘ಪ್ರಜಾವಾಣಿ’ಗೆ ತಿಳಿಸಿದರು</p>.<div><blockquote>ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿಗಳಿಗೆ ತ್ವರಿತಗತಿಯಲ್ಲಿ ಹಣ ಬಿಡುಗಡೆ ಮಾಡಬೇಕು. ಈಗಾಗಲೇ ಮಳೆಗಾಲ ಶುರುವಾಗಿರುವುದರಿಂದ ಮಕ್ಕಳಿಗೆ ಕುಳಿತುಕೊಳ್ಳಲು ಹಾಗೂ ಕೇಂದ್ರ ನಡೆಸಿಕೊಂಡು ಹೋಗಲು ತೊಂದರೆಯಾಗುತ್ತಿದೆ <br></blockquote><span class="attribution">ಶಾಂತಾ ಸರಡಗಿ ಅಂಗನವಾಡಿ ಶಿಕ್ಷಕಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-34-772970936</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ನಗರದಲ್ಲಿ 2024ರ ಸೆಪ್ಟೆಂಬರ್ 17ರಂದು ನಡೆದ ಸಚಿವ ಸಂಪುಟದಲ್ಲಿ ಜಿಲ್ಲೆಯಲ್ಲಿ 515 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದ್ದರೂ ಇನ್ನೂ ಒಂದು ಅಂಗನವಾಡಿಯ ಕಟ್ಟಡ ನಿರ್ಮಾಣ ಕಾರ್ಯವೂ ಶುರುವಾಗಿಲ್ಲ.</p>.<p>ಇದರಿಂದಾಗಿ ಮಕ್ಕಳು ಇನ್ನೂ ಶಿಥಿಲಾವಸ್ಥೆಯಲ್ಲಿರುವ, ಮೂಲಸೌಕರ್ಯಗಳಿಂದ ಬಳಲುತ್ತಿರುವ ಬಾಡಿಗೆ ಕಟ್ಟಡದಲ್ಲಿಯೇ ತಾತ್ಕಾಲಿಕವಾಗಿ ಕಲಿಕಾ ಚಟುವಟಿಕೆ ಮಾಡಬೇಕಿದೆ.</p>.<p>ಕೇಂದ್ರ ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್)ಯಡಿ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 3,420 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಪೈಕಿ 1960 ಅಂಗನವಾಡಿಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದವು ಶಾಲಾ ಕಟ್ಟಡ, ಸಮುದಾಯ ಭವನ, ಪಂಚಾಯಿತಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, 1,159 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿವೆ.</p>.<p>ಈ ಸಮಸ್ಯೆಯನ್ನು ತಕ್ಕಮಟ್ಟಿಗೆ ಪರಿಹರಿಸುವ ನಿಟ್ಟಿನಲ್ಲಿ ಹಿಂದಿನ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಆಸಕ್ತಿ ವಹಿಸಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸತತವಾಗಿ ಸಭೆ ನಡೆಸಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಜಾಗ ಗುರುತಿಸಿದ್ದರು. ಅದಾದ ಬಳಿಕ 515 ಅಂಗನವಾಡಿಗಳಿಗೆ ಆರ್ಥಿಕ ನೆರವು ನೀಡುವಂತೆ ಪ್ರಸ್ತಾವ ಸಲ್ಲಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಿದ್ದ ಸಂಪುಟ ಸಭೆಯು ಈ ಪ್ರಸ್ತಾವವನ್ನು ಅನುಮೋದಿಸಿತ್ತು.</p>.<p>ಈ ಕಟ್ಟಡಗಳಿಗೆ ಐಸಿಡಿಎಸ್ ಯೋಜನೆಯಡಿ ₹7 ಲಕ್ಷ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (ಕೆಕೆಆರ್ಡಿಬಿ) ₹8 ಲಕ್ಷ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ₹8 ಲಕ್ಷ ಸೇರಿದಂತೆ ಒಟ್ಟು ₹23 ಲಕ್ಷ ವೆಚ್ಚ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಐಸಿಡಿಎಸ್ ಮತ್ತು ನರೇಗಾ ಯೋಜನೆಯಡಿ ಹಣಕಾಸು ನೆರವು ಒದಗಿಸಲು ಅಧಿಕಾರಿಗಳು ಹಿಂದೇಟು ಹಾಕಿದರು. ಅಲ್ಲದೇ, ಇಡೀ ಮೊತ್ತವನ್ನು ಕೆಕೆಆರ್ಡಿಬಿಯಿಂದಲೇ ಭರಿಸಬೇಕು ಎಂದು ಪಟ್ಟು ಹಿಡಿದರು. ಇಷ್ಟೂ ಮೊತ್ತವನ್ನು ಭರಿಸಲು ಮಂಡಳಿ ಒಪ್ಪಿಗೆ ನೀಡಲಿಲ್ಲ. ಹೀಗಾಗಿ, ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯ ನನೆಗುದಿಗೆ ಬಿತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ಬದಲಾದ ಪರಿಸ್ಥಿತಿಯಲ್ಲಿ ನರೇಗಾ ಯೋಜನೆ ಸ್ಥಗಿತಗೊಂಡು ವಿಬಿ ಜಿ ರಾಮ್ ಜಿ ಯೋಜನೆ ಜಾರಿಗೆ ಬರಲಿದೆ. ಹೀಗಾಗಿ, ನರೇಗಾದಿಂದ ಪ್ರತಿ ಅಂಗನವಾಡಿಗೆ ಬರಬೇಕಿದ್ದ ₹8 ಲಕ್ಷ ಹಣ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ, ಹಣ ಹೊಂದಿಸುವುದು ಹೇಗೆ ಎಂಬ ಚಿಂತೆಯಲ್ಲಿ ಅಧಿಕಾರಿಗಳು ಇದ್ದಾರೆ.</p><p><strong>‘119 ಅಂಗನವಾಡಿಗಳಿಗೆ ಅನುದಾನ’</strong></p><p>‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಿಂದ ಜಿಲ್ಲೆಯಲ್ಲಿ ಲಭ್ಯವಿರುವ 663 ನಿವೇಶನಗಳ ಮಾಹಿತಿಯನ್ನು ಕೇಳಿದ್ದರು. ಅದನ್ನು ಕಳುಹಿಸಿಕೊಟ್ಟಿದ್ದೇವೆ. ಸಚಿವ ಸಂಪುಟದಲ್ಲಿ ಅನುಮೋದನೆಯಾಗಿದ್ದ 515 ನಿವೇಶನಗಳ ಪೈಕಿ 119 ಅಂಗನವಾಡಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯ ಅನುದಾನ ಬಳಸಿಕೊಂಡು ನಿರ್ಮಿಸಲು ಅನುಮೋದನೆ ಸಿಕ್ಕಿದೆ. ಮೊದಲಿನ ಅಂದಾಜಿನಂತೆ ಪ್ರತಿ ಅಂಗನವಾಡಿಗೆ ₹23 ಲಕ್ಷ ಬಿಡುಗಡೆಯಾಗಬೇಕಿತ್ತು. ಎಸ್ಸಿಎಸ್ಪಿ ಯೋಜನೆಯಡಿ ₹20 ಲಕ್ಷಕ್ಕೆ ಮಾತ್ರ ಅನುಮೋದನೆ ಸಿಕ್ಕಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಕುಮಾರ ರಾಠೋಡ ‘ಪ್ರಜಾವಾಣಿ’ಗೆ ತಿಳಿಸಿದರು</p>.<div><blockquote>ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿಗಳಿಗೆ ತ್ವರಿತಗತಿಯಲ್ಲಿ ಹಣ ಬಿಡುಗಡೆ ಮಾಡಬೇಕು. ಈಗಾಗಲೇ ಮಳೆಗಾಲ ಶುರುವಾಗಿರುವುದರಿಂದ ಮಕ್ಕಳಿಗೆ ಕುಳಿತುಕೊಳ್ಳಲು ಹಾಗೂ ಕೇಂದ್ರ ನಡೆಸಿಕೊಂಡು ಹೋಗಲು ತೊಂದರೆಯಾಗುತ್ತಿದೆ <br></blockquote><span class="attribution">ಶಾಂತಾ ಸರಡಗಿ ಅಂಗನವಾಡಿ ಶಿಕ್ಷಕಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-34-772970936</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>