<p>ಕಲಬುರಗಿ: ‘ಕಲೆಗಳು, ದೈನಂದಿನ ಒತ್ತಡಗಳಿಂದ ಮುಕ್ತಿ ಹೊಂದಲು ಸಹಾಯಕವಾಗುತ್ತವೆ’ ಎಂದು ಬಿಜೆಪಿ ಮಹಿಳಾ ಮೋರ್ಚಾ ಕಲಬುರಗಿ ದಕ್ಷಿಣ ವಲಯ ಅಧ್ಯಕ್ಷೆ ಜ್ಯೋತಿ ಪಾಟೀಲ ಹೇಳಿದರು.</p>.<p>ಜನಪ್ರಿಯ ಸಾಂಸ್ಕೃತಿಕ ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ರಂಗಾಯಣದ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ‘ಜನಪ್ರಿಯ ಸಾಂಸ್ಕೃತಿಕ ಸಂಭ್ರಮೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಒತ್ತಡ ನಿವಾರಣೆಗೆ ಇಂಥ ಕಾರ್ಯಕ್ರಮಗಳು ಅಗತ್ಯ’ ಎಂದರು.</p>.<p>ನಟ ವಿಜಯಕುಮಾರ ಗೋತಗಿ ಮಾತನಾಡಿ, ‘ಕಲೆಗಳು ಮನರಂಜನೆಯ ಜೊತೆಗೆ ಮನೋವಿಕಾಸಕ್ಕೆ ಬೇಕಾದ ಅಂಶಗಳನ್ನು ಒದಗಿಸುವ ಕೆಲಸ ಮಾಡುತ್ತವೆ. ತಿಂಗಳಿಗೆ ಒಮ್ಮೆಯಾದರೂ ಇಂಥ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಡೀ ಕುಟುಂಬದೊಂದಿಗೆ ಪಾಲ್ಗೊಳ್ಳಬೇಕು’ ಎಂದು ಅವರು ಹೇಳಿದರು.</p>.<p>ಶಾಂತಲಿಂಗಯ್ಯ ಎಸ್.ಮಠಪತಿ ಅಧ್ಯಕ್ಷತೆ ವಹಿಸಿದ್ದರು. ವೈದ್ಯೆ ವೀಣಾ ಪಾಟೀಲ ಮಾತನಾಡಿದರು.</p>.<p>ಬಸ್ಸಯ್ಯ ಬಿ.ಗುತ್ತೇದಾರ ಸುಗಮ ಸಂಗೀತ, ದತ್ತರಾಜ ಕಲ್ಲಶೆಟ್ಟಿ ತತ್ವಪದ ಗಾಯನ ಹಾಗೂ ಸೈದಪ್ಪ ಸಪ್ಪನಗೋಳ ಅವರು ಜನಪದ ಗಾಯನ, ಅಶ್ವಿನಿ ಆರ್.ಮೂಲಗೆ ದಾಸವಾಣಿ ಹಾಡಿದರು.</p>.<p>ಜನಪ್ರಿಯ ಸಂಗೀತ ಹಾಗೂ ನೃತ್ಯ ಶಾಲೆಯ ಮಕ್ಕಳು ಜಾನಪದ ನೃತ್ಯ, ಶಾಸ್ತ್ರೀಯ ನೃತ್ಯ, ವಚನ ಗಾಯನ, ಭಕ್ತಿಗೀತೆ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<p>ಅವಧೂತ ಪಾಟೀಲ ತಬಲಾ ಸಾಥ್ ನೀಡಿದರು. ರಂಗಕರ್ಮಿ ಕಲ್ಯಾಣಿ ಭಜಂತ್ರಿ ಉಪಸ್ಥಿತರಿದರು. ಗಂಗೋತ್ರಿ ಮಠಪತಿ ನಿರೂಪಿಸಿದರು. ವೇದಕಂಠ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-34-1329073428</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಕಲೆಗಳು, ದೈನಂದಿನ ಒತ್ತಡಗಳಿಂದ ಮುಕ್ತಿ ಹೊಂದಲು ಸಹಾಯಕವಾಗುತ್ತವೆ’ ಎಂದು ಬಿಜೆಪಿ ಮಹಿಳಾ ಮೋರ್ಚಾ ಕಲಬುರಗಿ ದಕ್ಷಿಣ ವಲಯ ಅಧ್ಯಕ್ಷೆ ಜ್ಯೋತಿ ಪಾಟೀಲ ಹೇಳಿದರು.</p>.<p>ಜನಪ್ರಿಯ ಸಾಂಸ್ಕೃತಿಕ ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ರಂಗಾಯಣದ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ‘ಜನಪ್ರಿಯ ಸಾಂಸ್ಕೃತಿಕ ಸಂಭ್ರಮೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಒತ್ತಡ ನಿವಾರಣೆಗೆ ಇಂಥ ಕಾರ್ಯಕ್ರಮಗಳು ಅಗತ್ಯ’ ಎಂದರು.</p>.<p>ನಟ ವಿಜಯಕುಮಾರ ಗೋತಗಿ ಮಾತನಾಡಿ, ‘ಕಲೆಗಳು ಮನರಂಜನೆಯ ಜೊತೆಗೆ ಮನೋವಿಕಾಸಕ್ಕೆ ಬೇಕಾದ ಅಂಶಗಳನ್ನು ಒದಗಿಸುವ ಕೆಲಸ ಮಾಡುತ್ತವೆ. ತಿಂಗಳಿಗೆ ಒಮ್ಮೆಯಾದರೂ ಇಂಥ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಡೀ ಕುಟುಂಬದೊಂದಿಗೆ ಪಾಲ್ಗೊಳ್ಳಬೇಕು’ ಎಂದು ಅವರು ಹೇಳಿದರು.</p>.<p>ಶಾಂತಲಿಂಗಯ್ಯ ಎಸ್.ಮಠಪತಿ ಅಧ್ಯಕ್ಷತೆ ವಹಿಸಿದ್ದರು. ವೈದ್ಯೆ ವೀಣಾ ಪಾಟೀಲ ಮಾತನಾಡಿದರು.</p>.<p>ಬಸ್ಸಯ್ಯ ಬಿ.ಗುತ್ತೇದಾರ ಸುಗಮ ಸಂಗೀತ, ದತ್ತರಾಜ ಕಲ್ಲಶೆಟ್ಟಿ ತತ್ವಪದ ಗಾಯನ ಹಾಗೂ ಸೈದಪ್ಪ ಸಪ್ಪನಗೋಳ ಅವರು ಜನಪದ ಗಾಯನ, ಅಶ್ವಿನಿ ಆರ್.ಮೂಲಗೆ ದಾಸವಾಣಿ ಹಾಡಿದರು.</p>.<p>ಜನಪ್ರಿಯ ಸಂಗೀತ ಹಾಗೂ ನೃತ್ಯ ಶಾಲೆಯ ಮಕ್ಕಳು ಜಾನಪದ ನೃತ್ಯ, ಶಾಸ್ತ್ರೀಯ ನೃತ್ಯ, ವಚನ ಗಾಯನ, ಭಕ್ತಿಗೀತೆ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<p>ಅವಧೂತ ಪಾಟೀಲ ತಬಲಾ ಸಾಥ್ ನೀಡಿದರು. ರಂಗಕರ್ಮಿ ಕಲ್ಯಾಣಿ ಭಜಂತ್ರಿ ಉಪಸ್ಥಿತರಿದರು. ಗಂಗೋತ್ರಿ ಮಠಪತಿ ನಿರೂಪಿಸಿದರು. ವೇದಕಂಠ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-34-1329073428</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>