<p><strong>ಕಲಬುರಗಿ</strong>: ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ದಲಿತ, ಪ್ರಗತಿಪರ ಸಂಘಟನೆಗಳು, ಎಡಪಕ್ಷಗಳು ಕರೆ ನೀಡಿರುವ ಕಲಬುರಗಿ ಬಂದ್ ಪರಿಣಾಮ ನಗರ ಸ್ತಬ್ಧವಾಗಿದೆ. </p><p>ಬೆಳಿಗ್ಗೆಯಿಂದಲೇ ಪ್ರತಿಭಟನಾಕಾರರು ನಗರದ ಜೇವರ್ಗಿ ರಸ್ತೆ, ಸೇಡಂ ರಸ್ತೆ, ಹುಮನಾಬಾದ್ ರಸ್ತೆ, ಆಳಂದ ಹಾಗೂ ಅಫಜಲಪುರದಿಂದ ನಗರಕ್ಕೆ ಸೇರುವ ರಸ್ತೆಗಳ ಮೇಲೆ ದಿಗ್ಬಂಧನ ವಿಧಿಸಿದ್ದರಿಂದ ನಗರದ ಹೊರಭಾಗದಲ್ಲಿಯೇ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. </p>.ಕಲಬುರಗಿ ಬಂದ್: ಬೆಳ್ಳಂಬೆಳಿಗ್ಗೆ ಬಸ್, ಆಟೊ ಸಂಚಾರ ಸ್ಥಗಿತ- ಪರದಾಡಿದ ಪ್ರಯಾಣಿಕರು.ಕಲಬುರಗಿ ಬಂದ್ | ಅಮಿತ್ ಶಾ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ.<p>ಅವರನ್ನು ಕರೆತರಲು ಸಂಬಂಧಿಕರು ಬೈಕ್, ಕಾರಿನಲ್ಲಿ ಹೋಗಲು ಮುಂದಾದರೂ ಪ್ರತಿಭಟನಾಕಾರರು ಅನುಮತಿಸಲಿಲ್ಲ. ಇದರಿಂದ ಅನಿವಾರ್ಯವಾಗಿ ನಡೆದುಕೊಂಡೇ ಮನೆಯತ್ತ ಸಾಗಿದರು.</p><p>ನಗರದ ಹೊರವಲಯದ ನಾಗನಹಳ್ಳಿ ಕ್ರಾಸ್ ಬಳಿ ಪ್ರತಿಭಟನಾಕಾರರ ಸೂಚನೆ ಮೀರಿ ಲಾರಿ ಮುಂದಕ್ಕೆ ಒಯ್ಯಲು ಮುಂದಾದ ಚಾಲಕನ ಮೇಲೆ ಯುವಕರ ಗುಂಪೊಂದು ನೀರಿನ ಬಾಟಲಿ ಎಸೆಯಿತು. </p><p>ನಗರದ ನಗರೇಶ್ವರ ಶಾಲೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಯಲಿದ್ದು, ಅದಕ್ಕಾಗಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ವಾಹನಗಳ ಮೂಲಕ ಕಲಬುರಗಿಗೆ ಬರುತ್ತಿದ್ದಾರೆ.</p>.ಕಲಬುರಗಿ ಬಂದ್: ಮದುವೆ ಕಾರ್ಯಕ್ರಮಕ್ಕೆ ಅಡಚಣೆ.<p>ನಗರದ ಹೀರಾಪುರ ಕ್ರಾಸ್, ಜಗತ್ ವೃತ್ತ, ಸರ್ದಾರ್ ಪಟೇಲ್ ವೃತ್ತ, ರಾಮ ಮಂದಿರ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಟೈರ್ಗೆ ಬೆಂಕಿ ಹಚ್ಚಿದ್ದು, ರಸ್ತೆಗಳನ್ನು ಬಂದ್ ಮಾಡಿದ್ದಾರೆ.</p><p>ಆಂಬುಲೆನ್ಸ್ ಸೇರಿದಂತೆ ಇತರ ತುರ್ತು ವಾಹನಗಳಿಗೆ ಮಾತ್ರ ದಾರಿ ಬಿಡಲಾಗುತ್ತಿದೆ. </p><p>ಸಾರಿಗೆ ಬಸ್, ಖಾಸಗಿ ವಾಹನಗಳ ಸಂಚಾರ ಬಹುತೇಕ ಸ್ತಬ್ಧಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ದಲಿತ, ಪ್ರಗತಿಪರ ಸಂಘಟನೆಗಳು, ಎಡಪಕ್ಷಗಳು ಕರೆ ನೀಡಿರುವ ಕಲಬುರಗಿ ಬಂದ್ ಪರಿಣಾಮ ನಗರ ಸ್ತಬ್ಧವಾಗಿದೆ. </p><p>ಬೆಳಿಗ್ಗೆಯಿಂದಲೇ ಪ್ರತಿಭಟನಾಕಾರರು ನಗರದ ಜೇವರ್ಗಿ ರಸ್ತೆ, ಸೇಡಂ ರಸ್ತೆ, ಹುಮನಾಬಾದ್ ರಸ್ತೆ, ಆಳಂದ ಹಾಗೂ ಅಫಜಲಪುರದಿಂದ ನಗರಕ್ಕೆ ಸೇರುವ ರಸ್ತೆಗಳ ಮೇಲೆ ದಿಗ್ಬಂಧನ ವಿಧಿಸಿದ್ದರಿಂದ ನಗರದ ಹೊರಭಾಗದಲ್ಲಿಯೇ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. </p>.ಕಲಬುರಗಿ ಬಂದ್: ಬೆಳ್ಳಂಬೆಳಿಗ್ಗೆ ಬಸ್, ಆಟೊ ಸಂಚಾರ ಸ್ಥಗಿತ- ಪರದಾಡಿದ ಪ್ರಯಾಣಿಕರು.ಕಲಬುರಗಿ ಬಂದ್ | ಅಮಿತ್ ಶಾ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ.<p>ಅವರನ್ನು ಕರೆತರಲು ಸಂಬಂಧಿಕರು ಬೈಕ್, ಕಾರಿನಲ್ಲಿ ಹೋಗಲು ಮುಂದಾದರೂ ಪ್ರತಿಭಟನಾಕಾರರು ಅನುಮತಿಸಲಿಲ್ಲ. ಇದರಿಂದ ಅನಿವಾರ್ಯವಾಗಿ ನಡೆದುಕೊಂಡೇ ಮನೆಯತ್ತ ಸಾಗಿದರು.</p><p>ನಗರದ ಹೊರವಲಯದ ನಾಗನಹಳ್ಳಿ ಕ್ರಾಸ್ ಬಳಿ ಪ್ರತಿಭಟನಾಕಾರರ ಸೂಚನೆ ಮೀರಿ ಲಾರಿ ಮುಂದಕ್ಕೆ ಒಯ್ಯಲು ಮುಂದಾದ ಚಾಲಕನ ಮೇಲೆ ಯುವಕರ ಗುಂಪೊಂದು ನೀರಿನ ಬಾಟಲಿ ಎಸೆಯಿತು. </p><p>ನಗರದ ನಗರೇಶ್ವರ ಶಾಲೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಯಲಿದ್ದು, ಅದಕ್ಕಾಗಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ವಾಹನಗಳ ಮೂಲಕ ಕಲಬುರಗಿಗೆ ಬರುತ್ತಿದ್ದಾರೆ.</p>.ಕಲಬುರಗಿ ಬಂದ್: ಮದುವೆ ಕಾರ್ಯಕ್ರಮಕ್ಕೆ ಅಡಚಣೆ.<p>ನಗರದ ಹೀರಾಪುರ ಕ್ರಾಸ್, ಜಗತ್ ವೃತ್ತ, ಸರ್ದಾರ್ ಪಟೇಲ್ ವೃತ್ತ, ರಾಮ ಮಂದಿರ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಟೈರ್ಗೆ ಬೆಂಕಿ ಹಚ್ಚಿದ್ದು, ರಸ್ತೆಗಳನ್ನು ಬಂದ್ ಮಾಡಿದ್ದಾರೆ.</p><p>ಆಂಬುಲೆನ್ಸ್ ಸೇರಿದಂತೆ ಇತರ ತುರ್ತು ವಾಹನಗಳಿಗೆ ಮಾತ್ರ ದಾರಿ ಬಿಡಲಾಗುತ್ತಿದೆ. </p><p>ಸಾರಿಗೆ ಬಸ್, ಖಾಸಗಿ ವಾಹನಗಳ ಸಂಚಾರ ಬಹುತೇಕ ಸ್ತಬ್ಧಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>