<p><strong>ಕಲಬುರಗಿ:</strong> ಇಲ್ಲಿನ ಕಲಬುರಗಿ ಮತ್ತು ಬೆಂಗಳೂರು ನಡುವೆ ಏಪ್ರಿಲ್ 16ರಿಂದ ಸ್ಟಾರ್ ಏರ್ ವಿಮಾನವು ನಿತ್ಯ ಸಂಚರಿಸಲಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶರಣು ಪಪ್ಪಾ ಮತ್ತು ಗೌರವ ಕಾರ್ಯದರ್ಶಿ ಶಿವರಾಜ ವಿ. ಇಂಗನಶೆಟ್ಟಿ ಹೇಳಿದ್ದಾರೆ.</p>.<p>ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ ಮೋಹನ ನಾಯ್ಡು, ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಪ್ರಯತ್ನದಿಂದ ರಾಜಧಾನಿಗೆ ನಿತ್ಯ ವಿಮಾನ ಸೇವೆ ಸಿಗಲಿದೆ. ಇದರಿಂದ ಕಲಬುರಗಿ ಹಾಗೂ ಸುತ್ತಲಿನ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲ ಆಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ವ್ಯಾಪಾರ ಮತ್ತು ಧಾರ್ಮಿಕ ಕ್ಷೇತ್ರಗಳ ಹಿನ್ನೆಲೆಯಲ್ಲಿ ದೆಹಲಿ ಮತ್ತು ತಿರುಪತಿ ನಡುವೆ ಮತ್ತೆ ನಿತ್ಯ ವಿಮಾನ ಸಂಚಾರ ಆರಂಭವಾಗಬೇಕು. ಮುಂಬೈ, ಅಹಮದಾಬಾದ್, ರಾಜಸ್ಥಾನದ ಕಿಶನ್ಗಢ ಮತ್ತು ಗೋವಾಕ್ಕೂ ವಿಮಾನ ಸೇವೆ ವಿಸ್ತರಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಇಲ್ಲಿನ ಕಲಬುರಗಿ ಮತ್ತು ಬೆಂಗಳೂರು ನಡುವೆ ಏಪ್ರಿಲ್ 16ರಿಂದ ಸ್ಟಾರ್ ಏರ್ ವಿಮಾನವು ನಿತ್ಯ ಸಂಚರಿಸಲಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶರಣು ಪಪ್ಪಾ ಮತ್ತು ಗೌರವ ಕಾರ್ಯದರ್ಶಿ ಶಿವರಾಜ ವಿ. ಇಂಗನಶೆಟ್ಟಿ ಹೇಳಿದ್ದಾರೆ.</p>.<p>ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ ಮೋಹನ ನಾಯ್ಡು, ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಪ್ರಯತ್ನದಿಂದ ರಾಜಧಾನಿಗೆ ನಿತ್ಯ ವಿಮಾನ ಸೇವೆ ಸಿಗಲಿದೆ. ಇದರಿಂದ ಕಲಬುರಗಿ ಹಾಗೂ ಸುತ್ತಲಿನ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲ ಆಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ವ್ಯಾಪಾರ ಮತ್ತು ಧಾರ್ಮಿಕ ಕ್ಷೇತ್ರಗಳ ಹಿನ್ನೆಲೆಯಲ್ಲಿ ದೆಹಲಿ ಮತ್ತು ತಿರುಪತಿ ನಡುವೆ ಮತ್ತೆ ನಿತ್ಯ ವಿಮಾನ ಸಂಚಾರ ಆರಂಭವಾಗಬೇಕು. ಮುಂಬೈ, ಅಹಮದಾಬಾದ್, ರಾಜಸ್ಥಾನದ ಕಿಶನ್ಗಢ ಮತ್ತು ಗೋವಾಕ್ಕೂ ವಿಮಾನ ಸೇವೆ ವಿಸ್ತರಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>