<p><strong>ಕಲಬುರಗಿ</strong>: ಕಳೆದ ಎಂಟು ತಿಂಗಳಿನಿಂದ ಸ್ಥಗಿತಗೊಂಡಿರುವ ಕಲಬುರಗಿ ಮತ್ತು ಬೆಂಗಳೂರು ನಡುವಣ ನಿತ್ಯ ವಿಮಾನ ಸೇವೆಗೆ ಜೂನ್ 10ರಿಂದ ಮತ್ತೆ ಚಾಲನೆ ಸಿಗಲಿದೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸ್ಟಾರ್ ಏರ್ ಸಂಸ್ಥೆಯು, ನಿತ್ಯ ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 7.10ಕ್ಕೆ ಕಲಬುರಗಿ ತಲುಪಲಿದೆ. ಸಂಜೆ 7.40ಕ್ಕೆ ಕಲಬುರಗಿಯಿಂದ ಹೊರಟು ರಾತ್ರಿ 8.50ಕ್ಕೆ ಬೆಂಗಳೂರು ತಲುಪಲಿದೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ, ಜೂನ್ 10ರಿಂದ ಬುಕಿಂಗ್ಗೂ ಅವಕಾಶ ನೀಡಿದೆ. ಈ ನಿರ್ಧಾರವು ಈ ಭಾಗದ ಜನರಲ್ಲಿ ಹರ್ಷ ಮೂಡಿಸಿದೆ.</p>.<p>2025ರ ಅಕ್ಟೋಬರ್ 8ರಂದು ಕಲಬುರಗಿ–ಬೆಂಗಳೂರು ನಡುವೆ ಕೊನೆಯದಾಗಿ ವಿಮಾನ ಹಾರಾಡಿತ್ತು. ಅಂದಿನಿಂದ ಇಂದಿನ ತನಕ ಹೆಲಿಕಾಪ್ಟರ್ಗಳು ಹಾಗೂ ವಿಶೇಷ ವಿಮಾನಗಳಿಗೆ ಮಾತ್ರವೇ ಕಲಬುರಗಿ ವಿಮಾನ ನಿಲ್ದಾಣದ ಸೇವೆ ಸೀಮಿತವಾಗಿದೆ. ಕೆಕೆಸಿಸಿಐ ಸೇರಿದಂತೆ ಈ ಭಾಗದ ಅನೇಕ ಸಂಘ–ಸಂಸ್ಥೆಗಳು, ಜನಪ್ರತಿನಿಧಿಗಳು ವಿಮಾನಯಾನ ಪುನರಾರಂಭಕ್ಕೆ ಒತ್ತಾಯಿಸಿದ್ದರು. ವಿಮಾನಯಾನ ಸೇವೆ ಸ್ಥಗಿತವು ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರಕ್ಕೂ ಕಾರಣವಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-1868409726</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಕಳೆದ ಎಂಟು ತಿಂಗಳಿನಿಂದ ಸ್ಥಗಿತಗೊಂಡಿರುವ ಕಲಬುರಗಿ ಮತ್ತು ಬೆಂಗಳೂರು ನಡುವಣ ನಿತ್ಯ ವಿಮಾನ ಸೇವೆಗೆ ಜೂನ್ 10ರಿಂದ ಮತ್ತೆ ಚಾಲನೆ ಸಿಗಲಿದೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸ್ಟಾರ್ ಏರ್ ಸಂಸ್ಥೆಯು, ನಿತ್ಯ ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 7.10ಕ್ಕೆ ಕಲಬುರಗಿ ತಲುಪಲಿದೆ. ಸಂಜೆ 7.40ಕ್ಕೆ ಕಲಬುರಗಿಯಿಂದ ಹೊರಟು ರಾತ್ರಿ 8.50ಕ್ಕೆ ಬೆಂಗಳೂರು ತಲುಪಲಿದೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ, ಜೂನ್ 10ರಿಂದ ಬುಕಿಂಗ್ಗೂ ಅವಕಾಶ ನೀಡಿದೆ. ಈ ನಿರ್ಧಾರವು ಈ ಭಾಗದ ಜನರಲ್ಲಿ ಹರ್ಷ ಮೂಡಿಸಿದೆ.</p>.<p>2025ರ ಅಕ್ಟೋಬರ್ 8ರಂದು ಕಲಬುರಗಿ–ಬೆಂಗಳೂರು ನಡುವೆ ಕೊನೆಯದಾಗಿ ವಿಮಾನ ಹಾರಾಡಿತ್ತು. ಅಂದಿನಿಂದ ಇಂದಿನ ತನಕ ಹೆಲಿಕಾಪ್ಟರ್ಗಳು ಹಾಗೂ ವಿಶೇಷ ವಿಮಾನಗಳಿಗೆ ಮಾತ್ರವೇ ಕಲಬುರಗಿ ವಿಮಾನ ನಿಲ್ದಾಣದ ಸೇವೆ ಸೀಮಿತವಾಗಿದೆ. ಕೆಕೆಸಿಸಿಐ ಸೇರಿದಂತೆ ಈ ಭಾಗದ ಅನೇಕ ಸಂಘ–ಸಂಸ್ಥೆಗಳು, ಜನಪ್ರತಿನಿಧಿಗಳು ವಿಮಾನಯಾನ ಪುನರಾರಂಭಕ್ಕೆ ಒತ್ತಾಯಿಸಿದ್ದರು. ವಿಮಾನಯಾನ ಸೇವೆ ಸ್ಥಗಿತವು ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರಕ್ಕೂ ಕಾರಣವಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-1868409726</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>