<p>ಕಲಬುರಗಿ: ‘ಕುಡಿಯುವ ಉದ್ದೇಶಕ್ಕಾಗಿ ನಾರಾಯಣಪುರ ಜಲಾಶಯದಿಂದ ಇಂಡಿ ಶಾಖಾ ಕಾಲುವೆ ಮೂಲಕ ಭೀಮಾ ನದಿಗೆ 2 ಟಿಎಂಸಿ ಅಡಿ ನೀರು ಹರಿಸಬೇಕು’ ಎಂದು ಶಾಸಕರೂ ಆದ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಒತ್ತಾಯಿಸಿದರು.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭೀಮಾ ನದಿಯ ಒಡಲು ಬರಿದಾಗಿದೆ. ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದರೆ ಅಲ್ಲಿ ಬೇರೆ ಪಕ್ಷದ ಸರ್ಕಾರ ಇದೆ’ ಎಂದರು.</p>.<p>‘ಆಳಂದ ಕ್ಷೇತ್ರದಲ್ಲಿ 24 ಕಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ಕೊಳವೆಬಾವಿ ಮಾಲೀಕರಿಗೆ ವರ್ಷಕ್ಕೆ ತಲಾ ₹25 ಸಾವಿರ ನೀಡಲಾಗುತ್ತಿದೆ. ಆಳಂದ ಕ್ಷೇತ್ರ ವ್ಯಾಪ್ತಿಯ 32 ಪಂಚಾಯಿತಿಗಳ ಪೈಕಿ 3–4 ಪಂಚಾಯಿತಿಗಳಲ್ಲಿ ಮಾತ್ರ ಸ್ವಲ್ಪ ಹಣವಿದೆ. ಪಿಡಿಒಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಅಂತರ್ಜಲಮಟ್ಟ ಕುಸಿಯುತ್ತಿದೆ. ಅದರ ಸಂರಕ್ಷಣೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಊರಿಗೊಂದು ಕೆರೆ ಆಗಬೇಕು. ಅದಕ್ಕಾಗಿ ಕನಿಷ್ಠ ₹100 ಕೋಟಿ ನೀಡುವಂತೆ ಕೇಳಿದ್ದೇವೆ’ ಎಂದು ಹೇಳಿದರು.</p>.<p>‘ಜೆಜೆಎಂ ಕಾಮಗಾರಿ ಹಳ್ಳ ಹಿಡಿದಿದೆ. ಲೂಟಿ ಹೊಡೆಯುವುದಕ್ಕಾಗಿಯೇ ಈ ಯೋಜನೆ ಇದೆ. ಹಳ್ಳಿಗಳಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಅಗೆದು ಹಾಗೆಯೇ ಬಿಡಲಾಗಿದೆ. ವೃದ್ಧರು, ಮಕ್ಕಳು, ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರದಿಂದ ಜೆಜೆಎಂ ಕಾಮಗಾರಿಗೆ ಹಣ ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-34-1249055537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಕುಡಿಯುವ ಉದ್ದೇಶಕ್ಕಾಗಿ ನಾರಾಯಣಪುರ ಜಲಾಶಯದಿಂದ ಇಂಡಿ ಶಾಖಾ ಕಾಲುವೆ ಮೂಲಕ ಭೀಮಾ ನದಿಗೆ 2 ಟಿಎಂಸಿ ಅಡಿ ನೀರು ಹರಿಸಬೇಕು’ ಎಂದು ಶಾಸಕರೂ ಆದ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಒತ್ತಾಯಿಸಿದರು.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭೀಮಾ ನದಿಯ ಒಡಲು ಬರಿದಾಗಿದೆ. ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದರೆ ಅಲ್ಲಿ ಬೇರೆ ಪಕ್ಷದ ಸರ್ಕಾರ ಇದೆ’ ಎಂದರು.</p>.<p>‘ಆಳಂದ ಕ್ಷೇತ್ರದಲ್ಲಿ 24 ಕಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ಕೊಳವೆಬಾವಿ ಮಾಲೀಕರಿಗೆ ವರ್ಷಕ್ಕೆ ತಲಾ ₹25 ಸಾವಿರ ನೀಡಲಾಗುತ್ತಿದೆ. ಆಳಂದ ಕ್ಷೇತ್ರ ವ್ಯಾಪ್ತಿಯ 32 ಪಂಚಾಯಿತಿಗಳ ಪೈಕಿ 3–4 ಪಂಚಾಯಿತಿಗಳಲ್ಲಿ ಮಾತ್ರ ಸ್ವಲ್ಪ ಹಣವಿದೆ. ಪಿಡಿಒಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಅಂತರ್ಜಲಮಟ್ಟ ಕುಸಿಯುತ್ತಿದೆ. ಅದರ ಸಂರಕ್ಷಣೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಊರಿಗೊಂದು ಕೆರೆ ಆಗಬೇಕು. ಅದಕ್ಕಾಗಿ ಕನಿಷ್ಠ ₹100 ಕೋಟಿ ನೀಡುವಂತೆ ಕೇಳಿದ್ದೇವೆ’ ಎಂದು ಹೇಳಿದರು.</p>.<p>‘ಜೆಜೆಎಂ ಕಾಮಗಾರಿ ಹಳ್ಳ ಹಿಡಿದಿದೆ. ಲೂಟಿ ಹೊಡೆಯುವುದಕ್ಕಾಗಿಯೇ ಈ ಯೋಜನೆ ಇದೆ. ಹಳ್ಳಿಗಳಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಅಗೆದು ಹಾಗೆಯೇ ಬಿಡಲಾಗಿದೆ. ವೃದ್ಧರು, ಮಕ್ಕಳು, ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರದಿಂದ ಜೆಜೆಎಂ ಕಾಮಗಾರಿಗೆ ಹಣ ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-34-1249055537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>