<p>ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗಿದೆ. ಸಿಡಿಲು ಬಡಿದು ಬೀದರ್ ಜಿಲ್ಲೆಯಲ್ಲಿ ಕುರಿಗಾಹಿ, ಬಾಗಲಕೋಟೆ ಜಿಲ್ಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಅಲ್ಲದೆ, ಹಲವು ಎತ್ತು, ಎಮ್ಮೆಗಳು ಸಾವನ್ನಪ್ಪಿವೆ.</p>.<p>ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರ ಗ್ರಾಮದ ಜಿಂದಾರಾಮ್ ಧೂಳಪ್ಪ ಹೆಡೆ (26) ಅವರು ಹೊಲದಲ್ಲಿ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದ್ದು, ಸ್ಥಳದಲ್ಲಿ ಮೃತಪಟ್ಟರು.</p>.<p>ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪದ ರಂಗಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಸತ್ತಿವೆ. ಗ್ರಾಮದ ಶೇಖಪ್ಪ ಕನಕಪ್ಪ ವಾಲೀಕಾರ ಅವರ ಜಮೀನಿನಲ್ಲಿ ಎಮ್ಮೆ, ಮುತ್ತಪ್ಪ ಶರಣಪ್ಪ ಮಜ್ಜಗಿ ಅವರ ಜಮೀನಿನಲ್ಲಿ ಎತ್ತು ಮೃತಪಟ್ಟಿದೆ.</p>.<p>ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಹಿರೊಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಕಟ್ಟಿದ್ದ ಎರಡು ಎತ್ತುಗಳು ಸಿಡಿಲು ಬಡಿದು ಮೃತಪಟ್ಟಿವೆ. ರೈತ ಅನೀಲ ಚಿಕ್ಕಳ್ಳಿ ಅವರಿಗೆ ಈ ಎತ್ತುಗಳು ಸೇರಿವೆ.</p>.<p>ಇಳಕಲ್ (ಬಾಗಲಕೋಟೆ ಜಿಲ್ಲೆ): ಸಮೀಪದ ವಜ್ಜಲ್ ಗ್ರಾಮದ ಹೊಲವೊಂದರಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಶ್ಯಾವಮ್ಮ ಮಲ್ಲಪ್ಪ ವಾಲಿಕಾರ ಅವರು ಮೃತಪಟ್ಟಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-51-1422113854</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗಿದೆ. ಸಿಡಿಲು ಬಡಿದು ಬೀದರ್ ಜಿಲ್ಲೆಯಲ್ಲಿ ಕುರಿಗಾಹಿ, ಬಾಗಲಕೋಟೆ ಜಿಲ್ಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಅಲ್ಲದೆ, ಹಲವು ಎತ್ತು, ಎಮ್ಮೆಗಳು ಸಾವನ್ನಪ್ಪಿವೆ.</p>.<p>ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರ ಗ್ರಾಮದ ಜಿಂದಾರಾಮ್ ಧೂಳಪ್ಪ ಹೆಡೆ (26) ಅವರು ಹೊಲದಲ್ಲಿ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದ್ದು, ಸ್ಥಳದಲ್ಲಿ ಮೃತಪಟ್ಟರು.</p>.<p>ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪದ ರಂಗಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಸತ್ತಿವೆ. ಗ್ರಾಮದ ಶೇಖಪ್ಪ ಕನಕಪ್ಪ ವಾಲೀಕಾರ ಅವರ ಜಮೀನಿನಲ್ಲಿ ಎಮ್ಮೆ, ಮುತ್ತಪ್ಪ ಶರಣಪ್ಪ ಮಜ್ಜಗಿ ಅವರ ಜಮೀನಿನಲ್ಲಿ ಎತ್ತು ಮೃತಪಟ್ಟಿದೆ.</p>.<p>ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಹಿರೊಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಕಟ್ಟಿದ್ದ ಎರಡು ಎತ್ತುಗಳು ಸಿಡಿಲು ಬಡಿದು ಮೃತಪಟ್ಟಿವೆ. ರೈತ ಅನೀಲ ಚಿಕ್ಕಳ್ಳಿ ಅವರಿಗೆ ಈ ಎತ್ತುಗಳು ಸೇರಿವೆ.</p>.<p>ಇಳಕಲ್ (ಬಾಗಲಕೋಟೆ ಜಿಲ್ಲೆ): ಸಮೀಪದ ವಜ್ಜಲ್ ಗ್ರಾಮದ ಹೊಲವೊಂದರಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಶ್ಯಾವಮ್ಮ ಮಲ್ಲಪ್ಪ ವಾಲಿಕಾರ ಅವರು ಮೃತಪಟ್ಟಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-51-1422113854</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>