<p><strong>ಕಲಬುರಗಿ:</strong> ಪ್ರಚೋದನಕಾರಿ, ದೋಷ ಪೂರಿತ ಹಾಗೂ ಕೋಮು ಸೌಹಾರ್ದ ಕದಡಲು ಯತ್ನಿಸಿದ ಆರೋಪದಡಿ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.</p>.<p>ಆಳಂದ ಲಾಡ್ಲೆ ಮಶಾಕ್ ದರ್ಗಾ ಆವರಣದ ಗಲಭೆಗೆ ಸಂಬಂಧಿಸಿದಂತೆ ಮುಸ್ಲಿಮರ ಮೇಲಿನ ಪ್ರಕರಣ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯು ಜೂನ್ 1ರಂದು ಪ್ರತಿಭಟನೆ ಆಯೋಜಿಸಿತ್ತು.</p>.<p>‘ಆ ಪ್ರತಿಭಟನಾ ಭಾಷಣದಲ್ಲಿ ದತ್ತಾತ್ರೇಯ ಪಾಟೀಲ ರೇವೂರ ಅವರು ಮಾಜಿ ಸಚಿವ ದಿ.ಖಮರುಲ್ ಇಸ್ಲಾಂ ಅವರು ಕಲಬುರಗಿಯನ್ನು ಮಿನಿ ಪಾಕಿಸ್ತಾನ್ ಮಾಡಲು ಯತ್ನಿಸಿದ್ದರು. ಅದಕ್ಕೆ ಅವರು ಚುನಾವಣೆಯಲ್ಲಿ ಸೋತರು ಎಂದು ಟೀಕಿಸಿದ್ದಾರೆ. ಈ ಮೂಲಕ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.</p>.<p>ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡಿದ್ದಾರೆ’ ಎಂದು ಆರೋಪಿಸಿ ನಗರದ ದರ್ಗಾ ಪ್ರದೇಶದ ಖಮರ್ ಕಾಲೊನಿ ನಿವಾಸಿ ಅಜಗರ್ ಹುಸೇನ್ ಪೊಲೀಸರಿಗೆ ದೂರು ನೀಡಿದ್ದರು.</p>.<p>ಈ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆಯ ಕಲಂಗಳಾದ 353(1)(ಬಿ) ಹಾಗೂ 196 ಅಡಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-34-1611712624</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪ್ರಚೋದನಕಾರಿ, ದೋಷ ಪೂರಿತ ಹಾಗೂ ಕೋಮು ಸೌಹಾರ್ದ ಕದಡಲು ಯತ್ನಿಸಿದ ಆರೋಪದಡಿ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.</p>.<p>ಆಳಂದ ಲಾಡ್ಲೆ ಮಶಾಕ್ ದರ್ಗಾ ಆವರಣದ ಗಲಭೆಗೆ ಸಂಬಂಧಿಸಿದಂತೆ ಮುಸ್ಲಿಮರ ಮೇಲಿನ ಪ್ರಕರಣ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯು ಜೂನ್ 1ರಂದು ಪ್ರತಿಭಟನೆ ಆಯೋಜಿಸಿತ್ತು.</p>.<p>‘ಆ ಪ್ರತಿಭಟನಾ ಭಾಷಣದಲ್ಲಿ ದತ್ತಾತ್ರೇಯ ಪಾಟೀಲ ರೇವೂರ ಅವರು ಮಾಜಿ ಸಚಿವ ದಿ.ಖಮರುಲ್ ಇಸ್ಲಾಂ ಅವರು ಕಲಬುರಗಿಯನ್ನು ಮಿನಿ ಪಾಕಿಸ್ತಾನ್ ಮಾಡಲು ಯತ್ನಿಸಿದ್ದರು. ಅದಕ್ಕೆ ಅವರು ಚುನಾವಣೆಯಲ್ಲಿ ಸೋತರು ಎಂದು ಟೀಕಿಸಿದ್ದಾರೆ. ಈ ಮೂಲಕ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.</p>.<p>ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡಿದ್ದಾರೆ’ ಎಂದು ಆರೋಪಿಸಿ ನಗರದ ದರ್ಗಾ ಪ್ರದೇಶದ ಖಮರ್ ಕಾಲೊನಿ ನಿವಾಸಿ ಅಜಗರ್ ಹುಸೇನ್ ಪೊಲೀಸರಿಗೆ ದೂರು ನೀಡಿದ್ದರು.</p>.<p>ಈ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆಯ ಕಲಂಗಳಾದ 353(1)(ಬಿ) ಹಾಗೂ 196 ಅಡಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-34-1611712624</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>