ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ 2ರಂದು ಬೆಳಿಗ್ಗೆ 11ಕ್ಕೆ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸಮಾವೇಶ ನಡೆಯಲಿದ್ದು, ಜೇವರ್ಗಿ, ಅಫಜಲಪುರ, ಆಳಂದ, ಕಮಲಾಪುರ ಹಾಗೂ ಕಲಬುರ್ಗಿ ದಕ್ಷಿಣ ಮಂಡಲಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4ಕ್ಕೆ ಸೇಡಂನಲ್ಲಿ ನಡೆಯುವ ಸಮಾವೇಶದಲ್ಲಿ ಸೇಡಂ, ಚಿಂಚೋಳಿ, ಚಿತ್ತಾಪುರ ಮಂಡಲಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.