<p><strong>ಕಲಬುರಗಿ</strong>: ಮಾತಾ ಮಾಣಿಕೇಶ್ವರಿ ಕೋಲಿ, ಕಬ್ಬಲಿಗ (ಗಂಗಾಮತ) ಸಮಾಜದ ವಧು–ವರರ ಮಾಹಿತಿ ಸೇವಾ ಸಂಘದಿಂದ ನಗರದಲ್ಲಿ 2026ರ ಫೆಬ್ರುವರಿ 1ರಂದು ವಧು–ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸೂರ್ಯಕಾಂತ ಗುಡ್ಡಡಗಿ ಹೇಳಿದರು.</p>.<p>ಇಲ್ಲಿನ ಸ್ವಾಮಿ ವಿವೇಕಾನಂದ ನಗರದ ಕಸ್ತೂರಿಬಾಯಿ ಬುಳ್ಳಾ ಸಾಂಸ್ಕೃತಿಕ ಸಭಾಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾವೇಶದಲ್ಲಿ ಹಾವೇರಿಯ ನರಸಿಪುರದ ಅಂಬಿಗರ ಚೌಡಯ್ಯ ಗುರುಪೀಠದ ಶಾಂತಭೀಷ್ಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>‘ಸಮುದಾಯದ ಬಾಂಧವರು ಇದರ ಉಪಯೋಗ ಪಡೆಯಬೇಕು. ತಮ್ಮ ಮಕ್ಕಳ ಚಿತ್ರ ಸಹಿತ ಮಾಹಿತಿಯನ್ನು ಉಚಿತವಾಗಿ ನಮ್ಮ ಕಚೇರಿಗೆ ತಲುಪಿಸಬಹುದು’ ಎಂದರು.</p>.<p>‘ಅದೇ ದಿನ ನಮ್ಮ ಸಮಾಜದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಸಾಧಕರನ್ನು ಸನ್ಮಾನಿಸಲಾಗುವುದು. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಥಮ ₹5 ಸಾವಿರ, ದ್ವಿತೀಯ ₹3 ಸಾವಿರ ಬಹುಮಾನ ನೀಡಲಾಗುವುದು. ವಧು–ವರರ ನೋಂದಣಿ ಹಾಗೂ ಪ್ರತಿಭಾ ಪುರಸ್ಕಾರಕ್ಕೆ ನೋಂದಣಿಗೆ ಜನವರಿ 10 ಕೊನೆಯ ದಿನವಾಗಿದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬಾಬು ಜಮಾದಾರ, ಭೀಮರಾಯ ಐನಾಪುರ, ಸೈಬಣ್ಣ ವಡಗೇರಿ, ಬಸವರಾಜ ನಾಟಿಕಾರ, ರಮೇಶ ದಾಸ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಮಾತಾ ಮಾಣಿಕೇಶ್ವರಿ ಕೋಲಿ, ಕಬ್ಬಲಿಗ (ಗಂಗಾಮತ) ಸಮಾಜದ ವಧು–ವರರ ಮಾಹಿತಿ ಸೇವಾ ಸಂಘದಿಂದ ನಗರದಲ್ಲಿ 2026ರ ಫೆಬ್ರುವರಿ 1ರಂದು ವಧು–ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸೂರ್ಯಕಾಂತ ಗುಡ್ಡಡಗಿ ಹೇಳಿದರು.</p>.<p>ಇಲ್ಲಿನ ಸ್ವಾಮಿ ವಿವೇಕಾನಂದ ನಗರದ ಕಸ್ತೂರಿಬಾಯಿ ಬುಳ್ಳಾ ಸಾಂಸ್ಕೃತಿಕ ಸಭಾಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾವೇಶದಲ್ಲಿ ಹಾವೇರಿಯ ನರಸಿಪುರದ ಅಂಬಿಗರ ಚೌಡಯ್ಯ ಗುರುಪೀಠದ ಶಾಂತಭೀಷ್ಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>‘ಸಮುದಾಯದ ಬಾಂಧವರು ಇದರ ಉಪಯೋಗ ಪಡೆಯಬೇಕು. ತಮ್ಮ ಮಕ್ಕಳ ಚಿತ್ರ ಸಹಿತ ಮಾಹಿತಿಯನ್ನು ಉಚಿತವಾಗಿ ನಮ್ಮ ಕಚೇರಿಗೆ ತಲುಪಿಸಬಹುದು’ ಎಂದರು.</p>.<p>‘ಅದೇ ದಿನ ನಮ್ಮ ಸಮಾಜದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಸಾಧಕರನ್ನು ಸನ್ಮಾನಿಸಲಾಗುವುದು. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಥಮ ₹5 ಸಾವಿರ, ದ್ವಿತೀಯ ₹3 ಸಾವಿರ ಬಹುಮಾನ ನೀಡಲಾಗುವುದು. ವಧು–ವರರ ನೋಂದಣಿ ಹಾಗೂ ಪ್ರತಿಭಾ ಪುರಸ್ಕಾರಕ್ಕೆ ನೋಂದಣಿಗೆ ಜನವರಿ 10 ಕೊನೆಯ ದಿನವಾಗಿದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬಾಬು ಜಮಾದಾರ, ಭೀಮರಾಯ ಐನಾಪುರ, ಸೈಬಣ್ಣ ವಡಗೇರಿ, ಬಸವರಾಜ ನಾಟಿಕಾರ, ರಮೇಶ ದಾಸ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>