<p>ಕಲಬುರಗಿ: ‘ಬುದ್ಧ ಪೂರ್ಣಿಮೆ ಪ್ರಯುಕ್ತ ಬಿಎಸ್ಎನ್ಎಲ್ ಕ್ಷೇಮಾಭಿವೃದ್ಧಿ ಟ್ರಸ್ಟ್ನಿಂದ ಮೇ 1ರಂದು ಸಂಜೆ 5.30ಕ್ಕೆ ನಗರದ ಕೋಟನೂರ ಸಮೀಪದ ಬಿಎಸ್ಎನ್ಎಲ್ ಬಡಾವಣೆಯಲ್ಲಿ ಬುದ್ಧ- ಬಸವ- ಅಂಬೇಡ್ಕರ್ ಜಯಂತಿ ಆಯೋಜಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ಕಿಶೋರ ಗಾಯಕವಾಡ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುರುಘರಾಜೇಂದ್ರ ಸ್ವಾಮೀಜಿ, ಪರಜ್ಯೋತಿ ಭಂತೇಜಿ, ಶಾಂತಿ ಸಮ್ಮನ ಸಾನ್ನಿಧ್ಯ ವಹಿಸುವರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸುವರು. ನಿವೃತ್ತ ಪೊಲೀಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ ಸೇರಿ ಹಲವರು ಭಾಗವಹಿಸುವರು’ ಎಂದರು.</p>.<p>‘ಕಾರ್ಯಕ್ರಮದಲ್ಲಿ ಸಾಧಕ ಪೊಲೀಸರಿಗೆ ‘ಭೀಮ ರತ್ನ’ ಪ್ರಶಸ್ತಿ, ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದ ವಿವಿಧ ಸಮಿತಿಗಳ 23 ಜನ ಅಧ್ಯಕ್ಷರಿಗೆ ಸನ್ಮಾನ ಹಾಗೂ 25 ಜನ ನಿವೃತ್ತ ಸೈನಿಕರಿಗೆ ಸನ್ಮಾನ ಮಾಡಲಾಗುವುದು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ’ ಎಂದರು.</p>.<p>ಪಂಡಿತ ಕಾಂಬಳೆ, ರಾಘವೇಂದ್ರ ವೈ.ಟಿ., ಬಿ.ಎಸ್.ಬಿರಾದಾರ, ರೋಹಿದಾಸ್ ಎಸ್., ಸಿದ್ಧಾರ್ಥ ಹೊಸಮನಿ, ಆಕಾಶ ನಾಯ್ಕೋಡಿ, ಮಂಜುನಾಥ ಹಡಪದ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-34-561850350</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಬುದ್ಧ ಪೂರ್ಣಿಮೆ ಪ್ರಯುಕ್ತ ಬಿಎಸ್ಎನ್ಎಲ್ ಕ್ಷೇಮಾಭಿವೃದ್ಧಿ ಟ್ರಸ್ಟ್ನಿಂದ ಮೇ 1ರಂದು ಸಂಜೆ 5.30ಕ್ಕೆ ನಗರದ ಕೋಟನೂರ ಸಮೀಪದ ಬಿಎಸ್ಎನ್ಎಲ್ ಬಡಾವಣೆಯಲ್ಲಿ ಬುದ್ಧ- ಬಸವ- ಅಂಬೇಡ್ಕರ್ ಜಯಂತಿ ಆಯೋಜಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ಕಿಶೋರ ಗಾಯಕವಾಡ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುರುಘರಾಜೇಂದ್ರ ಸ್ವಾಮೀಜಿ, ಪರಜ್ಯೋತಿ ಭಂತೇಜಿ, ಶಾಂತಿ ಸಮ್ಮನ ಸಾನ್ನಿಧ್ಯ ವಹಿಸುವರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸುವರು. ನಿವೃತ್ತ ಪೊಲೀಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ ಸೇರಿ ಹಲವರು ಭಾಗವಹಿಸುವರು’ ಎಂದರು.</p>.<p>‘ಕಾರ್ಯಕ್ರಮದಲ್ಲಿ ಸಾಧಕ ಪೊಲೀಸರಿಗೆ ‘ಭೀಮ ರತ್ನ’ ಪ್ರಶಸ್ತಿ, ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದ ವಿವಿಧ ಸಮಿತಿಗಳ 23 ಜನ ಅಧ್ಯಕ್ಷರಿಗೆ ಸನ್ಮಾನ ಹಾಗೂ 25 ಜನ ನಿವೃತ್ತ ಸೈನಿಕರಿಗೆ ಸನ್ಮಾನ ಮಾಡಲಾಗುವುದು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ’ ಎಂದರು.</p>.<p>ಪಂಡಿತ ಕಾಂಬಳೆ, ರಾಘವೇಂದ್ರ ವೈ.ಟಿ., ಬಿ.ಎಸ್.ಬಿರಾದಾರ, ರೋಹಿದಾಸ್ ಎಸ್., ಸಿದ್ಧಾರ್ಥ ಹೊಸಮನಿ, ಆಕಾಶ ನಾಯ್ಕೋಡಿ, ಮಂಜುನಾಥ ಹಡಪದ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-34-561850350</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>