<p><strong>ಕಲಬುರಗಿ:</strong> ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕ ಕಂದಾಯ ವಿಭಾಗದ ಕೇಂದ್ರವಾದ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಆಶಾದಾಯಕ ಕೊಡುಗೆ’ ನೀಡಿದ್ದಾರೆ. ಈ ಸಲವೂ ‘ಕಲ್ಯಾಣ ಕರ್ನಾಟಕ’ದ ಅಭಿವೃದ್ಧಿಗಾಗಿ ಕೆಕೆಆರ್ಡಿಬಿಗೆ ₹5 ಸಾವಿರ ಕೋಟಿ ಹಂಚಿಕೆ ಮಾಡಲಾಗಿದೆ.</p>.<p>ನಿರೀಕ್ಷೆಯಂತೆ ಬಜೆಟ್ನಲ್ಲಿ ವಾಗ್ದರಿ–ರಿಬ್ಬನ್ಪಲ್ಲಿ ರಸ್ತೆ ಅಭಿವೃದ್ಧಿ, ಹಜ್ ಭವನ ಸ್ಥಾಪನೆ, ಪಿ.ಎಂ ಮಿತ್ರ ಮೆಗಾ ಜವಳಿ ಪಾರ್ಕ್ಗೆ ಅನುದಾನ ಸಿಕ್ಕಿದೆ. ರಾಷ್ಟ್ರಕವಿ ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ರಂಗರೂಪಕದಂತೆ ‘ಖಾಜಾ ಬಂದಾನವಾಜ್’ರ ಕುರಿತು ಅಹೋರಾತ್ರಿ ನಾಟಕ ಏರ್ಪಡಿಸುವುದಾಗಿಯೂ ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<p>ಆದರೆ, ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳಿಗೆ ತಕ್ಕ ಸ್ಪಂದನೆ ಸಿಕ್ಕಿಲ್ಲ. ಪ್ರವಾಸಿ ತಾಣಗಳ ಕಾರಿಡಾರ್ ಘೋಷಣೆ, ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಿಸುವ ಬಗೆಗೆ ಬಜೆಟ್ನಲ್ಲಿ ಯಾವುದೇ ಪ್ರಸ್ತಾಪವಿಲ್ಲ.</p>.<p>₹400 ಕೋಟಿ ಅಂದಾಜು ಮೊತ್ತದ 135 ಕಿ.ಮೀ ಉದ್ದದ ವಾಗ್ದರಿ–ರಿಬ್ಬನ್ಪಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗೆ ಕೆಕೆಆರ್ಡಿಬಿಯ ಶೇ 50ರಷ್ಟು ಅನುದಾನ ಒದಗಿಸುವ ಭರವಸೆ ನೀಡಲಾಗಿದೆ. ಈ ಕುರಿತು ಸಚಿವ ಡಾ.ಶರಣಪ್ರಕಾಶ ಪಾಟೀಲ ಇತ್ತೀಚೆಗೆ ಸೇಡಂಗೆ ಮುಖ್ಯಮಂತ್ರಿ ಬಂದಿದ್ದಾಗ ಈ ಬೇಡಿಕೆ ಮಂಡಿಸಿದ್ದರು.</p>.<p>ದೊಡ್ಡಮಟ್ಟದಲ್ಲಿ ಉದ್ಯೋಗ ಸೃಷ್ಟಿ ನಿರೀಕ್ಷೆ ಹುಟ್ಟಿಸಿರುವ ಪಿ.ಎಂ.ಮಿತ್ರ ಮೆಗಾ ಜವಳಿ ಪಾರ್ಕ್ನಲ್ಲಿ ಮೂಲಸೌಲಭ್ಯಗಳನ್ನು ಒದಗಿಸಲು ಪ್ರಸಕ್ತ ವರ್ಷ ₹75 ಕೋಟಿ ಒದಗಿಸಲಾಗಿದೆ. ಜವಳಿ ಪಾರ್ಕ್ಗೆ ಜಿಲ್ಲೆಯ ಜನ ಇನ್ನೂ ಹೆಚ್ಚಿನ ಅನುದಾನ ನಿರೀಕ್ಷಿಸಿದ್ದರು.</p>.<p><strong>ಹಲವು ಕೊಡುಗೆ:</strong></p>.<p>‘ಬಿಯಾಂಡ್ ಬೆಂಗಳೂರು’ ಕಾರ್ಯಕ್ರಮದಡಿ ಕಲಬುರಗಿ ಉದ್ಯಮಿಗಳಿಗೆ ಇನ್ಕ್ಯುಬೇಷನ್ ಸೌಲಭ್ಯಗಳನ್ನು ಒದಗಿಸಲು ಕಿಯೋನಿಕ್ಸ್ ಸಂಸ್ಥೆಯ ಮೂಲಕ ಪ್ಲಗ್–ಅಂಡ್–ಪ್ಲೇ ಸೌಲಭ್ಯದ ʻಲೀಪ್ ಲ್ಯಾಬ್ಸ್ʼಗಳನ್ನು ಸ್ಥಾಪನೆ ಘೋಷಿಸಲಾಗಿದೆ. ಅಲ್ಲದೇ, ಕಲಬುರಗಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರ ಪಿಪಿಪಿ ಮಾದರಿಯಲ್ಲಿ ಆರಂಭಿಸುವುದಾಗಿ ಪ್ರಕಟಿಸಲಾಗಿದೆ. ಇದರಿಂದ ಕಲಬುರಗಿ ಮಾತ್ರವಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ.</p>.<p>ಕಲಬುರಗಿಗೆ ಹಜ್ ಭವನ ಘೋಷಿಸಲಾಗಿದೆ. ಈ ಕುರಿತು ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಬಜೆಟ್ ಪೂರ್ವದಲ್ಲೇ ಬೇಡಿಕೆ ಮಂಡಿಸಿದ್ದರು. ಹಜ್ ಭವನದಿಂದ ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ನೆರವಾಗಲಿದೆ.</p>.<p>ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆಗೆ ಕ್ರಮವಹಿಸುವುದಾಗಿ ಸರ್ಕಾರ ಹೇಳಿದ್ದು, ಈ ಮೂಲಕ ತೊಗರಿನಾಡಿನಲ್ಲಿ ರೇಷ್ಮೆ ಕೃಷಿಗೆ ಉತ್ತೇಜಿಸಲಾಗಿದೆ. ಜಿಮ್ಸ್ನಲ್ಲಿ ₹1 ಕೋಟಿ ವೆಚ್ಚದಲ್ಲಿ ಐವಿಎಫ್ ಕೇಂದ್ರ ಸ್ಥಾಪಿಸುವುದಾಗಿ ಘೋಷಿಸಲಾಗಿದ್ದು, ಕಲಬುರಗಿಯನ್ನು ‘ಹೆಲ್ತ್ ಹಬ್’ ಮಾಡುವ ಪ್ರಯತ್ನಕ್ಕೆ ಬಲ ತುಂಬಲಾಗಿದೆ.</p>.<p>ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಜಿಡಗಾ ಹಾಗೂ ಇತರ ಎರಡು ಜಿಲ್ಲೆಗಳಲ್ಲಿ ಎರಡು ಕಡೆ ಒಟ್ಟು ₹25 ಕೋಟಿ ವೆಚ್ಚದಲ್ಲಿ ಕೆರೆಗಳ ಆಧುನೀಕರಣಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ಅಂತರ್ಜಲ ಹೆಚ್ಚಳ ನಿರೀಕ್ಷಿಸಲಾಗಿದೆ.</p>.<p>ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭೇಟಿ ಸ್ಮರಣಾರ್ಥ ಕಲಬುರಗಿಯಲ್ಲಿ ಅವರ ಹೆಸರಲ್ಲಿ ಸಿಬಿಎಸ್ಇ ಪಠ್ಯಕ್ರಮದ ಕ್ರೈಸ್ ವಸತಿ ಶಾಲೆ ಪ್ರಾರಂಭಿಸುವುದಾಗಿ ಆಯವ್ಯಯದಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಕಾರ್ಮಿಕ ಇಲಾಖೆಯಿಂದ ಮೊದಲ ಹಂತದಲ್ಲಿ ಕಲಬುರಗಿಯಲ್ಲಿ ಒಂದು ಶ್ರಮಿಕ ವಸತಿ ಶಾಲೆ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. 2ನೇ ಹಂತದಲ್ಲಿ ಚಿತ್ತಾಪುರ, ಆಳಂದ ಹಾಗೂ ಅಫಜಲಪುರದಲ್ಲಿ ಶ್ರಮಿಕ ಶಾಲೆಗಳು ತಲೆಎತ್ತಲಿವೆ. ಈ ಶಾಲೆಗಳು ಪ್ರಸ್ತಕ ಶೈಕ್ಷಣಿಕ ವರ್ಷದಿಂದಲೇ ಬಾಡಿಗೆ ಕಟ್ಟಡಗಳಲ್ಲಿ ಆರಂಭವಾಗಲಿವೆ.</p>.<p><strong>ಹಾಸ್ಟೆಲ್ಗಳ ಸ್ಥಾಪನೆ:</strong></p>.<p>ಕಲಬುರಗಿ ಸೇರಿದಂತೆ ಹಲವೆಡೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸೀಟು ಸಾಮರ್ಥ್ಯದ 10 ಹಾಸ್ಟೆಲ್ ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಅಂತೆಯೇ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 150 ಸೀಟು ಸಾಮರ್ಥ್ಯದ 50 ಮೆಟ್ರಿಕ್ ನಂತರದ ಹಾಸ್ಟೆಲ್ಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದ್ದು, ಆ ಪೈಕಿ ಕಲಬುರಗಿ ಸೇರಿದೆ.</p>.<p>ಕೆಕೆಆರ್ಡಿಬಿ ನೆರವಿನೊಂದಿಗೆ ಆಳಂದ, ಅಫಜಲಪುರ, ಚಿತ್ತಾಪುರದಲ್ಲಿ ಒಳಚರಂಡಿ ಕಾಮಗಾರಿ ಕುರಿತು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಈ ಮೂಲಕ ವಿವಿಧ ನಗರ–ಪಟ್ಟಣಗಳ ಶುಚಿತ್ವಕ್ಕೆ ಒತ್ತು ನೀಡಲಾಗಿದೆ. ಆದರೆ, ಒಳಚರಂಡಿ ಚೇಂಬರ್ಗಳು ಉಕ್ಕಿ ಹರಿಯುತ್ತಿದ್ದರೂ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಣೆ ಯಾವುದೇ ಕ್ರಮವಹಿಸಿಲ್ಲ ಎಂಬುದು ಸಾರ್ವಜನಿಕರ ಆಕ್ಷೇಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕ ಕಂದಾಯ ವಿಭಾಗದ ಕೇಂದ್ರವಾದ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಆಶಾದಾಯಕ ಕೊಡುಗೆ’ ನೀಡಿದ್ದಾರೆ. ಈ ಸಲವೂ ‘ಕಲ್ಯಾಣ ಕರ್ನಾಟಕ’ದ ಅಭಿವೃದ್ಧಿಗಾಗಿ ಕೆಕೆಆರ್ಡಿಬಿಗೆ ₹5 ಸಾವಿರ ಕೋಟಿ ಹಂಚಿಕೆ ಮಾಡಲಾಗಿದೆ.</p>.<p>ನಿರೀಕ್ಷೆಯಂತೆ ಬಜೆಟ್ನಲ್ಲಿ ವಾಗ್ದರಿ–ರಿಬ್ಬನ್ಪಲ್ಲಿ ರಸ್ತೆ ಅಭಿವೃದ್ಧಿ, ಹಜ್ ಭವನ ಸ್ಥಾಪನೆ, ಪಿ.ಎಂ ಮಿತ್ರ ಮೆಗಾ ಜವಳಿ ಪಾರ್ಕ್ಗೆ ಅನುದಾನ ಸಿಕ್ಕಿದೆ. ರಾಷ್ಟ್ರಕವಿ ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ರಂಗರೂಪಕದಂತೆ ‘ಖಾಜಾ ಬಂದಾನವಾಜ್’ರ ಕುರಿತು ಅಹೋರಾತ್ರಿ ನಾಟಕ ಏರ್ಪಡಿಸುವುದಾಗಿಯೂ ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<p>ಆದರೆ, ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳಿಗೆ ತಕ್ಕ ಸ್ಪಂದನೆ ಸಿಕ್ಕಿಲ್ಲ. ಪ್ರವಾಸಿ ತಾಣಗಳ ಕಾರಿಡಾರ್ ಘೋಷಣೆ, ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಿಸುವ ಬಗೆಗೆ ಬಜೆಟ್ನಲ್ಲಿ ಯಾವುದೇ ಪ್ರಸ್ತಾಪವಿಲ್ಲ.</p>.<p>₹400 ಕೋಟಿ ಅಂದಾಜು ಮೊತ್ತದ 135 ಕಿ.ಮೀ ಉದ್ದದ ವಾಗ್ದರಿ–ರಿಬ್ಬನ್ಪಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗೆ ಕೆಕೆಆರ್ಡಿಬಿಯ ಶೇ 50ರಷ್ಟು ಅನುದಾನ ಒದಗಿಸುವ ಭರವಸೆ ನೀಡಲಾಗಿದೆ. ಈ ಕುರಿತು ಸಚಿವ ಡಾ.ಶರಣಪ್ರಕಾಶ ಪಾಟೀಲ ಇತ್ತೀಚೆಗೆ ಸೇಡಂಗೆ ಮುಖ್ಯಮಂತ್ರಿ ಬಂದಿದ್ದಾಗ ಈ ಬೇಡಿಕೆ ಮಂಡಿಸಿದ್ದರು.</p>.<p>ದೊಡ್ಡಮಟ್ಟದಲ್ಲಿ ಉದ್ಯೋಗ ಸೃಷ್ಟಿ ನಿರೀಕ್ಷೆ ಹುಟ್ಟಿಸಿರುವ ಪಿ.ಎಂ.ಮಿತ್ರ ಮೆಗಾ ಜವಳಿ ಪಾರ್ಕ್ನಲ್ಲಿ ಮೂಲಸೌಲಭ್ಯಗಳನ್ನು ಒದಗಿಸಲು ಪ್ರಸಕ್ತ ವರ್ಷ ₹75 ಕೋಟಿ ಒದಗಿಸಲಾಗಿದೆ. ಜವಳಿ ಪಾರ್ಕ್ಗೆ ಜಿಲ್ಲೆಯ ಜನ ಇನ್ನೂ ಹೆಚ್ಚಿನ ಅನುದಾನ ನಿರೀಕ್ಷಿಸಿದ್ದರು.</p>.<p><strong>ಹಲವು ಕೊಡುಗೆ:</strong></p>.<p>‘ಬಿಯಾಂಡ್ ಬೆಂಗಳೂರು’ ಕಾರ್ಯಕ್ರಮದಡಿ ಕಲಬುರಗಿ ಉದ್ಯಮಿಗಳಿಗೆ ಇನ್ಕ್ಯುಬೇಷನ್ ಸೌಲಭ್ಯಗಳನ್ನು ಒದಗಿಸಲು ಕಿಯೋನಿಕ್ಸ್ ಸಂಸ್ಥೆಯ ಮೂಲಕ ಪ್ಲಗ್–ಅಂಡ್–ಪ್ಲೇ ಸೌಲಭ್ಯದ ʻಲೀಪ್ ಲ್ಯಾಬ್ಸ್ʼಗಳನ್ನು ಸ್ಥಾಪನೆ ಘೋಷಿಸಲಾಗಿದೆ. ಅಲ್ಲದೇ, ಕಲಬುರಗಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರ ಪಿಪಿಪಿ ಮಾದರಿಯಲ್ಲಿ ಆರಂಭಿಸುವುದಾಗಿ ಪ್ರಕಟಿಸಲಾಗಿದೆ. ಇದರಿಂದ ಕಲಬುರಗಿ ಮಾತ್ರವಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ.</p>.<p>ಕಲಬುರಗಿಗೆ ಹಜ್ ಭವನ ಘೋಷಿಸಲಾಗಿದೆ. ಈ ಕುರಿತು ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಬಜೆಟ್ ಪೂರ್ವದಲ್ಲೇ ಬೇಡಿಕೆ ಮಂಡಿಸಿದ್ದರು. ಹಜ್ ಭವನದಿಂದ ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ನೆರವಾಗಲಿದೆ.</p>.<p>ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆಗೆ ಕ್ರಮವಹಿಸುವುದಾಗಿ ಸರ್ಕಾರ ಹೇಳಿದ್ದು, ಈ ಮೂಲಕ ತೊಗರಿನಾಡಿನಲ್ಲಿ ರೇಷ್ಮೆ ಕೃಷಿಗೆ ಉತ್ತೇಜಿಸಲಾಗಿದೆ. ಜಿಮ್ಸ್ನಲ್ಲಿ ₹1 ಕೋಟಿ ವೆಚ್ಚದಲ್ಲಿ ಐವಿಎಫ್ ಕೇಂದ್ರ ಸ್ಥಾಪಿಸುವುದಾಗಿ ಘೋಷಿಸಲಾಗಿದ್ದು, ಕಲಬುರಗಿಯನ್ನು ‘ಹೆಲ್ತ್ ಹಬ್’ ಮಾಡುವ ಪ್ರಯತ್ನಕ್ಕೆ ಬಲ ತುಂಬಲಾಗಿದೆ.</p>.<p>ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಜಿಡಗಾ ಹಾಗೂ ಇತರ ಎರಡು ಜಿಲ್ಲೆಗಳಲ್ಲಿ ಎರಡು ಕಡೆ ಒಟ್ಟು ₹25 ಕೋಟಿ ವೆಚ್ಚದಲ್ಲಿ ಕೆರೆಗಳ ಆಧುನೀಕರಣಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ಅಂತರ್ಜಲ ಹೆಚ್ಚಳ ನಿರೀಕ್ಷಿಸಲಾಗಿದೆ.</p>.<p>ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭೇಟಿ ಸ್ಮರಣಾರ್ಥ ಕಲಬುರಗಿಯಲ್ಲಿ ಅವರ ಹೆಸರಲ್ಲಿ ಸಿಬಿಎಸ್ಇ ಪಠ್ಯಕ್ರಮದ ಕ್ರೈಸ್ ವಸತಿ ಶಾಲೆ ಪ್ರಾರಂಭಿಸುವುದಾಗಿ ಆಯವ್ಯಯದಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಕಾರ್ಮಿಕ ಇಲಾಖೆಯಿಂದ ಮೊದಲ ಹಂತದಲ್ಲಿ ಕಲಬುರಗಿಯಲ್ಲಿ ಒಂದು ಶ್ರಮಿಕ ವಸತಿ ಶಾಲೆ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. 2ನೇ ಹಂತದಲ್ಲಿ ಚಿತ್ತಾಪುರ, ಆಳಂದ ಹಾಗೂ ಅಫಜಲಪುರದಲ್ಲಿ ಶ್ರಮಿಕ ಶಾಲೆಗಳು ತಲೆಎತ್ತಲಿವೆ. ಈ ಶಾಲೆಗಳು ಪ್ರಸ್ತಕ ಶೈಕ್ಷಣಿಕ ವರ್ಷದಿಂದಲೇ ಬಾಡಿಗೆ ಕಟ್ಟಡಗಳಲ್ಲಿ ಆರಂಭವಾಗಲಿವೆ.</p>.<p><strong>ಹಾಸ್ಟೆಲ್ಗಳ ಸ್ಥಾಪನೆ:</strong></p>.<p>ಕಲಬುರಗಿ ಸೇರಿದಂತೆ ಹಲವೆಡೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸೀಟು ಸಾಮರ್ಥ್ಯದ 10 ಹಾಸ್ಟೆಲ್ ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಅಂತೆಯೇ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 150 ಸೀಟು ಸಾಮರ್ಥ್ಯದ 50 ಮೆಟ್ರಿಕ್ ನಂತರದ ಹಾಸ್ಟೆಲ್ಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದ್ದು, ಆ ಪೈಕಿ ಕಲಬುರಗಿ ಸೇರಿದೆ.</p>.<p>ಕೆಕೆಆರ್ಡಿಬಿ ನೆರವಿನೊಂದಿಗೆ ಆಳಂದ, ಅಫಜಲಪುರ, ಚಿತ್ತಾಪುರದಲ್ಲಿ ಒಳಚರಂಡಿ ಕಾಮಗಾರಿ ಕುರಿತು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಈ ಮೂಲಕ ವಿವಿಧ ನಗರ–ಪಟ್ಟಣಗಳ ಶುಚಿತ್ವಕ್ಕೆ ಒತ್ತು ನೀಡಲಾಗಿದೆ. ಆದರೆ, ಒಳಚರಂಡಿ ಚೇಂಬರ್ಗಳು ಉಕ್ಕಿ ಹರಿಯುತ್ತಿದ್ದರೂ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಣೆ ಯಾವುದೇ ಕ್ರಮವಹಿಸಿಲ್ಲ ಎಂಬುದು ಸಾರ್ವಜನಿಕರ ಆಕ್ಷೇಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>