<p><strong>ಕಲಬುರಗಿ:</strong> ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬರುವ ಹಾಗೂ ಇಲ್ಲಿಂದ ಹೊರಡುವ ಬಸ್ಗಳ ಸುಗಮ ಸಂಚಾರಕ್ಕಾಗಿ ಸಿಐಬಿ ಕಾಲೊನಿ ಭಾಗದಲ್ಲಿ ಮತ್ತೊಂದು ದ್ವಾರವನ್ನು ಸಾರ್ವಜನಿಕ ಸಂಚಾರಕ್ಕಾಗಿ ಸೋಮವಾರ ಮುಕ್ತಗೊಳಿಸಲಾಗಿದೆ.</p>.<p>ಕೇಂದ್ರ ಬಸ್ ನಿಲ್ದಾಣದಲ್ಲಿ ಇದುವರೆಗೆ ಎರಡು ದ್ವಾರಗಳಿದ್ದವು. ಹೊಸ ಜೇವರ್ಗಿ ರಸ್ತೆ ಕಡೆಯ ದ್ವಾರದಿಂದ ಬಸ್ಗಳು ಬರುತ್ತಿದ್ದವು. ಎಂಎಸ್ಕೆ ಮಿಲ್ಗೆ ಹೋಗುವ ಮಾರ್ಗದಲ್ಲಿ ನಿಲ್ದಾಣದಿಂದ ಹೊರಕ್ಕೆ ಹೋಗುತ್ತಿದ್ದವು. ಇದರಿಂದ ಸಂಚಾರ ದಟ್ಟಣಿ ಜಾಸ್ತಿಯಾಗುತ್ತಿತ್ತು. ಹೀಗಾಗಿ, ಸಿಐಬಿ ಕಾಲೊನಿ ಕಡೆಗೆ ಬಸ್ಗಳು ಹೊರಹೋಗಲಿವೆ.</p>.<p>ಕೇಂದ್ರ ಬಸ್ ನಿಲ್ದಾಣದಲ್ಲಿ ಹೊಸ ದ್ವಾರವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿದರು. ಈ ನಿಲ್ದಾಣದಿಂದ ಬಸ್ಗಳು ಒಳಮಾರ್ಗದಲ್ಲಿ ನೇರವಾಗಿ ಕಣ್ಣಿ ಮಾರ್ಕೆಟ್ ಮೂಲಕ ಸಂಚರಿಸಲಿವೆ.</p>.<p>ಪಾಲಿಕೆ ಮೇಯರ್ ವರ್ಷಾ ಜಾನೆ, ಪಾಲಿಕೆ ಸದಸ್ಯ ಸಚಿನ್ ಶಿರವಾಳ, ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ. ಪಾಟೀಲ, ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ, ವಿಭಾಗೀಯ ನಿಯಂತ್ರಣಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಪ್ರಯಾಣಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬರುವ ಹಾಗೂ ಇಲ್ಲಿಂದ ಹೊರಡುವ ಬಸ್ಗಳ ಸುಗಮ ಸಂಚಾರಕ್ಕಾಗಿ ಸಿಐಬಿ ಕಾಲೊನಿ ಭಾಗದಲ್ಲಿ ಮತ್ತೊಂದು ದ್ವಾರವನ್ನು ಸಾರ್ವಜನಿಕ ಸಂಚಾರಕ್ಕಾಗಿ ಸೋಮವಾರ ಮುಕ್ತಗೊಳಿಸಲಾಗಿದೆ.</p>.<p>ಕೇಂದ್ರ ಬಸ್ ನಿಲ್ದಾಣದಲ್ಲಿ ಇದುವರೆಗೆ ಎರಡು ದ್ವಾರಗಳಿದ್ದವು. ಹೊಸ ಜೇವರ್ಗಿ ರಸ್ತೆ ಕಡೆಯ ದ್ವಾರದಿಂದ ಬಸ್ಗಳು ಬರುತ್ತಿದ್ದವು. ಎಂಎಸ್ಕೆ ಮಿಲ್ಗೆ ಹೋಗುವ ಮಾರ್ಗದಲ್ಲಿ ನಿಲ್ದಾಣದಿಂದ ಹೊರಕ್ಕೆ ಹೋಗುತ್ತಿದ್ದವು. ಇದರಿಂದ ಸಂಚಾರ ದಟ್ಟಣಿ ಜಾಸ್ತಿಯಾಗುತ್ತಿತ್ತು. ಹೀಗಾಗಿ, ಸಿಐಬಿ ಕಾಲೊನಿ ಕಡೆಗೆ ಬಸ್ಗಳು ಹೊರಹೋಗಲಿವೆ.</p>.<p>ಕೇಂದ್ರ ಬಸ್ ನಿಲ್ದಾಣದಲ್ಲಿ ಹೊಸ ದ್ವಾರವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿದರು. ಈ ನಿಲ್ದಾಣದಿಂದ ಬಸ್ಗಳು ಒಳಮಾರ್ಗದಲ್ಲಿ ನೇರವಾಗಿ ಕಣ್ಣಿ ಮಾರ್ಕೆಟ್ ಮೂಲಕ ಸಂಚರಿಸಲಿವೆ.</p>.<p>ಪಾಲಿಕೆ ಮೇಯರ್ ವರ್ಷಾ ಜಾನೆ, ಪಾಲಿಕೆ ಸದಸ್ಯ ಸಚಿನ್ ಶಿರವಾಳ, ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ. ಪಾಟೀಲ, ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ, ವಿಭಾಗೀಯ ನಿಯಂತ್ರಣಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಪ್ರಯಾಣಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>