<p>ಚಿಂಚೋಳಿ: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದ ಗಾಯಕ ಹಾಗೂ ಕಲಾವಿದ ಚಿಂಚೋಳಿ ತಾಲ್ಲೂಕಿನ ಐನೋಳ್ಳಿಯ ಶರಣಯ್ಯ ಸ್ವಾಮಿ ಅಲ್ಲಾಪುರ (54) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.</p>.<p>ಚಿಂಚೋಳಿ ಚಂದಾಪುರ ಮಾರ್ಗದಲ್ಲಿ ಬೈಕ್ ಮಧ್ಯೆ ಭಾನುವಾರ ರಾತ್ರಿ ಡಿಕ್ಕಿ ಸಂಭವಿಸಿ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಸುಕಿನ ಜಾವ 4 ಗಂಟೆಗೆ ಅಸುನೀಗಿದ್ದಾರೆ.</p>.<p>ಮೃತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಐನೋಳ್ಳಿಯಲ್ಲಿ ಸೋಮವಾರ ನಡೆಯಿತು.</p>.<p>ಘಟನೆಯಲ್ಲಿ ಎದುರಾಳಿ ಬೈಕ್ ಸವಾರ ಎಂ.ಡಿ ನವಾಜ ಶಬ್ಬೀರ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p>ಸಬ್ ಇನಸ್ಪೆಕ್ಟರ ಗಂಗಮ್ಮ ಜಿನಿಕೇರಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-31-1445059238</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದ ಗಾಯಕ ಹಾಗೂ ಕಲಾವಿದ ಚಿಂಚೋಳಿ ತಾಲ್ಲೂಕಿನ ಐನೋಳ್ಳಿಯ ಶರಣಯ್ಯ ಸ್ವಾಮಿ ಅಲ್ಲಾಪುರ (54) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.</p>.<p>ಚಿಂಚೋಳಿ ಚಂದಾಪುರ ಮಾರ್ಗದಲ್ಲಿ ಬೈಕ್ ಮಧ್ಯೆ ಭಾನುವಾರ ರಾತ್ರಿ ಡಿಕ್ಕಿ ಸಂಭವಿಸಿ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಸುಕಿನ ಜಾವ 4 ಗಂಟೆಗೆ ಅಸುನೀಗಿದ್ದಾರೆ.</p>.<p>ಮೃತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಐನೋಳ್ಳಿಯಲ್ಲಿ ಸೋಮವಾರ ನಡೆಯಿತು.</p>.<p>ಘಟನೆಯಲ್ಲಿ ಎದುರಾಳಿ ಬೈಕ್ ಸವಾರ ಎಂ.ಡಿ ನವಾಜ ಶಬ್ಬೀರ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p>ಸಬ್ ಇನಸ್ಪೆಕ್ಟರ ಗಂಗಮ್ಮ ಜಿನಿಕೇರಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-31-1445059238</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>