ಸಭೆಗೆ ಸುಮಾರು 10 ದಿನಗಳ ಹಿಂದೆ ಪಾಲಿಕೆಯ ಸಭಾ ಶಾಖೆಯಿಂದ ಸಂಬಂಧಪಟ್ಟವರಿಗೆ ಸಭಾ ಕಾರ್ಯಸೂಚಿ ನೀಡಿ, ವಿಷಯ ಸಂಬಂಧ ಪೂರಕ ಟಿಪ್ಪಣಿ ಸಲ್ಲಿಸುವಂತೆ ತಿಳಿಸಲಾಗಿತ್ತು. ಆದರೆ, ಸಂಬಂಧಪಟ್ಟ ಶಾಖೆಗಳು ಸ್ಥಾಯಿ ಸಮಿತಿಯ ಯಾವ ಸದಸ್ಯರಿಗೂ ಟಿಪ್ಪಣಿ ನೀಡಿಲ್ಲ. ಕೆಲವು ಶಾಖೆಯ ಅಧಿಕಾರಿಗಳು ಸಭೆಗೆ ಗೈರು ಹಾಜರಾಗಿದ್ದರು.