ಗ್ರಾಮದ ಮರಗಮ್ಮನ ದೇವಸ್ಥಾನ ಆವರಣದಿಂದ ಬೆಂಕಿಯ ಕಿಡಿ ಹೊತ್ತೊಯ್ದು ವಿವಿಧೆಡೆ ಕಾಮದಹನ ನಡೆಸುವ ಸಂಪ್ರದಾಯ ಪಾಲಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ನೂರಾರು ಜನರು ಒಂದೆಡೆ ಸೇರಿದ್ದರು. ಬೆಂಕಿಯ ಕಿಡಿ ತೆಗೆದುಕೊಂಡು ಹೋಗುವ ವಿಚಾರವಾಗಿ ಕೆಲವರ ನಡುವೆ ಮನಸ್ತಾಪ ಉಂಟಾಗಿ ಮಾತಿಗೆ ಮಾತು ಬೆಳೆದು ಕಲಹ ಶುರುವಾಯಿತು. ಈ ವೇಳೆ ರವಿ ಎಂಬಾತನನ್ನು ಜೋರಾಗಿ ತಳ್ಳಿದ ಪರಿಣಾಮ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.