<p>ಕಲಬುರಗಿ: ಅಡುಗೆಗೆ ಉಪಯೋಗಿಸುವ ಗ್ಯಾಸ್ ಸಿಲಿಂಡರ್ಗಳನ್ನು ಆಟೊರಿಕ್ಷಾಗಳಿಗೆ ತುಂಬುತ್ತಿದ್ದ ವ್ಯಕ್ತಿಯ ವಿರುದ್ಧ ಚೌಕ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<p>ಈರಣ್ಣ ಪ್ರಕಾಶ ಜಮಾದಾರ ಆರೋಪಿ. ಆಹಾರ ನಿರೀಕ್ಷಕ ಯಲ್ಲಾಲಿಂಗ ಹಾಗೂ ಸಿಸಿಬಿ ಘಟಕದ ಪೊಲೀಸ್ ಸಿಬ್ಬಂದಿ ದಾಳಿ ಮಾಡಿದ್ದಾರೆ.</p>.<p>‘ನಗರದ ಶಹಾಬಜಾರ್ ನಾಕಾ ಹತ್ತಿರದ ಗಂದಿಗುಡಿ ಲೇಔಟ್ನಲ್ಲಿನ ಭೂಮಿ ಗ್ಯಾಸ್ ಸೇಲ್ಸ್ ಅಂಡ್ ಸರ್ವೀಸ್ ಅಂಗಡಿ ಹತ್ತಿರ ಆರೋಪಿಯು ಅಡುಗೆ ಗ್ಯಾಸ್ ಸಿಲಿಂಡರ್ಗಳನ್ನು ಆಟೊರಿಕ್ಷಾಗಳಿಗೆ ತುಂಬುತ್ತಿದ್ದ. 14 ಕೆ.ಜಿಯ ಮತ್ತು 5 ಕೆಜಿಯ ಸಿಲಿಂಡರ್ ಮತ್ತು ತೂಕದ ಯಂತ್ರ ವಶಪಡಿಸಿಕೊಳ್ಳಲಾಗಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಚಿನ್ನಾಭರಣ ಕಳವು: ಮನೆ ಕೀಲಿ ಮುರಿದು ಚಿನ್ನಾಭರಣ ಕಳವು ಮಾಡಿದ ಘಟನೆ ಸದಾಶಿವ ನಗರದ ಪ್ರಭಾಕರ ಶಾಸ್ತ್ರಿ ಅವರ ಮನೆಯಲ್ಲಿ ನಡೆದಿದೆ. ಬಂಗಾರದ 5 ಗ್ರಾಂ ಬೆಂಡೋಲಿ, 5 ಗ್ರಾಂ ಜುಮಕಿ, ಕಿವಿಯೋಲೆ, 5 ಗ್ರಾಂ ತಾಳಿ, 4 ಗ್ರಾಂ ಬೆಂಡೋಲಿ ಸೇರಿ 250 ಗ್ರಾಂ ಬೆಳ್ಳಿ ಸಾಮಗ್ರಿ ಕಳವು ಆಗಿವೆ. ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-34-1479563955</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಅಡುಗೆಗೆ ಉಪಯೋಗಿಸುವ ಗ್ಯಾಸ್ ಸಿಲಿಂಡರ್ಗಳನ್ನು ಆಟೊರಿಕ್ಷಾಗಳಿಗೆ ತುಂಬುತ್ತಿದ್ದ ವ್ಯಕ್ತಿಯ ವಿರುದ್ಧ ಚೌಕ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<p>ಈರಣ್ಣ ಪ್ರಕಾಶ ಜಮಾದಾರ ಆರೋಪಿ. ಆಹಾರ ನಿರೀಕ್ಷಕ ಯಲ್ಲಾಲಿಂಗ ಹಾಗೂ ಸಿಸಿಬಿ ಘಟಕದ ಪೊಲೀಸ್ ಸಿಬ್ಬಂದಿ ದಾಳಿ ಮಾಡಿದ್ದಾರೆ.</p>.<p>‘ನಗರದ ಶಹಾಬಜಾರ್ ನಾಕಾ ಹತ್ತಿರದ ಗಂದಿಗುಡಿ ಲೇಔಟ್ನಲ್ಲಿನ ಭೂಮಿ ಗ್ಯಾಸ್ ಸೇಲ್ಸ್ ಅಂಡ್ ಸರ್ವೀಸ್ ಅಂಗಡಿ ಹತ್ತಿರ ಆರೋಪಿಯು ಅಡುಗೆ ಗ್ಯಾಸ್ ಸಿಲಿಂಡರ್ಗಳನ್ನು ಆಟೊರಿಕ್ಷಾಗಳಿಗೆ ತುಂಬುತ್ತಿದ್ದ. 14 ಕೆ.ಜಿಯ ಮತ್ತು 5 ಕೆಜಿಯ ಸಿಲಿಂಡರ್ ಮತ್ತು ತೂಕದ ಯಂತ್ರ ವಶಪಡಿಸಿಕೊಳ್ಳಲಾಗಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಚಿನ್ನಾಭರಣ ಕಳವು: ಮನೆ ಕೀಲಿ ಮುರಿದು ಚಿನ್ನಾಭರಣ ಕಳವು ಮಾಡಿದ ಘಟನೆ ಸದಾಶಿವ ನಗರದ ಪ್ರಭಾಕರ ಶಾಸ್ತ್ರಿ ಅವರ ಮನೆಯಲ್ಲಿ ನಡೆದಿದೆ. ಬಂಗಾರದ 5 ಗ್ರಾಂ ಬೆಂಡೋಲಿ, 5 ಗ್ರಾಂ ಜುಮಕಿ, ಕಿವಿಯೋಲೆ, 5 ಗ್ರಾಂ ತಾಳಿ, 4 ಗ್ರಾಂ ಬೆಂಡೋಲಿ ಸೇರಿ 250 ಗ್ರಾಂ ಬೆಳ್ಳಿ ಸಾಮಗ್ರಿ ಕಳವು ಆಗಿವೆ. ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-34-1479563955</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>