<p><strong>ಕಲಬುರಗಿ:</strong> ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ಭೀಮನಗರದ ನಿವಾಸಿ ವಿಜಯಕುಮಾರ್ ಕಾಂಬಳೆ (25) ಎಂಬ ದಲಿತ ಯುವಕನ ಹತ್ಯೆ ಮಾಡಿದ ಆರೋಪದ ಮೇರೆಗೆ ವಾಡಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.</p>.<p>ವಾಡಿ ಪಟ್ಟಣದ ಮರಾಠಿ ಗಲ್ಲಿ ನಿವಾಸಿ ಮೊಹಮ್ಮದ್ ಶಹಾಬುದ್ದೀನ್ ಹಾಗೂ ನವಾಜ್ ಬಂಧಿತರು.</p>.<p>ವಿಜಯಕುಮಾರ್ ಹಾಗೂ ಶಹಾಬುದ್ದೀನ್ನ ತಂಗಿ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಬಗ್ಗೆ ಶಹಾಬುದ್ದೀನ್ ತಕರಾರು ತೆಗೆದು ಒಂಬತ್ತು ತಿಂಗಳ ಹಿಂದೆ ವಿಜಯಕುಮಾರ್ ಮೇಲೆ ಹಲ್ಲೆ ಮಾಡಿದ್ದ. ಆ ನಂತರವೂ ಮೊಬೈಲ್ನಲ್ಲಿ ಪ್ರೇಮಿಗಳು ಚಾಟಿಂಗ್ ಮಾಡುವುದು ಹಾಗೂ ಭೇಟಿಯಾಗುವುದನ್ನು ಮುಂದುವರಿಸಿದ್ದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತ ನವಾಜ್ ನೊಂದಿಗೆ ಸೇರಿಕೊಂಡು ಕೊಲೆ ಮಾಡಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಹತ್ಯೆಗೂ ಮುನ್ನ ಫೋನ್ ಕರೆ:</strong> ಹತ್ಯೆ ಮಾಡುವುದಕ್ಕೂ ಮುನ್ನ ಶಹಾಬುದ್ದೀನ್ ವಿಜಯಕುಮಾರ್ಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದ. ಆದರೆ, ಈ ಎಚ್ಚರಿಕೆಯನ್ನು ಕಡೆಗಣಿಸಿದ್ದೇ ಮುಳುವಾಯಿತು ಎಂದು ತಿಳಿದು ಬಂದಿದೆ.</p>.<p>ಪೊಲೀಸರು ಕೊಲೆ ಹಾಗೂ ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.</p>.<p>ಶಾಸಕ ಪ್ರಿಯಾಂಕ್ ಖರ್ಗೆ ಮೃತ ವಿಜಯಕುಮಾರ್ ಕಾಂಬಳೆ ಅವರ ತಾಯಿ ರಾಜೇಶ್ವರಿ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.</p>.<p>ಈ ಸಂದರ್ಭದಲ್ಲಿ ರಾಜೇಶ್ವರಿ ಅವರು ಪ್ರಿಯಾಂಕ್ ಅವರ ಕಾಲಿಗೆರಗಿ ಮಗನ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಕಣ್ಣೀರಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ಭೀಮನಗರದ ನಿವಾಸಿ ವಿಜಯಕುಮಾರ್ ಕಾಂಬಳೆ (25) ಎಂಬ ದಲಿತ ಯುವಕನ ಹತ್ಯೆ ಮಾಡಿದ ಆರೋಪದ ಮೇರೆಗೆ ವಾಡಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.</p>.<p>ವಾಡಿ ಪಟ್ಟಣದ ಮರಾಠಿ ಗಲ್ಲಿ ನಿವಾಸಿ ಮೊಹಮ್ಮದ್ ಶಹಾಬುದ್ದೀನ್ ಹಾಗೂ ನವಾಜ್ ಬಂಧಿತರು.</p>.<p>ವಿಜಯಕುಮಾರ್ ಹಾಗೂ ಶಹಾಬುದ್ದೀನ್ನ ತಂಗಿ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಬಗ್ಗೆ ಶಹಾಬುದ್ದೀನ್ ತಕರಾರು ತೆಗೆದು ಒಂಬತ್ತು ತಿಂಗಳ ಹಿಂದೆ ವಿಜಯಕುಮಾರ್ ಮೇಲೆ ಹಲ್ಲೆ ಮಾಡಿದ್ದ. ಆ ನಂತರವೂ ಮೊಬೈಲ್ನಲ್ಲಿ ಪ್ರೇಮಿಗಳು ಚಾಟಿಂಗ್ ಮಾಡುವುದು ಹಾಗೂ ಭೇಟಿಯಾಗುವುದನ್ನು ಮುಂದುವರಿಸಿದ್ದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತ ನವಾಜ್ ನೊಂದಿಗೆ ಸೇರಿಕೊಂಡು ಕೊಲೆ ಮಾಡಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಹತ್ಯೆಗೂ ಮುನ್ನ ಫೋನ್ ಕರೆ:</strong> ಹತ್ಯೆ ಮಾಡುವುದಕ್ಕೂ ಮುನ್ನ ಶಹಾಬುದ್ದೀನ್ ವಿಜಯಕುಮಾರ್ಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದ. ಆದರೆ, ಈ ಎಚ್ಚರಿಕೆಯನ್ನು ಕಡೆಗಣಿಸಿದ್ದೇ ಮುಳುವಾಯಿತು ಎಂದು ತಿಳಿದು ಬಂದಿದೆ.</p>.<p>ಪೊಲೀಸರು ಕೊಲೆ ಹಾಗೂ ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.</p>.<p>ಶಾಸಕ ಪ್ರಿಯಾಂಕ್ ಖರ್ಗೆ ಮೃತ ವಿಜಯಕುಮಾರ್ ಕಾಂಬಳೆ ಅವರ ತಾಯಿ ರಾಜೇಶ್ವರಿ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.</p>.<p>ಈ ಸಂದರ್ಭದಲ್ಲಿ ರಾಜೇಶ್ವರಿ ಅವರು ಪ್ರಿಯಾಂಕ್ ಅವರ ಕಾಲಿಗೆರಗಿ ಮಗನ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಕಣ್ಣೀರಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>