<p><strong>ಕಲಬುರಗಿ:</strong> ನಗರದ ಓಝಾ ಬಡಾವಣೆಯ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಭರವಸೆ ನೀಡಿದರು.</p>.<p>ಇಲ್ಲಿಯ ಶ್ರೀಗುರು ಸ್ವತಂತ್ರ ಪಿ.ಯು ವಿಜ್ಞಾನ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಓಝಾ ಕಾಲೊನಿ ನಿವಾಸಿಗಳ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಮ ಮಂದಿರ ವೃತ್ತದಿಂದ ನಾಗನಹಳ್ಳಿ ವೃತ್ತದತ್ತ ಹೋಗುವ ನಗರದ ವರ್ತುಲ ರಸ್ತೆಯಲ್ಲಿ ಕಾಲೊನಿಯ ಪ್ರವೇಶಕ್ಕೆ ವ್ಯವಸ್ಥೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಮಾತನಾಡಿ ನಿವಾಸಿಗಳ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನ ಮಾಡಲಾಗುದು’ ಎಂದರು.</p>.<p>ದಿನದ 24 ಗಂಟೆ ನೀರು ಪೂರೈಸುವ ಯೋಜನೆಯಲ್ಲಿ ಕಂಡುಬಂದಿರುವ ವಿಳಂಬಕ್ಕೆ ಎಲ್ ಅಂಡ್ ಟಿ ಕಂಪನಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ‘ಯೋಜನೆಯನ್ನು 2026ರ ಅಂತ್ಯಕ್ಕೆ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ’ ಎಂದು ವಿವರಿಸಿದರು.</p>.<p>‘ನೀರು ಪೂರೈಕೆ ಪೈಪ್ಲೈನ್ ಹಾಕಲು ಅಗೆದ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಆರಂಭಿಸಲಾಗುವುದು’ ಎಂದು ಬಸವರಾಜ ಪಾಟೀಲ ಬಿರಾಳ ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಶ್ರೀನಿವಾಸ ಸಿರನೂರಕರ್, ‘ಸಂಘವು ಕೇವಲ ಬಡಾವಣೆ ಸಮಸ್ಯೆಗಳ ಬಗ್ಗೆಯಷ್ಟೇ ಅಲ್ಲದೇ ನಗರದ ಸುಧಾರಣಾ ಕಾರ್ಯದಲ್ಲೂ ಕೈಜೋಡಿಸುವ ಉದ್ದೇಶ ಹೊಂದಿದೆ’ ಎಂದರು.</p>.<p>ಶಾಸಕರಿಗೆ ಮನವಿಪತ್ರ ಸಲ್ಲಿಸಲಾಯಿತು. ಸಂಘದ ಉಪಾಧ್ಯಕ್ಷ ನಿತಿನ್ ನಾಯ್ಕ, ಕೋಶಾಧಿಕಾರಿ ಅಂಕಿತ ಓಝಾ ಉಪಸ್ಥಿತರಿದ್ದರು.</p>.<p>ಗೌರಿ ನರಿಬೋಳ ಕುಲಕರ್ಣಿ ಪ್ರಾರ್ಥನಾ ಗೀತೆ ಹಾಡಿದರು. ಅಧ್ಯಾಪಕ ಬಾಳಿ ಸ್ವಾಗತಿಸಿದರು. ಅರುಣಕುಮಾರ ಕುಲಕರ್ಣಿ ಸಂಘದ ಧೇಯೋದ್ದೇಶ ವಿವರಿಸಿದರು. ಆನಂದಕುಮಾರ ಜೋಶಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಓಝಾ ಬಡಾವಣೆಯ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಭರವಸೆ ನೀಡಿದರು.</p>.<p>ಇಲ್ಲಿಯ ಶ್ರೀಗುರು ಸ್ವತಂತ್ರ ಪಿ.ಯು ವಿಜ್ಞಾನ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಓಝಾ ಕಾಲೊನಿ ನಿವಾಸಿಗಳ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಮ ಮಂದಿರ ವೃತ್ತದಿಂದ ನಾಗನಹಳ್ಳಿ ವೃತ್ತದತ್ತ ಹೋಗುವ ನಗರದ ವರ್ತುಲ ರಸ್ತೆಯಲ್ಲಿ ಕಾಲೊನಿಯ ಪ್ರವೇಶಕ್ಕೆ ವ್ಯವಸ್ಥೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಮಾತನಾಡಿ ನಿವಾಸಿಗಳ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನ ಮಾಡಲಾಗುದು’ ಎಂದರು.</p>.<p>ದಿನದ 24 ಗಂಟೆ ನೀರು ಪೂರೈಸುವ ಯೋಜನೆಯಲ್ಲಿ ಕಂಡುಬಂದಿರುವ ವಿಳಂಬಕ್ಕೆ ಎಲ್ ಅಂಡ್ ಟಿ ಕಂಪನಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ‘ಯೋಜನೆಯನ್ನು 2026ರ ಅಂತ್ಯಕ್ಕೆ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ’ ಎಂದು ವಿವರಿಸಿದರು.</p>.<p>‘ನೀರು ಪೂರೈಕೆ ಪೈಪ್ಲೈನ್ ಹಾಕಲು ಅಗೆದ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಆರಂಭಿಸಲಾಗುವುದು’ ಎಂದು ಬಸವರಾಜ ಪಾಟೀಲ ಬಿರಾಳ ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಶ್ರೀನಿವಾಸ ಸಿರನೂರಕರ್, ‘ಸಂಘವು ಕೇವಲ ಬಡಾವಣೆ ಸಮಸ್ಯೆಗಳ ಬಗ್ಗೆಯಷ್ಟೇ ಅಲ್ಲದೇ ನಗರದ ಸುಧಾರಣಾ ಕಾರ್ಯದಲ್ಲೂ ಕೈಜೋಡಿಸುವ ಉದ್ದೇಶ ಹೊಂದಿದೆ’ ಎಂದರು.</p>.<p>ಶಾಸಕರಿಗೆ ಮನವಿಪತ್ರ ಸಲ್ಲಿಸಲಾಯಿತು. ಸಂಘದ ಉಪಾಧ್ಯಕ್ಷ ನಿತಿನ್ ನಾಯ್ಕ, ಕೋಶಾಧಿಕಾರಿ ಅಂಕಿತ ಓಝಾ ಉಪಸ್ಥಿತರಿದ್ದರು.</p>.<p>ಗೌರಿ ನರಿಬೋಳ ಕುಲಕರ್ಣಿ ಪ್ರಾರ್ಥನಾ ಗೀತೆ ಹಾಡಿದರು. ಅಧ್ಯಾಪಕ ಬಾಳಿ ಸ್ವಾಗತಿಸಿದರು. ಅರುಣಕುಮಾರ ಕುಲಕರ್ಣಿ ಸಂಘದ ಧೇಯೋದ್ದೇಶ ವಿವರಿಸಿದರು. ಆನಂದಕುಮಾರ ಜೋಶಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>