<p><strong>ಕಲಬುರಗಿ:</strong> ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಕಲಬುರಗಿ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸೋಮವಾರ ಔಪಚಾರಿಕ ಚಾಲನೆ ದೊರೆತಿದೆ.</p>.ಕಮಲಾಪುರ: ಕಿರಾಣಿ ಅಂಗಡಿ, ಎರಡು ಚಿನ್ನಾಭರಣ ಮಳಿಗೆಯಲ್ಲಿ ಕಳವು.<p>ಸಮ್ಮೇಳನದ ಅಂಗವಾಗಿ ಪರಿಷತ್ ಭವನದ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಪರಿಷತ್ ಧ್ವಜಾರೋಹಣದ ನಡೆಯಿತು.</p><p>ಬಳಿಕ ವಿವಿಧ ಕಲಾತಂಡಗಳೊಂದಿಗೆ ಸಮ್ಮೇಳನದ ಅಧ್ಯಕ್ಷ ಮುಡಬಿ ಗುಂಡೇರಾವ ಅವರ ಮೆರವಣಿಗೆ ಸಂಭ್ರಮದಿಂದ ನಡೆಯಿತು.</p><p>ಡೊಳ್ಳು ಕುಣಿತ, ಮಹಿಳೆಯರ ಹಲಗೆ ವಾದನ, ಸಾಂಪ್ರದಾಯಿಕ ವೇಷತೊಟ್ಟ ಲಂಬಾಣಿ ಕಲಾವಿದರ ಕುಣಿತ, ಸಂಬಾಳ ವಾದನಗಳು ಮೆರವಣಿಗೆ ಅಂದ ಹೆಚ್ಚಿಸಿವೆ.</p><p>ನಗರದ ಕನ್ನಡ ಭವನದ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಗೋಷ್ಠಿಗಳು ನಡೆಯಲಿವೆ.</p>.ಮಹಾಶಿವರಾತ್ರಿ: ಕಲಬುರಗಿ ಜಿಲ್ಲೆಯಾದ್ಯಂತ ಶಿವನಾಮಸ್ಮರಣೆ.<p>ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಕಲಬುರಗಿ ಜಿಲ್ಲಾಡಳಿತದ ಭವನದಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮಾರ್ಗವಾಗಿ ಕನ್ನಡ ಭವನವರೆಗೆ ನಡೆಯಿತು.</p><p> ಲಿಂ.ಶರಣಬಸವಪ್ಪ ಅಪ್ಪ ವೇದಿಕೆಯಲ್ಲಿ ನಡೆಯಲಿರುವ ಸಮ್ಮೇಳವನ್ನು ಬೆಂಗಳೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಸೋಮಶೇಖರ್ ಉದ್ಘಾಟಿಸುವರು. ಶ್ರೀಶೈಲ ಸಾರಂಗಮಠದ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p><p>ಸಮ್ಮೇಳನದ ಅಧ್ಯಕ್ಷ ಮುಡಬಿ ಗುಂಡೇರಾವ, ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷೆ, ಶರಣ ಬಸವ ವಿವಿ ಕುಲಾಧಿಪತಿ ದಾಕ್ಷಾಯಣಿ ಎಸ್. ಅಪ್ಪ ಸೇರಿದಂತೆ ಹಲವರು ಪಾಲ್ಗೊಳ್ಳುವರು. ಪೊಲೀಸ್ ಅಧಿಕಾರಿ, ಜಾನಪದ ವಿದ್ವಾಂಸ ಜ್ಯೋತಿರ್ಲಿಂಗ ಹೊನಕಟ್ಟಿ ‘ಗುಲಾಬಿ ಗಂಧ’ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.</p>.ಕಲಬುರಗಿ|12 ದಿನಗಳಿಂದ 9 ಬಡಾವಣೆಗಳಿಗಿಲ್ಲ ನೀರು: ಸಾರ್ವಜನಿಕರ ಗೋಳು ಕೇಳುವವರಾರು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಕಲಬುರಗಿ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸೋಮವಾರ ಔಪಚಾರಿಕ ಚಾಲನೆ ದೊರೆತಿದೆ.</p>.ಕಮಲಾಪುರ: ಕಿರಾಣಿ ಅಂಗಡಿ, ಎರಡು ಚಿನ್ನಾಭರಣ ಮಳಿಗೆಯಲ್ಲಿ ಕಳವು.<p>ಸಮ್ಮೇಳನದ ಅಂಗವಾಗಿ ಪರಿಷತ್ ಭವನದ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಪರಿಷತ್ ಧ್ವಜಾರೋಹಣದ ನಡೆಯಿತು.</p><p>ಬಳಿಕ ವಿವಿಧ ಕಲಾತಂಡಗಳೊಂದಿಗೆ ಸಮ್ಮೇಳನದ ಅಧ್ಯಕ್ಷ ಮುಡಬಿ ಗುಂಡೇರಾವ ಅವರ ಮೆರವಣಿಗೆ ಸಂಭ್ರಮದಿಂದ ನಡೆಯಿತು.</p><p>ಡೊಳ್ಳು ಕುಣಿತ, ಮಹಿಳೆಯರ ಹಲಗೆ ವಾದನ, ಸಾಂಪ್ರದಾಯಿಕ ವೇಷತೊಟ್ಟ ಲಂಬಾಣಿ ಕಲಾವಿದರ ಕುಣಿತ, ಸಂಬಾಳ ವಾದನಗಳು ಮೆರವಣಿಗೆ ಅಂದ ಹೆಚ್ಚಿಸಿವೆ.</p><p>ನಗರದ ಕನ್ನಡ ಭವನದ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಗೋಷ್ಠಿಗಳು ನಡೆಯಲಿವೆ.</p>.ಮಹಾಶಿವರಾತ್ರಿ: ಕಲಬುರಗಿ ಜಿಲ್ಲೆಯಾದ್ಯಂತ ಶಿವನಾಮಸ್ಮರಣೆ.<p>ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಕಲಬುರಗಿ ಜಿಲ್ಲಾಡಳಿತದ ಭವನದಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮಾರ್ಗವಾಗಿ ಕನ್ನಡ ಭವನವರೆಗೆ ನಡೆಯಿತು.</p><p> ಲಿಂ.ಶರಣಬಸವಪ್ಪ ಅಪ್ಪ ವೇದಿಕೆಯಲ್ಲಿ ನಡೆಯಲಿರುವ ಸಮ್ಮೇಳವನ್ನು ಬೆಂಗಳೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಸೋಮಶೇಖರ್ ಉದ್ಘಾಟಿಸುವರು. ಶ್ರೀಶೈಲ ಸಾರಂಗಮಠದ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p><p>ಸಮ್ಮೇಳನದ ಅಧ್ಯಕ್ಷ ಮುಡಬಿ ಗುಂಡೇರಾವ, ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷೆ, ಶರಣ ಬಸವ ವಿವಿ ಕುಲಾಧಿಪತಿ ದಾಕ್ಷಾಯಣಿ ಎಸ್. ಅಪ್ಪ ಸೇರಿದಂತೆ ಹಲವರು ಪಾಲ್ಗೊಳ್ಳುವರು. ಪೊಲೀಸ್ ಅಧಿಕಾರಿ, ಜಾನಪದ ವಿದ್ವಾಂಸ ಜ್ಯೋತಿರ್ಲಿಂಗ ಹೊನಕಟ್ಟಿ ‘ಗುಲಾಬಿ ಗಂಧ’ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.</p>.ಕಲಬುರಗಿ|12 ದಿನಗಳಿಂದ 9 ಬಡಾವಣೆಗಳಿಗಿಲ್ಲ ನೀರು: ಸಾರ್ವಜನಿಕರ ಗೋಳು ಕೇಳುವವರಾರು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>