<p><strong>ಕಲಬುರಗಿ:</strong> ಕುಡಿಯುವ ನೀರಿನ ತುರ್ತು ಸಮಸ್ಯೆ ಪರಿಹಾರಕ್ಕಾಗಿ ವಿವಿಧ ಜಿಲ್ಲೆಗಳಿಗೆ ₹ 200 ಕೋಟಿ ಒದಗಿಸಲಾಗಿದ್ದು, ₹ 55 ಕೋಟಿಯಷ್ಟೇ ಖರ್ಚಾಗಿದೆ. ಉಳಿದ ಹಣ ಖರ್ಚಾದ ಕೂಡಲೇ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲಬುರಗಿ ಜಿಲ್ಲೆಯಲ್ಲಿ ತೀವ್ರ ನೀರಿನ ಸಮಸ್ಯೆ ಇರುವ 21 ಗ್ರಾಮಗಳಲ್ಲಿ ಹೊಸದಾಗಿ ಬೋರ್ವೆಲ್ ಕೊರೆಸಲಾಗಿದೆ. ನಾಲ್ಕು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಕೆಆರ್ಡಿಬಿಯಿಂದ ₹ 17.30 ಕೋಟಿ ಅನುದಾನ ನೀಡಲಾಗಿದೆ. ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದು, ಅವರು ನಿರ್ಧರಿಸಿದಂತೆ ಕುಡಿಯುವ ನೀರು ಕಾಮಗಾರಿಗಳು ನಡೆಯಲಿವೆ’ ಎಂದರು.</p>.<p>‘ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ನಡೆದಿರುವ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು, ವಿ.ವಿ.ಯ ಕಾರ್ಯಕಾರಿ ಮಂಡಳಿ ಸದಸ್ಯರಾಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಈಚೆಗೆ ನಡೆದ ನೇಮಕಾತಿಗಳ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.</p>.<p>ಸಿಯುಕೆಯು ಆರ್ಎಸ್ಎಸ್ ಕೇಂದ್ರವಾಗಿದೆ. ಅಲ್ಲಿ ಬೀದರ್ ಸಂಸದರು, ಕಲಬುರಗಿ ಸಂಸದರಿಗೂ ಒಳಗೆ ಪ್ರವೇಶ ನೀಡಲು ನಿರಾಕರಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕಾರ್ಯಕ್ರಮ ನಡೆಸಲು ಅನುಮತಿ ಕೇಳಿದರೂ ಇಷ್ಟುದ್ದ ವಿವರಣೆ ನೀಡಿ ಅವಕಾಶ ನಿರಾಕರಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ತಾವು ಕೇಂದ್ರ ಸಚಿವರಾಗಿದ್ದಾಗ ವಿ.ವಿ. ಮಂಜೂರು ಮಾಡಿಸಿದ್ದರು. ಈಗ ಅದು ಆರ್ಎಸ್ಎಸ್ ಶಾಖೆಯಾಗಿ ಬದಲಾಗಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಕುಡಿಯುವ ನೀರಿನ ತುರ್ತು ಸಮಸ್ಯೆ ಪರಿಹಾರಕ್ಕಾಗಿ ವಿವಿಧ ಜಿಲ್ಲೆಗಳಿಗೆ ₹ 200 ಕೋಟಿ ಒದಗಿಸಲಾಗಿದ್ದು, ₹ 55 ಕೋಟಿಯಷ್ಟೇ ಖರ್ಚಾಗಿದೆ. ಉಳಿದ ಹಣ ಖರ್ಚಾದ ಕೂಡಲೇ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲಬುರಗಿ ಜಿಲ್ಲೆಯಲ್ಲಿ ತೀವ್ರ ನೀರಿನ ಸಮಸ್ಯೆ ಇರುವ 21 ಗ್ರಾಮಗಳಲ್ಲಿ ಹೊಸದಾಗಿ ಬೋರ್ವೆಲ್ ಕೊರೆಸಲಾಗಿದೆ. ನಾಲ್ಕು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಕೆಆರ್ಡಿಬಿಯಿಂದ ₹ 17.30 ಕೋಟಿ ಅನುದಾನ ನೀಡಲಾಗಿದೆ. ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದು, ಅವರು ನಿರ್ಧರಿಸಿದಂತೆ ಕುಡಿಯುವ ನೀರು ಕಾಮಗಾರಿಗಳು ನಡೆಯಲಿವೆ’ ಎಂದರು.</p>.<p>‘ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ನಡೆದಿರುವ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು, ವಿ.ವಿ.ಯ ಕಾರ್ಯಕಾರಿ ಮಂಡಳಿ ಸದಸ್ಯರಾಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಈಚೆಗೆ ನಡೆದ ನೇಮಕಾತಿಗಳ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.</p>.<p>ಸಿಯುಕೆಯು ಆರ್ಎಸ್ಎಸ್ ಕೇಂದ್ರವಾಗಿದೆ. ಅಲ್ಲಿ ಬೀದರ್ ಸಂಸದರು, ಕಲಬುರಗಿ ಸಂಸದರಿಗೂ ಒಳಗೆ ಪ್ರವೇಶ ನೀಡಲು ನಿರಾಕರಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕಾರ್ಯಕ್ರಮ ನಡೆಸಲು ಅನುಮತಿ ಕೇಳಿದರೂ ಇಷ್ಟುದ್ದ ವಿವರಣೆ ನೀಡಿ ಅವಕಾಶ ನಿರಾಕರಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ತಾವು ಕೇಂದ್ರ ಸಚಿವರಾಗಿದ್ದಾಗ ವಿ.ವಿ. ಮಂಜೂರು ಮಾಡಿಸಿದ್ದರು. ಈಗ ಅದು ಆರ್ಎಸ್ಎಸ್ ಶಾಖೆಯಾಗಿ ಬದಲಾಗಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>