<p>ಕಲಬುರಗಿ: ಸಿವಿಲ್ ಕಾಮಗಾರಿಯ ಬಿಲ್ನ ಹಣ ಬಿಡುಗಡೆಗೆ ಶೇ4ರಷ್ಟು ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದ ಜೇವರ್ಗಿ ಪುರಸಭೆಯ ಆಗಿನ ಕಿರಿಯ ಎಂಜಿನಿಯರ್ ನಾನಾಸಾಬ್ ಅಮೃತಪ್ಪ ಮಡಿವಾಳಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ 4 ವರ್ಷ ಜೈಲು ಹಾಗೂ ₹20 ಸಾವಿರ ದಂಡ ವಿಧಿಸಿದೆ.</p>.<p>ಜೇವರ್ಗಿ ಪುರಸಭೆ ವ್ಯಾಪ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿ ಸ್ಥಳಾಂತರ ಹಾಗೂ ನಾಲೆಯ ಮೇಲೆ ವೇದಿಕೆಯ ಕಟ್ಟೆ ನಿರ್ಮಿಸುವ ₹35 ಲಕ್ಷ ಮೊತ್ತದ ಕೆಲಸವನ್ನು 2016–17ರಲ್ಲಿ ಗೋಪಾಲ ಬಿಜಾಸ್ಪೂರ ಅವರು ಗುತ್ತಿಗೆ ಪಡೆದಿದ್ದರು. ಇದಕ್ಕೆ ಸಂಬಂಧಿಸಿ ₹6.70 ಲಕ್ಷದ ಬಿಲ್ ಪಾಸ್ಗೆ ಲಂಚ ಪಡೆಯುವಾಗ ನಾನಾಸಾಬ್ ಮಡಿವಾಳ ಸಿಕ್ಕಿ ಬಿದ್ದಿದ್ದರು. ಇನ್ಸ್ಪೆಕ್ಟರ್ ರಾಘವೇಂದ್ರ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ಕೋರ್ಟ್ನ ನ್ಯಾಯಾಧೀಶ ಜಿ.ಎಲ್.ಲಕ್ಷ್ಮೀನಾರಾಯಣ ಶಿಕ್ಷೆ ವಿಧಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1442259030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಸಿವಿಲ್ ಕಾಮಗಾರಿಯ ಬಿಲ್ನ ಹಣ ಬಿಡುಗಡೆಗೆ ಶೇ4ರಷ್ಟು ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದ ಜೇವರ್ಗಿ ಪುರಸಭೆಯ ಆಗಿನ ಕಿರಿಯ ಎಂಜಿನಿಯರ್ ನಾನಾಸಾಬ್ ಅಮೃತಪ್ಪ ಮಡಿವಾಳಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ 4 ವರ್ಷ ಜೈಲು ಹಾಗೂ ₹20 ಸಾವಿರ ದಂಡ ವಿಧಿಸಿದೆ.</p>.<p>ಜೇವರ್ಗಿ ಪುರಸಭೆ ವ್ಯಾಪ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿ ಸ್ಥಳಾಂತರ ಹಾಗೂ ನಾಲೆಯ ಮೇಲೆ ವೇದಿಕೆಯ ಕಟ್ಟೆ ನಿರ್ಮಿಸುವ ₹35 ಲಕ್ಷ ಮೊತ್ತದ ಕೆಲಸವನ್ನು 2016–17ರಲ್ಲಿ ಗೋಪಾಲ ಬಿಜಾಸ್ಪೂರ ಅವರು ಗುತ್ತಿಗೆ ಪಡೆದಿದ್ದರು. ಇದಕ್ಕೆ ಸಂಬಂಧಿಸಿ ₹6.70 ಲಕ್ಷದ ಬಿಲ್ ಪಾಸ್ಗೆ ಲಂಚ ಪಡೆಯುವಾಗ ನಾನಾಸಾಬ್ ಮಡಿವಾಳ ಸಿಕ್ಕಿ ಬಿದ್ದಿದ್ದರು. ಇನ್ಸ್ಪೆಕ್ಟರ್ ರಾಘವೇಂದ್ರ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ಕೋರ್ಟ್ನ ನ್ಯಾಯಾಧೀಶ ಜಿ.ಎಲ್.ಲಕ್ಷ್ಮೀನಾರಾಯಣ ಶಿಕ್ಷೆ ವಿಧಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1442259030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>