<p><strong>ಕಲಬುರಗಿ</strong>: ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.</p>.<p>ನಗರದ ಗಂಜ್ ಬಳಿಯ ನಗರೇಶ್ವರ ಶಾಲೆಯಿಂದ ಜಗತ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ವಿವಿಧ ಗ್ರಾಮಗಳಿಂದ ಬಂದಿದ್ದ ನೂರಾರು ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕಲಬುರಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ರೈತರಿಗೆ ವಿವಿಧ ರೀತಿಯಲ್ಲಿ ಅನ್ಯಾಯ ಮಾಡಲಾಗುತ್ತಿದೆ. ಸೂಟ್ ಮುರಿಯುವುದು, ಶೇ 3ರಷ್ಟು ಕಮಿಷನ್ ಕಟ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಜೆಸ್ಕಾಂನಿಂದ ರೈತರಿಗೆ ಹಗಲು 12 ಗಂಟೆ ವಿದ್ಯುತ್ ಪೂರೈಸಬೇಕು. ರೈತರ ಹೊಲದಲ್ಲಿನ ಟಿಸಿ ಸುಟ್ಟರೆ ಜೆಸ್ಕಾಂ ಅಧಿಕಾರಿಗಳು ರೈತರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದನ್ನು ತಡೆಯಬೇಕು’ ಎಂದು ಆಗ್ರಹಿಸಿದರು.</p>.<p>‘ಕೃಷಿ ಇಲಾಖೆಯಿಂದ ನೀಡಲಾಗುವ ಯಂತ್ರೋಪಕರಣ ಕಳಪೆಯಾಗಿದ್ದು, ಮೈಸೂರಿನಲ್ಲಿರುವ ಗುಣಮಟ್ಟ ನಿಯಂತ್ರಣ ಸಂಸ್ಥೆಯಿಂದ ವರದಿ ತರಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರತಿವರ್ಷ ರೈತರಿಗೆ ಬಿತ್ತನೆ ಬೀಜ ವಿತರಿಸುವ ರೈತ ಸಂಪರ್ಕ ಕೇಂದ್ರದಲ್ಲಿ ಪೂರೈಸಲಾಗುತ್ತಿರುವ ಕಳಪೆ ಗುಣಮಟ್ಟದ ಬೀಜಗಳನ್ನು ತಡೆಯಬೇಕು’ ಎಂದು ಒತ್ತಾಯಿಸಿದರು.</p>.<p>‘ಬೆಣ್ಣೆತೊರಾ ಅಣೆಕಟ್ಟಿನಿಂದ ಮಳೆಗಾಲದಲ್ಲಿ ಕಳೆದ 2 ವರ್ಷಗಳಿಂದ ನೀರು ಶೇಖರಣೆ ಪ್ರಮಾಣ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗುತ್ತಿದೆ. ಆದರೆ, ಮುಖ್ಯ ಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯದೇ ರೈತರ ಹೊಲಗಳಿಗೆ ನುಗ್ಗಿ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು</p>.<p>‘ಗಂಡೋರಿ ನಾಲಾ, ಮುಲ್ಲಾ ಮಾರಿ, ಅಮರ್ಜಾ ಅಣೆಕಟ್ಟುಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಕೈಗೊಂಡ ಕಾಮಗಾರಿಗಳಲ್ಲಿ ಭ್ರಷ್ಟಾಚಾರವಾಗಿದೆ. ಈ ಯೋಜನೆಗಳ ಅಧಿಕಾರಿಗಳನ್ನು ತಕ್ಷಣ ಬೇರೆಡೆಗೆ ವರ್ಗಾವಣೆ ಮಾಡಬೇಕು. ಭ್ರಷ್ಟರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಅರಣ್ಯ ಇಲಾಖೆಯಿಂದ ಮಂಗಗಳ ಹಾವಳಿ ತಡೆಯಬೇಕು. ಗ್ರಾಮೀಣ ಭಾಗದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಯಲು ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.</p>.<p>‘ತಹಶೀಲ್ದಾರ್ರು ರೈತರ ಅರ್ಜಿಗಳಿಗೆ ವಿಳಂಬ ನೀತಿ ಅನುಸರಿಸಿ ರೈತರಿಂದ ಹಣ ವಸೂಲಿಗಿಳಿದಿದ್ದಾರೆ’ ಎಂದು ಆರೋಪಿಸಿದರು.</p>.<p>ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಪಾಟೀಲ ಮುದ್ದರಕಿ, ಜಿಲ್ಲಾ ಅಧ್ಯಕ್ಷ ಅಣವೀರ ಎಸ್ ಹೆಬ್ಬಾಳ, ಪದಾಧಿಕಾರಿಗಳು, ಮುಖಂಡರು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><blockquote> ನಮ್ಮ ಬೇಡಿಕೆಗಳ ಈಡೇರಿಕೆಗೆ ಎಂಟು ದಿನಗಳ ಗಡುವು ನೀಡಲಾಗಿದೆ. ಸ್ಪಂದಿಸದಿದ್ದರೆ ಬೆಳಗಾವಿಯ ಗುರ್ಲಾಪುರ ಮಾದರಿಯಲ್ಲಿ ಹೋರಾಟ ರೂಪಿಸುತ್ತೇವೆ </blockquote><span class="attribution">ಅಣವೀರ ಹೆಬ್ಬಾಳ ರಾಜ್ಯರೈತ ಸಂಘ ಹಾಗೂ ರೈತ ಸೇನೆ ಜಿಲ್ಲಾಧ್ಯಕ್ಷ</span></div>. <p><strong>ಪ್ರಮುಖ ಬೇಡಿಕೆಗಳು</strong></p><p> * ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು * ವರ್ಷದ 12 ತಿಂಗಳು ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಬೇಕು </p><p>* ಕ್ವಿಂಟಲ್ ತೊಗರಿಗೆ ₹13 ಸಾವಿರ ಎಂಎಸ್ಪಿ ಕೊಡಬೇಕು * ಪ್ರತಿ ಟನ್ ಕಬ್ಬಿಗೆ ₹3500 ದರ ನೀಡಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.</p>.<p>ನಗರದ ಗಂಜ್ ಬಳಿಯ ನಗರೇಶ್ವರ ಶಾಲೆಯಿಂದ ಜಗತ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ವಿವಿಧ ಗ್ರಾಮಗಳಿಂದ ಬಂದಿದ್ದ ನೂರಾರು ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕಲಬುರಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ರೈತರಿಗೆ ವಿವಿಧ ರೀತಿಯಲ್ಲಿ ಅನ್ಯಾಯ ಮಾಡಲಾಗುತ್ತಿದೆ. ಸೂಟ್ ಮುರಿಯುವುದು, ಶೇ 3ರಷ್ಟು ಕಮಿಷನ್ ಕಟ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಜೆಸ್ಕಾಂನಿಂದ ರೈತರಿಗೆ ಹಗಲು 12 ಗಂಟೆ ವಿದ್ಯುತ್ ಪೂರೈಸಬೇಕು. ರೈತರ ಹೊಲದಲ್ಲಿನ ಟಿಸಿ ಸುಟ್ಟರೆ ಜೆಸ್ಕಾಂ ಅಧಿಕಾರಿಗಳು ರೈತರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದನ್ನು ತಡೆಯಬೇಕು’ ಎಂದು ಆಗ್ರಹಿಸಿದರು.</p>.<p>‘ಕೃಷಿ ಇಲಾಖೆಯಿಂದ ನೀಡಲಾಗುವ ಯಂತ್ರೋಪಕರಣ ಕಳಪೆಯಾಗಿದ್ದು, ಮೈಸೂರಿನಲ್ಲಿರುವ ಗುಣಮಟ್ಟ ನಿಯಂತ್ರಣ ಸಂಸ್ಥೆಯಿಂದ ವರದಿ ತರಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರತಿವರ್ಷ ರೈತರಿಗೆ ಬಿತ್ತನೆ ಬೀಜ ವಿತರಿಸುವ ರೈತ ಸಂಪರ್ಕ ಕೇಂದ್ರದಲ್ಲಿ ಪೂರೈಸಲಾಗುತ್ತಿರುವ ಕಳಪೆ ಗುಣಮಟ್ಟದ ಬೀಜಗಳನ್ನು ತಡೆಯಬೇಕು’ ಎಂದು ಒತ್ತಾಯಿಸಿದರು.</p>.<p>‘ಬೆಣ್ಣೆತೊರಾ ಅಣೆಕಟ್ಟಿನಿಂದ ಮಳೆಗಾಲದಲ್ಲಿ ಕಳೆದ 2 ವರ್ಷಗಳಿಂದ ನೀರು ಶೇಖರಣೆ ಪ್ರಮಾಣ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗುತ್ತಿದೆ. ಆದರೆ, ಮುಖ್ಯ ಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯದೇ ರೈತರ ಹೊಲಗಳಿಗೆ ನುಗ್ಗಿ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು</p>.<p>‘ಗಂಡೋರಿ ನಾಲಾ, ಮುಲ್ಲಾ ಮಾರಿ, ಅಮರ್ಜಾ ಅಣೆಕಟ್ಟುಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಕೈಗೊಂಡ ಕಾಮಗಾರಿಗಳಲ್ಲಿ ಭ್ರಷ್ಟಾಚಾರವಾಗಿದೆ. ಈ ಯೋಜನೆಗಳ ಅಧಿಕಾರಿಗಳನ್ನು ತಕ್ಷಣ ಬೇರೆಡೆಗೆ ವರ್ಗಾವಣೆ ಮಾಡಬೇಕು. ಭ್ರಷ್ಟರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಅರಣ್ಯ ಇಲಾಖೆಯಿಂದ ಮಂಗಗಳ ಹಾವಳಿ ತಡೆಯಬೇಕು. ಗ್ರಾಮೀಣ ಭಾಗದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಯಲು ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.</p>.<p>‘ತಹಶೀಲ್ದಾರ್ರು ರೈತರ ಅರ್ಜಿಗಳಿಗೆ ವಿಳಂಬ ನೀತಿ ಅನುಸರಿಸಿ ರೈತರಿಂದ ಹಣ ವಸೂಲಿಗಿಳಿದಿದ್ದಾರೆ’ ಎಂದು ಆರೋಪಿಸಿದರು.</p>.<p>ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಪಾಟೀಲ ಮುದ್ದರಕಿ, ಜಿಲ್ಲಾ ಅಧ್ಯಕ್ಷ ಅಣವೀರ ಎಸ್ ಹೆಬ್ಬಾಳ, ಪದಾಧಿಕಾರಿಗಳು, ಮುಖಂಡರು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><blockquote> ನಮ್ಮ ಬೇಡಿಕೆಗಳ ಈಡೇರಿಕೆಗೆ ಎಂಟು ದಿನಗಳ ಗಡುವು ನೀಡಲಾಗಿದೆ. ಸ್ಪಂದಿಸದಿದ್ದರೆ ಬೆಳಗಾವಿಯ ಗುರ್ಲಾಪುರ ಮಾದರಿಯಲ್ಲಿ ಹೋರಾಟ ರೂಪಿಸುತ್ತೇವೆ </blockquote><span class="attribution">ಅಣವೀರ ಹೆಬ್ಬಾಳ ರಾಜ್ಯರೈತ ಸಂಘ ಹಾಗೂ ರೈತ ಸೇನೆ ಜಿಲ್ಲಾಧ್ಯಕ್ಷ</span></div>. <p><strong>ಪ್ರಮುಖ ಬೇಡಿಕೆಗಳು</strong></p><p> * ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು * ವರ್ಷದ 12 ತಿಂಗಳು ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಬೇಕು </p><p>* ಕ್ವಿಂಟಲ್ ತೊಗರಿಗೆ ₹13 ಸಾವಿರ ಎಂಎಸ್ಪಿ ಕೊಡಬೇಕು * ಪ್ರತಿ ಟನ್ ಕಬ್ಬಿಗೆ ₹3500 ದರ ನೀಡಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>