<p><strong>ಕಲಬುರಗಿ</strong>: ಬೆಂಗಳೂರಿನ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆಯಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಸಭೆ ಜರುಗಿತು.</p>.<p>ಸಭೆಯಲ್ಲಿ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು, ‘ಸರ್ಕಾರ ಹಾಗೂ ಕೆಕೆಆರ್ಡಿಬಿ ಸಹಯೋಗ ನೀಡಲಿದೆ. ಕಲಬುರಗಿಯಲ್ಲಿ ವಿಮಾನ ಸೇವೆಗಳನ್ನು ಪುನರಾರಂಭಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಲಬುರಗಿಯಲ್ಲಿ 742 ಎಕರೆ ಭೂಮಿ ಇದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ)ದಿಂದ ನಿರ್ವಹಿಸುವ ಹಲವಾರು ಸೌಲಭ್ಯಗಳಿವೆ. ಅವುಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಬಹುದು’ ಎಂದರು.</p>.<p>ಕಲಬುರಗಿ–ಬೆಂಗಳೂರು, ಬೆಂಗಳೂರು–ಕಲಬುರಗಿ ವಿಮಾನ ಸೇವೆ ಪುನರಾರಂಭಿಸುವ ಮತ್ತು ಬಲಪಡಿಸುವ ಕುರಿತು ಚರ್ಚಿಸಲಾಯಿತು.</p>.<p>‘ವಿಮಾನಗಳ ಕಾರ್ಯಾಚರಣೆಗೆ ಬದ್ಧರಾಗಿದ್ದೇವೆ’ ಎಂದು ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.</p>.<p>ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ರಹೀಂಖಾನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಬೆಂಗಳೂರಿನ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆಯಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಸಭೆ ಜರುಗಿತು.</p>.<p>ಸಭೆಯಲ್ಲಿ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು, ‘ಸರ್ಕಾರ ಹಾಗೂ ಕೆಕೆಆರ್ಡಿಬಿ ಸಹಯೋಗ ನೀಡಲಿದೆ. ಕಲಬುರಗಿಯಲ್ಲಿ ವಿಮಾನ ಸೇವೆಗಳನ್ನು ಪುನರಾರಂಭಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಲಬುರಗಿಯಲ್ಲಿ 742 ಎಕರೆ ಭೂಮಿ ಇದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ)ದಿಂದ ನಿರ್ವಹಿಸುವ ಹಲವಾರು ಸೌಲಭ್ಯಗಳಿವೆ. ಅವುಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಬಹುದು’ ಎಂದರು.</p>.<p>ಕಲಬುರಗಿ–ಬೆಂಗಳೂರು, ಬೆಂಗಳೂರು–ಕಲಬುರಗಿ ವಿಮಾನ ಸೇವೆ ಪುನರಾರಂಭಿಸುವ ಮತ್ತು ಬಲಪಡಿಸುವ ಕುರಿತು ಚರ್ಚಿಸಲಾಯಿತು.</p>.<p>‘ವಿಮಾನಗಳ ಕಾರ್ಯಾಚರಣೆಗೆ ಬದ್ಧರಾಗಿದ್ದೇವೆ’ ಎಂದು ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.</p>.<p>ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ರಹೀಂಖಾನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>