<p><strong>ಚಿತ್ತಾಪುರ (ಕಲಬುರಗಿ)</strong>: ಬುಧವಾರ ರಾತ್ರಿ ತಾಲ್ಲೂಕಿನಾದ್ಯಂತ ಧಾರಾಕಾರ ಮಳೆಯಾಗಿದೆ. ಗುರುವಾರ ಬೆಳಿಗ್ಗೆ ಕಾಗಿಣಾ ನದಿಯಲ್ಲಿ ಭಾರಿ ಪ್ರವಾಹ ಬಂದು ತಾಲ್ಲೂಕಿನ ದಂಡೋತಿ ಸಮೀಪದ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮಾರ್ಗದ ಸಾರಿಗೆ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ.</p><p>ಕಾಗಿಣಾ ನದಿಯ ಮೇಲ್ಭಾಗದ ಸೇಡಂ, ಕಾಳಗಿ, ಚಿಂಚೋಳಿ ತಾಲ್ಲೂಕುಗಳಲ್ಲಿ ಮಳೆಯಾಗಿದ್ದರಿಂದ ಕಾಗಿಣಾ ನದಿಯು ತುಂಬಿ ಹರಿಯುತ್ತಿದೆ. ಬೆಣ್ಣೆತೊರಾ ಜಲಾಶಯದಿಂದ ನೀರು ಹೊರಗೆ ಬಿಟ್ಟಿದ್ದರಿಂದ ನದಿಯಲ್ಲಿ ಪ್ರವಾಹ ಏರುಗತಿಯಲ್ಲಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.</p><p>ನದಿ ಆಚೆಗಿರುವ ಗ್ರಾಮಗಳ ವಿದ್ಯಾರ್ಥಿಗಳು ಬೆಳಿಗ್ಗೆ ಪಟ್ಟಣದ ವಿವಿಧ ಕಾಲೇಜುಗಳಿಗೆ ಆಗಮಿಸಿದ್ದರು. ಸೇತುವೆ ಮುಳುಗಡೆಯ ಆತಂಕದಿಂದ ವಿದ್ಯಾರ್ಥಿಗಳನ್ನು ವಾಪಾಸ್ ಕಳುಹಿಸಲಾಗಿದೆ. ಅಷ್ಟರಲ್ಲಿ ಸೇತುವೆ ಮುಳುಗಿದ್ದರಿಂದ ವಿದ್ಯಾರ್ಥಿಗಳು ಮಳಖೇಡ ಮಾರ್ಗವಾಗಿ ತಮ್ಮ ಗ್ರಾಮಗಳಿಗೆ ತೆರಳಿದರು.</p><p>ದಂಡೋತಿ ಸೇತುವೆ ಮಾರ್ಗವಾಗಿ ನಿತ್ಯ ಸಂಚರಿಸುತ್ತಿದ್ದ ಕಲಬುರಗಿ ಬಸ್ ಶಹಾಬಾದ್ ಮಾರ್ಗವಾಗಿ ಸಂಚರಿಸುತ್ತಿವೆ. ಸೇಡಂಗೆ ಸಂಚರಿಸುತ್ತಿದ್ದ ಬಸ್ ನೇರವಾಗಿ ಮಳಖೇಡ ಮಾರ್ಗವಾಗಿ ಸಂಚರಿಸುತ್ತಿವೆ. ಚಿತ್ತಾಪುರ- ಕಾಳಗಿ ನಡುವೆ ಸಂಪರ್ಕ ಬಂದ್ ಆಗಿದೆ.</p><p>ಕಾಗಿಣಾ ನದಿಯಲ್ಲಿ ಭಾರಿ ಪ್ರವಾಹ ತುಂಬಿದೆ ಎನ್ನುವ ಮಾಹಿತಿ ಆಧರಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಗ್ರಾಮಾಡಳಿತಾಧಿಕಾರಿ ನರಸಾರೆಡ್ಡಿ ಅವರೊಂದಿಗೆ ಗುರುವಾರ ಬೆಳಗ್ಗೆ ದಂಡೋತಿ ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದರು.</p><p>ದಂಡೋತಿ ಗ್ರಾಮದಲ್ಲಿ ಬೆಳಗಿನ ಜಾವ 65.5 ಮಿ.ಮೀ ಮಳೆ ದಾಖಲಾಗಿದೆ. </p><p><strong>ಬೆಣ್ಣೆತೊರಾ ಜಲಾಶಯದಿಂದ ನೀರು ಹೊರಕ್ಕೆ:</strong> ಕಾಳಗಿ ತಾಲ್ಲೂಕಿನ ಬೆಣ್ಣೆತೊರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದರಿಂದ ಹೊರಹರಿವು 2,800 ಕ್ಯೂಸೆಕ್ನಿಂದ 14,000 ಕ್ಯೂಸೆಕ್ಗೆ ಹೆಚ್ಚಿಸಲಾಗಿದೆ.</p><p>ಆದಕಾರಣ ನದಿ ತೀರದ ಗ್ರಾಮಗಳ ಜನರು ನದಿಯ ಕಡೆಗೆ ಹೋಗಬಾರದು. ಜಾನುವಾರುಗಳು ನದಿಗೆ ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ (ಕಲಬುರಗಿ)</strong>: ಬುಧವಾರ ರಾತ್ರಿ ತಾಲ್ಲೂಕಿನಾದ್ಯಂತ ಧಾರಾಕಾರ ಮಳೆಯಾಗಿದೆ. ಗುರುವಾರ ಬೆಳಿಗ್ಗೆ ಕಾಗಿಣಾ ನದಿಯಲ್ಲಿ ಭಾರಿ ಪ್ರವಾಹ ಬಂದು ತಾಲ್ಲೂಕಿನ ದಂಡೋತಿ ಸಮೀಪದ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮಾರ್ಗದ ಸಾರಿಗೆ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ.</p><p>ಕಾಗಿಣಾ ನದಿಯ ಮೇಲ್ಭಾಗದ ಸೇಡಂ, ಕಾಳಗಿ, ಚಿಂಚೋಳಿ ತಾಲ್ಲೂಕುಗಳಲ್ಲಿ ಮಳೆಯಾಗಿದ್ದರಿಂದ ಕಾಗಿಣಾ ನದಿಯು ತುಂಬಿ ಹರಿಯುತ್ತಿದೆ. ಬೆಣ್ಣೆತೊರಾ ಜಲಾಶಯದಿಂದ ನೀರು ಹೊರಗೆ ಬಿಟ್ಟಿದ್ದರಿಂದ ನದಿಯಲ್ಲಿ ಪ್ರವಾಹ ಏರುಗತಿಯಲ್ಲಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.</p><p>ನದಿ ಆಚೆಗಿರುವ ಗ್ರಾಮಗಳ ವಿದ್ಯಾರ್ಥಿಗಳು ಬೆಳಿಗ್ಗೆ ಪಟ್ಟಣದ ವಿವಿಧ ಕಾಲೇಜುಗಳಿಗೆ ಆಗಮಿಸಿದ್ದರು. ಸೇತುವೆ ಮುಳುಗಡೆಯ ಆತಂಕದಿಂದ ವಿದ್ಯಾರ್ಥಿಗಳನ್ನು ವಾಪಾಸ್ ಕಳುಹಿಸಲಾಗಿದೆ. ಅಷ್ಟರಲ್ಲಿ ಸೇತುವೆ ಮುಳುಗಿದ್ದರಿಂದ ವಿದ್ಯಾರ್ಥಿಗಳು ಮಳಖೇಡ ಮಾರ್ಗವಾಗಿ ತಮ್ಮ ಗ್ರಾಮಗಳಿಗೆ ತೆರಳಿದರು.</p><p>ದಂಡೋತಿ ಸೇತುವೆ ಮಾರ್ಗವಾಗಿ ನಿತ್ಯ ಸಂಚರಿಸುತ್ತಿದ್ದ ಕಲಬುರಗಿ ಬಸ್ ಶಹಾಬಾದ್ ಮಾರ್ಗವಾಗಿ ಸಂಚರಿಸುತ್ತಿವೆ. ಸೇಡಂಗೆ ಸಂಚರಿಸುತ್ತಿದ್ದ ಬಸ್ ನೇರವಾಗಿ ಮಳಖೇಡ ಮಾರ್ಗವಾಗಿ ಸಂಚರಿಸುತ್ತಿವೆ. ಚಿತ್ತಾಪುರ- ಕಾಳಗಿ ನಡುವೆ ಸಂಪರ್ಕ ಬಂದ್ ಆಗಿದೆ.</p><p>ಕಾಗಿಣಾ ನದಿಯಲ್ಲಿ ಭಾರಿ ಪ್ರವಾಹ ತುಂಬಿದೆ ಎನ್ನುವ ಮಾಹಿತಿ ಆಧರಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಗ್ರಾಮಾಡಳಿತಾಧಿಕಾರಿ ನರಸಾರೆಡ್ಡಿ ಅವರೊಂದಿಗೆ ಗುರುವಾರ ಬೆಳಗ್ಗೆ ದಂಡೋತಿ ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದರು.</p><p>ದಂಡೋತಿ ಗ್ರಾಮದಲ್ಲಿ ಬೆಳಗಿನ ಜಾವ 65.5 ಮಿ.ಮೀ ಮಳೆ ದಾಖಲಾಗಿದೆ. </p><p><strong>ಬೆಣ್ಣೆತೊರಾ ಜಲಾಶಯದಿಂದ ನೀರು ಹೊರಕ್ಕೆ:</strong> ಕಾಳಗಿ ತಾಲ್ಲೂಕಿನ ಬೆಣ್ಣೆತೊರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದರಿಂದ ಹೊರಹರಿವು 2,800 ಕ್ಯೂಸೆಕ್ನಿಂದ 14,000 ಕ್ಯೂಸೆಕ್ಗೆ ಹೆಚ್ಚಿಸಲಾಗಿದೆ.</p><p>ಆದಕಾರಣ ನದಿ ತೀರದ ಗ್ರಾಮಗಳ ಜನರು ನದಿಯ ಕಡೆಗೆ ಹೋಗಬಾರದು. ಜಾನುವಾರುಗಳು ನದಿಗೆ ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>