<p><strong>ಕಲಬುರಗಿ:</strong> ನಗರದ ಸೂಪರ್ ಮಾರ್ಕೆಟ್ನಲ್ಲಿ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪಿಯನ್ನು ಬ್ರಹ್ಮಪುರ ಠಾಣೆ ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ.</p>.<p>ದತ್ತಾತ್ರೆ ಅಲಿಯಾಸ್ ದತ್ತು ಮನೋಹರ ಘನಾತೆ (32) ಬಂಧಿತ ಆರೋಪಿ. ಗಾಜಿಪುರ ಬಡಾವಣೆ ನಿವಾಸಿ ಶರಣಬಸಪ್ಪ ಗೌಳಿ (35) ಶುಕ್ರವಾರ ಸಂಜೆ ಕೊಲೆಯಾಗಿದ್ದರು.</p>.<p>‘ಶರಣಬಸಪ್ಪ ಅವರಿಗೆ ದತ್ತು ತನ್ನ ಮೊಬೈಲ್ ದುರಸ್ತಿ ಮಾಡಲು ಕೊಟ್ಟಿದ್ದ. ಆದರೆ, ವಾಪಸ್ ಮರಳಿಸಿರಲಿಲ್ಲ. ಇದರಿಂದ ಇಬ್ಬರ ನಡುವೆ ವಾಗ್ವಾದವಾಗಿದೆ. ಆಗ ದತ್ತು ಶರಣಬಸಪ್ಪ ಅವರ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p><strong>ಬಂಧನ:</strong> ನಗರದ ಆಳಂದ ಚೆಕ್ಪೋಸ್ಟ್ನಿಂದ ರಾಮತೀರ್ಥ ದೇವಸ್ಥಾನದ ಕಡೆಗೆ ಹೋಗುವ ರಸ್ತೆ ಪಕ್ಕದ ಒಂದು ಸಣ್ಣ ಕೋಣೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ಗಳನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡು ಆಟೊರಿಕ್ಷಾಗಳಿಗೆ ತುಂಬುತ್ತಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಕೇದಾರನಾಥ ಶರಣಪ್ಪ ಮಾಳಗೆ(23) ಬಂಧಿತ ಆರೋಪಿ. ಗ್ಯಾಸ್ ಸಿಲಿಂಡರ್ಗಳು, ತೂಕದ ಯಂತ್ರ ಸೇರಿದಂತೆ ₹5,500 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆಹಾರ ನಿರೀಕ್ಷಕ ಯಲ್ಲಾಲಿಂಗ ಸುಧಾಕರ ಕಡಕೋಳಕರ ನೀಡಿದ ದೂರಿನ ಮೇರೆಗೆ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಸೂಪರ್ ಮಾರ್ಕೆಟ್ನಲ್ಲಿ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪಿಯನ್ನು ಬ್ರಹ್ಮಪುರ ಠಾಣೆ ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ.</p>.<p>ದತ್ತಾತ್ರೆ ಅಲಿಯಾಸ್ ದತ್ತು ಮನೋಹರ ಘನಾತೆ (32) ಬಂಧಿತ ಆರೋಪಿ. ಗಾಜಿಪುರ ಬಡಾವಣೆ ನಿವಾಸಿ ಶರಣಬಸಪ್ಪ ಗೌಳಿ (35) ಶುಕ್ರವಾರ ಸಂಜೆ ಕೊಲೆಯಾಗಿದ್ದರು.</p>.<p>‘ಶರಣಬಸಪ್ಪ ಅವರಿಗೆ ದತ್ತು ತನ್ನ ಮೊಬೈಲ್ ದುರಸ್ತಿ ಮಾಡಲು ಕೊಟ್ಟಿದ್ದ. ಆದರೆ, ವಾಪಸ್ ಮರಳಿಸಿರಲಿಲ್ಲ. ಇದರಿಂದ ಇಬ್ಬರ ನಡುವೆ ವಾಗ್ವಾದವಾಗಿದೆ. ಆಗ ದತ್ತು ಶರಣಬಸಪ್ಪ ಅವರ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p><strong>ಬಂಧನ:</strong> ನಗರದ ಆಳಂದ ಚೆಕ್ಪೋಸ್ಟ್ನಿಂದ ರಾಮತೀರ್ಥ ದೇವಸ್ಥಾನದ ಕಡೆಗೆ ಹೋಗುವ ರಸ್ತೆ ಪಕ್ಕದ ಒಂದು ಸಣ್ಣ ಕೋಣೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ಗಳನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡು ಆಟೊರಿಕ್ಷಾಗಳಿಗೆ ತುಂಬುತ್ತಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಕೇದಾರನಾಥ ಶರಣಪ್ಪ ಮಾಳಗೆ(23) ಬಂಧಿತ ಆರೋಪಿ. ಗ್ಯಾಸ್ ಸಿಲಿಂಡರ್ಗಳು, ತೂಕದ ಯಂತ್ರ ಸೇರಿದಂತೆ ₹5,500 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆಹಾರ ನಿರೀಕ್ಷಕ ಯಲ್ಲಾಲಿಂಗ ಸುಧಾಕರ ಕಡಕೋಳಕರ ನೀಡಿದ ದೂರಿನ ಮೇರೆಗೆ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>