<p><strong>ಕಲಬುರಗಿ</strong>: ‘ಜಿಲ್ಲೆಯ ಸೇಡಂ ಪಟ್ಟಣದ ಭವಾನಿ ನಗರದ ‘ವಿಜಯಲಕ್ಷ್ಮಿ ವೃದ್ಧಾಶ್ರಮ’ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು ₹30 ಲಕ್ಷ ಅನುದಾನ ದುರ್ಬಳಕೆ ಮಾಡಲಾಗಿದೆ’ ಎಂದು ಆರೋಪಿಸಿ ನವ ಕರ್ನಾಟಕ ಎಂಆರ್ಡಬ್ಲ್ಯು, ವಿಆರ್ಡಬ್ಲ್ಯು, ಯುಆರ್ಡಬ್ಲ್ಯು ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು, ‘ಹಿರಿಯ ನಾಗರಿಕರ ಹೆಸರಿನಲ್ಲಿ ಅನುದಾನ ಪಡೆದು ಅಗತ್ಯ ಸೌಲಭ್ಯಗಳನ್ನು ಒದಗಿಸದೇ ಇರುವುದು ಮಾನವ ಹಕ್ಕುಗಳ ಉಲ್ಲಂಘನೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಈ ಸಂಬಂಧ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಂಬಂಧಪಟ್ಟವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಬರೆದ ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಪ್ರತಿಭಟನೆಯಲ್ಲಿ ಮಹಾನಾಯಕ ಬ್ರಿಗೇಡ್ ರಾಜ್ಯಾಧ್ಯಕ್ಷ ಗುಂಡೇಶ ಎಂ. ಶಿವನೂರ, ತಾರಫೈಲ್ ಬಡಾವಣೆ ಮುಖಂಡ ಉದಯಕುಮಾರ ಬೆಳಗುಂದಿ, ನವ ಕರ್ನಾಟಕ ಎಂಆರ್ಡಬ್ಲ್ಯು, ವಿಆರ್ಡಬ್ಲ್ಯು, ಯುಆರ್ಡಬ್ಲ್ಯು ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ಅಧ್ಯಕ್ಷ ಅಂಬಾಜಿ ಪಿ.ಮೇಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-34-1259197927</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಜಿಲ್ಲೆಯ ಸೇಡಂ ಪಟ್ಟಣದ ಭವಾನಿ ನಗರದ ‘ವಿಜಯಲಕ್ಷ್ಮಿ ವೃದ್ಧಾಶ್ರಮ’ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು ₹30 ಲಕ್ಷ ಅನುದಾನ ದುರ್ಬಳಕೆ ಮಾಡಲಾಗಿದೆ’ ಎಂದು ಆರೋಪಿಸಿ ನವ ಕರ್ನಾಟಕ ಎಂಆರ್ಡಬ್ಲ್ಯು, ವಿಆರ್ಡಬ್ಲ್ಯು, ಯುಆರ್ಡಬ್ಲ್ಯು ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು, ‘ಹಿರಿಯ ನಾಗರಿಕರ ಹೆಸರಿನಲ್ಲಿ ಅನುದಾನ ಪಡೆದು ಅಗತ್ಯ ಸೌಲಭ್ಯಗಳನ್ನು ಒದಗಿಸದೇ ಇರುವುದು ಮಾನವ ಹಕ್ಕುಗಳ ಉಲ್ಲಂಘನೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಈ ಸಂಬಂಧ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಂಬಂಧಪಟ್ಟವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಬರೆದ ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಪ್ರತಿಭಟನೆಯಲ್ಲಿ ಮಹಾನಾಯಕ ಬ್ರಿಗೇಡ್ ರಾಜ್ಯಾಧ್ಯಕ್ಷ ಗುಂಡೇಶ ಎಂ. ಶಿವನೂರ, ತಾರಫೈಲ್ ಬಡಾವಣೆ ಮುಖಂಡ ಉದಯಕುಮಾರ ಬೆಳಗುಂದಿ, ನವ ಕರ್ನಾಟಕ ಎಂಆರ್ಡಬ್ಲ್ಯು, ವಿಆರ್ಡಬ್ಲ್ಯು, ಯುಆರ್ಡಬ್ಲ್ಯು ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ಅಧ್ಯಕ್ಷ ಅಂಬಾಜಿ ಪಿ.ಮೇಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-34-1259197927</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>