<p>ಕಲಬುರಗಿ: ‘ಏಜೆನ್ಸಿಯವರು ಗೃಹಬಳಕೆಯ ಸಿಲಿಂಡರ್ಗಳನ್ನು ಅಕ್ರಮವಾಗಿ ಹೋಟೆಲ್ ಮತ್ತು ರೆಸ್ಟೊರೆಂಟ್ಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಸಂಘಟನಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಗುರು ಬಂಡಿ ಆಗ್ರಹಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಅಡುಗೆ ಅನಿಲ ಸಿಲಿಂಡರ್ ಕೊರತೆ ಎದುರಾಗಿದೆ. ಹೋಟೆಲ್ ಮತ್ತು ರೆಸ್ಟೊರೆಂಟ್ಗಳಿಗೆ ವಾಣಿಜ್ಯ ಬಳಕೆಯ ಸಿಲಿಂಡರ್ ದೊರೆಯುತ್ತಿದ್ದರೂ, ಏಜೆನ್ಸಿಯವರು ₹1,800ರಿಂದ ₹1,900 ಇರುವ ಸಿಲಿಂಡರ್ಗಳನ್ನು ಅಕ್ರಮವಾಗಿ ₹4 ಸಾವಿರದಿಂದ ₹5 ಸಾವಿರ ಪಡೆದು ಮಾರಾಟ ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>‘ಹೀಗೆ ಮಾರಾಟ ಮಾಡುವುದರಿಂದ ಗೃಹಬಳಕೆಯ ಸಿಲಿಂಡರ್ ಕೊರತೆಯಾಗುತ್ತಿದೆ. ಏಜೆನ್ಸಿಯವರು ಸಾರ್ವಜನಿಕರಿಗೆ ಒಂದು ಸಿಲಿಂಡರ್ ಪಡೆದ ನಂತರ ಆ ಸಿಲಿಂಡರ್ ಕನಿಷ್ಠ 30 ದಿನಗಳ ಕಾಲ ಬಳಕೆ ಮಾಡಬೇಕು ಎಂದು ತಿಳಿಸುತ್ತಾರೆ. ಬುಕ್ ಮಾಡಿದ ನಂತರ 15 ದಿನಗಳ ನಂತರ ಸಿಲಿಂಡರ್ ಪೂರೈಕೆ ಮಾಡುತ್ತಾರೆ. ಅವಿಭಕ್ತ ಕುಟುಂಬದವರು ಒಂದು ಸಿಲಿಂಡರ್ 30 ದಿನ ಬಳಸಲು ಹೇಗೆ ಸಾಧ್ಯ’ ಎಂದರು.</p>.<p>‘ರಾಜ್ಯ ಸರ್ಕಾರ ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿರುವ ಏಜೆನ್ಸಿಯವರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪ್ರದೀಪ್ ಓಂಕಾರ್, ಸಚಿನ ಪೂಜಾರಿ, ಸಾಗರ್ ಭಾವಿ, ಅನಿಲ ಬಂಡಿ, ಶಿವಕುಮಾರ ಪಾಟೀಲ, ಬೀರು ಪೂಜಾರಿ ಹಾಗೂ ಮುತ್ತಣ್ಣ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-34-970225671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಏಜೆನ್ಸಿಯವರು ಗೃಹಬಳಕೆಯ ಸಿಲಿಂಡರ್ಗಳನ್ನು ಅಕ್ರಮವಾಗಿ ಹೋಟೆಲ್ ಮತ್ತು ರೆಸ್ಟೊರೆಂಟ್ಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಸಂಘಟನಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಗುರು ಬಂಡಿ ಆಗ್ರಹಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಅಡುಗೆ ಅನಿಲ ಸಿಲಿಂಡರ್ ಕೊರತೆ ಎದುರಾಗಿದೆ. ಹೋಟೆಲ್ ಮತ್ತು ರೆಸ್ಟೊರೆಂಟ್ಗಳಿಗೆ ವಾಣಿಜ್ಯ ಬಳಕೆಯ ಸಿಲಿಂಡರ್ ದೊರೆಯುತ್ತಿದ್ದರೂ, ಏಜೆನ್ಸಿಯವರು ₹1,800ರಿಂದ ₹1,900 ಇರುವ ಸಿಲಿಂಡರ್ಗಳನ್ನು ಅಕ್ರಮವಾಗಿ ₹4 ಸಾವಿರದಿಂದ ₹5 ಸಾವಿರ ಪಡೆದು ಮಾರಾಟ ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>‘ಹೀಗೆ ಮಾರಾಟ ಮಾಡುವುದರಿಂದ ಗೃಹಬಳಕೆಯ ಸಿಲಿಂಡರ್ ಕೊರತೆಯಾಗುತ್ತಿದೆ. ಏಜೆನ್ಸಿಯವರು ಸಾರ್ವಜನಿಕರಿಗೆ ಒಂದು ಸಿಲಿಂಡರ್ ಪಡೆದ ನಂತರ ಆ ಸಿಲಿಂಡರ್ ಕನಿಷ್ಠ 30 ದಿನಗಳ ಕಾಲ ಬಳಕೆ ಮಾಡಬೇಕು ಎಂದು ತಿಳಿಸುತ್ತಾರೆ. ಬುಕ್ ಮಾಡಿದ ನಂತರ 15 ದಿನಗಳ ನಂತರ ಸಿಲಿಂಡರ್ ಪೂರೈಕೆ ಮಾಡುತ್ತಾರೆ. ಅವಿಭಕ್ತ ಕುಟುಂಬದವರು ಒಂದು ಸಿಲಿಂಡರ್ 30 ದಿನ ಬಳಸಲು ಹೇಗೆ ಸಾಧ್ಯ’ ಎಂದರು.</p>.<p>‘ರಾಜ್ಯ ಸರ್ಕಾರ ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿರುವ ಏಜೆನ್ಸಿಯವರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪ್ರದೀಪ್ ಓಂಕಾರ್, ಸಚಿನ ಪೂಜಾರಿ, ಸಾಗರ್ ಭಾವಿ, ಅನಿಲ ಬಂಡಿ, ಶಿವಕುಮಾರ ಪಾಟೀಲ, ಬೀರು ಪೂಜಾರಿ ಹಾಗೂ ಮುತ್ತಣ್ಣ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-34-970225671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>