2023–24ನೇ ಸಾಲಿಗೆ ಜಿಲ್ಲೆಯಲ್ಲಿ ₹29.67 ಕೋಟಿ ತೆರಿಗೆ ಸಂಗ್ರಹಿಸಬೇಕಿತ್ತು. ಕರ ಸಂಗ್ರಹಕ್ಕೆ ವಿಶೇಷ ಅಭಿಯಾನ ರೂಪಿಸಿದ್ದ ಜಿಲ್ಲಾ ಪಂಚಾಯಿತಿ, ಆಯಾ ಗ್ರಾಮ ಪಂಚಾಯಿತಿಗಳ ಪ್ರಸ್ತುತ ಬೇಡಿಕೆಯಲ್ಲಿ ಶೇ 50ರಷ್ಟು ತೆರಿಗೆ ಸಂಗ್ರಹಿಸುವಂತೆ ಗುರಿ ನಿಗದಿಪಡಿಸಿತ್ತು. ಅಲ್ಲದೇ, ‘ಪ್ರತಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯಂತ ಕಡಿಮೆ ತೆರಿಗೆ ವಸೂಲಿ ಮಾಡಿರುವ ತಲಾ 10 ಪಿಡಿಒಗಳಿಗೆ ನೋಟಿಸ್ ಜಾರಿಗೊಳಿಸಿ, ಕ್ರಮ ಜರುಗಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಫೆಬ್ರುವರಿಯಲ್ಲೇ ಸೂಚಿಸಿದ್ದರು. ಈ ಕ್ರಮಗಳು ನಿರೀಕ್ಷಿತ ಫಲ ನೀಡಿಲ್ಲ.