<p><strong>ಯಡ್ರಾಮಿ</strong> (<strong>ಕಲಬುರಗಿ ಜಿಲ್ಲೆ</strong>): ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದ್ದು, ಪಟ್ಟಣದಲ್ಲಿ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ.</p><p>ಈ ಅವಘಡದಲ್ಲಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗೊಂಡ ಘಟನೆ ಭಾನುವಾರ ತಡರಾತ್ರಿ ಸುಮಾರು 2:30 ಗಂಟೆಗೆ ನಡೆದಿದೆ.</p><p>ಬಾಲಕಿಯ ಶವ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.</p><p>ಈ ವಿಷಯ ತಾಲ್ಲೂಕು ತಹಶೀಲ್ದಾರ್ ಗಮನಕ್ಕೆ ಇದ್ದು ಪೋಲಿಸ್ ಇಲಾಖೆ ಹೊರತು ಪಡಿಸಿ ಇಲ್ಲಿಯವರೆಗೆ ಯಾವ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p><strong>ದಿಢೀರ್ ಪ್ರತಿಭಟನೆ:</strong> ಗೋಡೆ ಕುಸಿದು 17 ವರ್ಷದ ಬಾಲಕಿ ಮೃತಪಟ್ಟ ಹಿನ್ನೆಲೆ ಪಟ್ಟಣ ಸಮುದಾಯ ಆರೋಗ್ಯ ಕೇಂದ್ರ ಮುಂದೆ ಸೋಮವಾರ ಮುಂಜಾನೆ ವಿವಿಧ ಸಂಘಟನೆಗಳಿಂದ ದಿಢೀರ್ ಪ್ರತಿಭಟನೆ ನಡೆಸುತ್ತಿವೆ.</p><p>ಕೂಡಲೇ ಬೆಂಗಳೂರಿನಲ್ಲಿ ಇರುವ ಜೇವರ್ಗಿ ಕ್ಷೇತ್ರ ಶಾಸಕ ಡಾ ಅಜಯಸಿಂಗ್ ಸ್ಥಳಕ್ಕೆ ಆಗಮಿಸಿ ಮೃತ್ತಪಟ್ಟ ಬಾಲಕಿಗೆ ₹ 25 ಲಕ್ಷ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಡ್ರಾಮಿ</strong> (<strong>ಕಲಬುರಗಿ ಜಿಲ್ಲೆ</strong>): ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದ್ದು, ಪಟ್ಟಣದಲ್ಲಿ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ.</p><p>ಈ ಅವಘಡದಲ್ಲಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗೊಂಡ ಘಟನೆ ಭಾನುವಾರ ತಡರಾತ್ರಿ ಸುಮಾರು 2:30 ಗಂಟೆಗೆ ನಡೆದಿದೆ.</p><p>ಬಾಲಕಿಯ ಶವ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.</p><p>ಈ ವಿಷಯ ತಾಲ್ಲೂಕು ತಹಶೀಲ್ದಾರ್ ಗಮನಕ್ಕೆ ಇದ್ದು ಪೋಲಿಸ್ ಇಲಾಖೆ ಹೊರತು ಪಡಿಸಿ ಇಲ್ಲಿಯವರೆಗೆ ಯಾವ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p><strong>ದಿಢೀರ್ ಪ್ರತಿಭಟನೆ:</strong> ಗೋಡೆ ಕುಸಿದು 17 ವರ್ಷದ ಬಾಲಕಿ ಮೃತಪಟ್ಟ ಹಿನ್ನೆಲೆ ಪಟ್ಟಣ ಸಮುದಾಯ ಆರೋಗ್ಯ ಕೇಂದ್ರ ಮುಂದೆ ಸೋಮವಾರ ಮುಂಜಾನೆ ವಿವಿಧ ಸಂಘಟನೆಗಳಿಂದ ದಿಢೀರ್ ಪ್ರತಿಭಟನೆ ನಡೆಸುತ್ತಿವೆ.</p><p>ಕೂಡಲೇ ಬೆಂಗಳೂರಿನಲ್ಲಿ ಇರುವ ಜೇವರ್ಗಿ ಕ್ಷೇತ್ರ ಶಾಸಕ ಡಾ ಅಜಯಸಿಂಗ್ ಸ್ಥಳಕ್ಕೆ ಆಗಮಿಸಿ ಮೃತ್ತಪಟ್ಟ ಬಾಲಕಿಗೆ ₹ 25 ಲಕ್ಷ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>