<p>ಕಲಬುರಗಿ: ಭಾರತೀಯ ಸಂಸ್ಕೃತಿ ವಿಶ್ವಮಟ್ಟದಲ್ಲಿ ಮೇರು ಸ್ಥಾನದಲ್ಲಿ ನಿಲ್ಲಲು ಅದಕ್ಕೆ ಮೂಲ ಅಡಿಪಾಯ ಜಾನಪದ ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಅಧಿಕಾರಿ ಸದಾನಂದ ಪೆರ್ಲ ಹೇಳಿದರು.</p>.<p>ನಗರದ ಕನ್ನಡ ಭವನದಲ್ಲಿ ಶನಿವಾರ ಗೌತಮ ಯುವಜನ ಸಾಂಸ್ಕೃತಿಕ ಸೇವಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಆಶ್ರಯದಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಬಿ. ನಿಂಗಪ್ಪ ಮಾತನಾಡಿ, ‘ಗ್ರಾಮೀಣ ಪ್ರದೇಶದ ಜನಪದ ಸಂಸ್ಕೃತಿ ನಗರ ಪ್ರದೇಶದ ಜನರಿಗೆ ತಲುಪಿಸಲು ಇಂತಹ ಕಾರ್ಯಕ್ರಮ ಆಯೋಜನೆ ಶ್ಲಾಘನೀಯವಾಗಿದೆ’ ಎಂದರು.</p>.<p>ಎಸ್ಸಿ, ಎಸ್ಟಿ ವಕೀಲರ ಕಾನೂನು ಜಾಗೃತ ಸಂಘದ ಕಾರ್ಯದರ್ಶಿ ಕುಸುಮಾಕರ ಮಹಾಗಾಂವಿ, ಪ್ರವಾಸೋದ್ಯಮ ಇಲಾಖೆ ಬೀದರ್ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಡೆಂಗಿ, ಆಕಾಶವಾಣಿ ಕಲಾವಿದ ಬಾಬುರಾವ ಕೋಬಾಳ, ವಕೀಲರಾದ ಮಹಾಂತೇಶ ಮಂದೇವಾಲ, ಧೂಳಪ್ಪ ಧ್ಯಾಮನಕರ್, ಕಸಾಪ ಗೌರವ ಕಾರ್ಯದರ್ಶಿ ಧರ್ಮಣ್ಣ ಧನ್ನಿ ಉಪಸ್ಥಿತರಿದ್ದರು.</p>.<p>ಡಾ.ಅಂಬೇಡ್ಕರ್ ಜಯಂತಿ ನಿಮಿತ್ತ ರಕ್ತದಾನ ಮಾಡಿದ 18 ಜನ ರಕ್ತದಾನಿಗಳನ್ನು ಸಂಸ್ಥೆಯಿಂದ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಚೆನ್ನಪ್ಪ ಸುರಪೂರಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲ ಶೈಲೇಂದ್ರ ಲಾಡೆ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಸಚಿನ್ ವಂದಿಸಿದರು.</p>.<p>ನಂತರ ಆಕಾಶವಾಣಿ ಕಲಾವಿದರಾದ ಬಲಭೀಮ ನೆಲೋಗಿ, ಚೇತನ ಕೋಬಾಳ, ಮಹಾಂತಪ್ಪ ಮಂದೇವಾಲ, ಸ್ವಾತಿ ಕೋಬಾಳ, ಜಗದೀಶ ಮಾನು, ಪವನಕುಮಾರ ನೆಲೋಗಿ, ನಾಗಮೂರ್ತಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-34-1087289981</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಭಾರತೀಯ ಸಂಸ್ಕೃತಿ ವಿಶ್ವಮಟ್ಟದಲ್ಲಿ ಮೇರು ಸ್ಥಾನದಲ್ಲಿ ನಿಲ್ಲಲು ಅದಕ್ಕೆ ಮೂಲ ಅಡಿಪಾಯ ಜಾನಪದ ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಅಧಿಕಾರಿ ಸದಾನಂದ ಪೆರ್ಲ ಹೇಳಿದರು.</p>.<p>ನಗರದ ಕನ್ನಡ ಭವನದಲ್ಲಿ ಶನಿವಾರ ಗೌತಮ ಯುವಜನ ಸಾಂಸ್ಕೃತಿಕ ಸೇವಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಆಶ್ರಯದಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಬಿ. ನಿಂಗಪ್ಪ ಮಾತನಾಡಿ, ‘ಗ್ರಾಮೀಣ ಪ್ರದೇಶದ ಜನಪದ ಸಂಸ್ಕೃತಿ ನಗರ ಪ್ರದೇಶದ ಜನರಿಗೆ ತಲುಪಿಸಲು ಇಂತಹ ಕಾರ್ಯಕ್ರಮ ಆಯೋಜನೆ ಶ್ಲಾಘನೀಯವಾಗಿದೆ’ ಎಂದರು.</p>.<p>ಎಸ್ಸಿ, ಎಸ್ಟಿ ವಕೀಲರ ಕಾನೂನು ಜಾಗೃತ ಸಂಘದ ಕಾರ್ಯದರ್ಶಿ ಕುಸುಮಾಕರ ಮಹಾಗಾಂವಿ, ಪ್ರವಾಸೋದ್ಯಮ ಇಲಾಖೆ ಬೀದರ್ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಡೆಂಗಿ, ಆಕಾಶವಾಣಿ ಕಲಾವಿದ ಬಾಬುರಾವ ಕೋಬಾಳ, ವಕೀಲರಾದ ಮಹಾಂತೇಶ ಮಂದೇವಾಲ, ಧೂಳಪ್ಪ ಧ್ಯಾಮನಕರ್, ಕಸಾಪ ಗೌರವ ಕಾರ್ಯದರ್ಶಿ ಧರ್ಮಣ್ಣ ಧನ್ನಿ ಉಪಸ್ಥಿತರಿದ್ದರು.</p>.<p>ಡಾ.ಅಂಬೇಡ್ಕರ್ ಜಯಂತಿ ನಿಮಿತ್ತ ರಕ್ತದಾನ ಮಾಡಿದ 18 ಜನ ರಕ್ತದಾನಿಗಳನ್ನು ಸಂಸ್ಥೆಯಿಂದ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಚೆನ್ನಪ್ಪ ಸುರಪೂರಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲ ಶೈಲೇಂದ್ರ ಲಾಡೆ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಸಚಿನ್ ವಂದಿಸಿದರು.</p>.<p>ನಂತರ ಆಕಾಶವಾಣಿ ಕಲಾವಿದರಾದ ಬಲಭೀಮ ನೆಲೋಗಿ, ಚೇತನ ಕೋಬಾಳ, ಮಹಾಂತಪ್ಪ ಮಂದೇವಾಲ, ಸ್ವಾತಿ ಕೋಬಾಳ, ಜಗದೀಶ ಮಾನು, ಪವನಕುಮಾರ ನೆಲೋಗಿ, ನಾಗಮೂರ್ತಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-34-1087289981</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>