<p>ಕಲಬುರಗಿ: ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಕಳೆದ ಐದು ತಿಂಗಳ ಅವಧಿಯಲ್ಲಿ 71 ದಿನ ಕಲಾಪ ನಡೆಸಿ 1,079 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಮಾಹಿತಿ ಆಯುಕ್ತ ಬಿ.ವೆಂಕಟ ಸಿಂಗ್ ತಿಳಿಸಿದ್ದಾರೆ.</p>.<p>2025ರ ನವೆಂಬರ್ 24ರಿಂದ 2026ರ ಮಾರ್ಚ್ ಅಂತ್ಯಕ್ಕೆ 2,520 ಪ್ರಕರಣಗಳು ವಿಚಾರಣೆಗೆ ಕೈಗೆತ್ತಿಕೊಂಡು 1,079 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಅರ್ಜಿದಾರರಿಗೆ ಮಾಹಿತಿ ನೀಡಲು ಕಾಲಹರಣ ಮಾಡಿ ಸಮಯ ಮತ್ತು ಆರ್ಥಿಕ ನಷ್ಟ ಉಂಟು ಮಾಡಿದ ಪ್ರಕರಣಗಳಲ್ಲಿ ನೊಂದ ಅರ್ಜಿದಾರರಿಗೆ ₹34 ಸಾವಿರ ಪರಿಹಾರ ಕೊಡಿಸಲಾಗಿದೆ ಎಂದಿದ್ದಾರೆ.</p>.<p>ವಿಶೇಷವಾಗಿ 71 ದಿನಗಳಲ್ಲಿ ಕಳೆದ ಒಂದು ದಶಕದಿಂದ ವಿಲೇವಾರಿಗೆ ಬಾಕಿ ಇದ್ದ ಹಳೇ ಪ್ರಕರಣಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲಾಗಿದೆ. ಬರುವ ದಿನಗಳಲ್ಲಿ ಹೊಸ ಪ್ರಕರಣಗಳನ್ನು ಕೈಗೆತ್ತಿಕೊಂಡು, ಶೀಘ್ರ ವಿಚಾರಣೆ ಮುಗಿಸಿ ಅರ್ಜಿದಾರರಿಗೆ ಮಾಹಿತಿ ಕೊಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-34-1005316597</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಕಳೆದ ಐದು ತಿಂಗಳ ಅವಧಿಯಲ್ಲಿ 71 ದಿನ ಕಲಾಪ ನಡೆಸಿ 1,079 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಮಾಹಿತಿ ಆಯುಕ್ತ ಬಿ.ವೆಂಕಟ ಸಿಂಗ್ ತಿಳಿಸಿದ್ದಾರೆ.</p>.<p>2025ರ ನವೆಂಬರ್ 24ರಿಂದ 2026ರ ಮಾರ್ಚ್ ಅಂತ್ಯಕ್ಕೆ 2,520 ಪ್ರಕರಣಗಳು ವಿಚಾರಣೆಗೆ ಕೈಗೆತ್ತಿಕೊಂಡು 1,079 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಅರ್ಜಿದಾರರಿಗೆ ಮಾಹಿತಿ ನೀಡಲು ಕಾಲಹರಣ ಮಾಡಿ ಸಮಯ ಮತ್ತು ಆರ್ಥಿಕ ನಷ್ಟ ಉಂಟು ಮಾಡಿದ ಪ್ರಕರಣಗಳಲ್ಲಿ ನೊಂದ ಅರ್ಜಿದಾರರಿಗೆ ₹34 ಸಾವಿರ ಪರಿಹಾರ ಕೊಡಿಸಲಾಗಿದೆ ಎಂದಿದ್ದಾರೆ.</p>.<p>ವಿಶೇಷವಾಗಿ 71 ದಿನಗಳಲ್ಲಿ ಕಳೆದ ಒಂದು ದಶಕದಿಂದ ವಿಲೇವಾರಿಗೆ ಬಾಕಿ ಇದ್ದ ಹಳೇ ಪ್ರಕರಣಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲಾಗಿದೆ. ಬರುವ ದಿನಗಳಲ್ಲಿ ಹೊಸ ಪ್ರಕರಣಗಳನ್ನು ಕೈಗೆತ್ತಿಕೊಂಡು, ಶೀಘ್ರ ವಿಚಾರಣೆ ಮುಗಿಸಿ ಅರ್ಜಿದಾರರಿಗೆ ಮಾಹಿತಿ ಕೊಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-34-1005316597</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>