<p>ಜೇವರ್ಗಿ: ತಾಲ್ಲೂಕಿನ ನೀರಲಕೋಡ ಗ್ರಾಮದಲ್ಲಿ ಅಂಬಾಭವಾನಿ ದೇವಸ್ಥಾನ ಉದ್ಘಾಟನೆ ನಿಮಿತ್ತ ಗುರುವಾರ ಸಂಭ್ರಮದ ಮಧ್ಯೆ ಮೂರ್ತಿ ಪ್ರತಿ ಷ್ಠಾಪನೆ ಹಾಗೂ ಕಳಸಾರೋಹಣ ನೆರವೇರಿಸಲಾಯಿತು.</p>.<p>ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಏ.1ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನ ಟ್ರಸ್ಟ್ ಕಮಿಟಿ ಆಯೋಜನೆ ಮಾಡಿತ್ತು. ಸೊನ್ನ ಸಿದ್ದಲಿಂಗೇಶ್ವರ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಲಾಯಿತು.</p>.<p>ಮೂರ್ತಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಅಲಂಕಾರ, ಮಹಾ ಮಂಗಳಾರತಿ, ನೈವೇದ್ಯ ಅರ್ಪಿಸಲಾಯಿತು. ಇದಕ್ಕೂ ಮುನ್ನ ಮಹಿಳೆಯರ ಕುಂಭ ಕಳಸದೊಂದಿಗೆ ಮೆರವಣಿಗೆ ನಡೆ ಸಲಾಯಿತು. ಮಧ್ಯಾಹ್ನ ಕಳಸಾ ರೋಹಣ ಹಾಗೂ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.</p>.<p>ಈ ಸಂದರ್ಭದಲ್ಲಿ ಪ್ರಮುಖರಾದ ಮಹದೇವಪ್ಪ ಇಜೇರಿ, ಅಣ್ಣಾರಾಯ ಇಜೇರಿ, ಭವಾನಿರಾಯ, ಶಿವಣ್ಣಗೌಡ ಪೊಲೀಸ್ ಪಾಟೀಲ, ಭೀಮಣ್ಣ ವಾಗಣಗೇರಿ, ಸಿದ್ದು, ಅರವಿಂದ್ ಡುಮಾಲೆ, ತುಳಜಾರಾಮ ಪೊಲೀಸ್, ಚಂದ್ರಮಪ್ಪ ಸಿದ್ದನಮನಿ ಸೇರಿದಂತೆ ಮತ್ತಿತ ರರಿದ್ದರು.</p>.<p>ದೇವಸ್ಥಾನ ಲೋಕಾರ್ಪಣೆ ಇಂದು: ಶುಕ್ರವಾರ ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಸಂತೋಷ ಲಾಡ್ ಉದ್ಘಾಟಿಸಲಿದ್ದು, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಜ್ಯೋತಿ ಬೆಳಗಿಸುವರು. ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅಧ್ಯಕ್ಷತೆ ವಹಿಸುವರು.</p>.<p>ಬೆಂಗಳೂರಿನ ಗೋಸಾಯಿ ಸಂಸ್ಥಾನಮಠದ ಮಂಜುನಾಥ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಡಾ.ಅಜಯಸಿಂಗ್, ಅಲ್ಲಮಪ್ರಭು ಪಾಟೀಲ, ಮಾರುತಿರಾವ ಮುಳೆ, ಕೇದಾರಲಿಂಗಯ್ಯ ಹಿರೇಮಠ, ರಾಜಶೇಖರ ಸೀರಿ, ಎಸ್.ಪಿ. ದಯಾನಂದ, ಬಸವರಾಜ ಪಡುಕೋಟೆ, ಮಯೋಜರಾವ, ನಟ ಗಣೇಶರಾವ ಕೇಸರಕರ್ ಆಗಮಿಸುವರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-31-612832839</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೇವರ್ಗಿ: ತಾಲ್ಲೂಕಿನ ನೀರಲಕೋಡ ಗ್ರಾಮದಲ್ಲಿ ಅಂಬಾಭವಾನಿ ದೇವಸ್ಥಾನ ಉದ್ಘಾಟನೆ ನಿಮಿತ್ತ ಗುರುವಾರ ಸಂಭ್ರಮದ ಮಧ್ಯೆ ಮೂರ್ತಿ ಪ್ರತಿ ಷ್ಠಾಪನೆ ಹಾಗೂ ಕಳಸಾರೋಹಣ ನೆರವೇರಿಸಲಾಯಿತು.</p>.<p>ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಏ.1ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನ ಟ್ರಸ್ಟ್ ಕಮಿಟಿ ಆಯೋಜನೆ ಮಾಡಿತ್ತು. ಸೊನ್ನ ಸಿದ್ದಲಿಂಗೇಶ್ವರ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಲಾಯಿತು.</p>.<p>ಮೂರ್ತಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಅಲಂಕಾರ, ಮಹಾ ಮಂಗಳಾರತಿ, ನೈವೇದ್ಯ ಅರ್ಪಿಸಲಾಯಿತು. ಇದಕ್ಕೂ ಮುನ್ನ ಮಹಿಳೆಯರ ಕುಂಭ ಕಳಸದೊಂದಿಗೆ ಮೆರವಣಿಗೆ ನಡೆ ಸಲಾಯಿತು. ಮಧ್ಯಾಹ್ನ ಕಳಸಾ ರೋಹಣ ಹಾಗೂ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.</p>.<p>ಈ ಸಂದರ್ಭದಲ್ಲಿ ಪ್ರಮುಖರಾದ ಮಹದೇವಪ್ಪ ಇಜೇರಿ, ಅಣ್ಣಾರಾಯ ಇಜೇರಿ, ಭವಾನಿರಾಯ, ಶಿವಣ್ಣಗೌಡ ಪೊಲೀಸ್ ಪಾಟೀಲ, ಭೀಮಣ್ಣ ವಾಗಣಗೇರಿ, ಸಿದ್ದು, ಅರವಿಂದ್ ಡುಮಾಲೆ, ತುಳಜಾರಾಮ ಪೊಲೀಸ್, ಚಂದ್ರಮಪ್ಪ ಸಿದ್ದನಮನಿ ಸೇರಿದಂತೆ ಮತ್ತಿತ ರರಿದ್ದರು.</p>.<p>ದೇವಸ್ಥಾನ ಲೋಕಾರ್ಪಣೆ ಇಂದು: ಶುಕ್ರವಾರ ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಸಂತೋಷ ಲಾಡ್ ಉದ್ಘಾಟಿಸಲಿದ್ದು, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಜ್ಯೋತಿ ಬೆಳಗಿಸುವರು. ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅಧ್ಯಕ್ಷತೆ ವಹಿಸುವರು.</p>.<p>ಬೆಂಗಳೂರಿನ ಗೋಸಾಯಿ ಸಂಸ್ಥಾನಮಠದ ಮಂಜುನಾಥ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಡಾ.ಅಜಯಸಿಂಗ್, ಅಲ್ಲಮಪ್ರಭು ಪಾಟೀಲ, ಮಾರುತಿರಾವ ಮುಳೆ, ಕೇದಾರಲಿಂಗಯ್ಯ ಹಿರೇಮಠ, ರಾಜಶೇಖರ ಸೀರಿ, ಎಸ್.ಪಿ. ದಯಾನಂದ, ಬಸವರಾಜ ಪಡುಕೋಟೆ, ಮಯೋಜರಾವ, ನಟ ಗಣೇಶರಾವ ಕೇಸರಕರ್ ಆಗಮಿಸುವರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-31-612832839</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>