<p><strong>ಕಲಬುರಗಿ</strong>: ಮಗನ ಮದುವೆ ಅಂಗವಾಗಿ ಬೀದರ್ ಜಿಲ್ಲೆಯ ಖೇಣಿರಂಜೋಳದಲ್ಲಿ ಲಕ್ಷ್ಮೀದೇವಿ ಉಡಿತುಂಬುವ ಕಾರ್ಯಕ್ರಮಕ್ಕಾಗಿ ಹೋಗಿದ್ದವರ ಮನೆಯ ಬೀಗ ಮುರಿದ ಕಳ್ಳರು ₹3.73 ಲಕ್ಷ ಮೌಲ್ಯದ ಚಿನ್ನ–ಬೆಳ್ಳಿ ಆಭರಣ ಕದ್ದು ಪರಾರಿಯಾಗಿದ್ದಾರೆ.</p>.<p>ನಗರದ ಕೆ.ಎಚ್.ಬಿ. ಗ್ರೀನ್ ಪಾರ್ಕ್ ಅಪಾರ್ಟ್ಮೆಂಟ್ ನಿವಾಸಿ, ಬಾಳೆಹಣ್ಣು ವ್ಯಾಪಾರಿ ರವಿ ಮಿರಕಲ್ ನಗದು, ಚಿನ್ನ–ಬೆಳ್ಳಿ ಆಭರಣ ಕಳೆದುಕೊಂಡವರು.</p>.<p>‘ಮಗನ ಮದುವೆ ಅಂಗವಾಗಿ ಬೀದರ್ ಜಿಲ್ಲೆಯ ಖೇಣಿರಂಜೋಳದ ಲಕ್ಷ್ಮೀದೇವಿ ಉಡಿತುಂಬುವ ಕಾರ್ಯಕ್ರಮಕ್ಕಾಗಿ ಮನೆಯವರೆಲ್ಲ ಹೋಗಿದ್ದೆವು. ಅ.18ರ ರಾತ್ರಿ 10ರಿಂದ ಅ.19ರ ನಸುಕಿನ 3 ಗಂಟೆ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲು ಮುರಿದು, ₹3,47,600 ಮೌಲ್ಯದ 97 ಗ್ರಾಂ ಚಿನ್ನಾಭರಣ, ₹26,200 ಮೌಲ್ಯದ 190 ಗ್ರಾಂ ಬೆಳ್ಳಿ ಆಭರಣ ಹಾಗೂ ₹2 ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ’ ಎಂದು ರವಿ ಮಿರಕಲ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಮಗನ ಮದುವೆ ಅಂಗವಾಗಿ ಬೀದರ್ ಜಿಲ್ಲೆಯ ಖೇಣಿರಂಜೋಳದಲ್ಲಿ ಲಕ್ಷ್ಮೀದೇವಿ ಉಡಿತುಂಬುವ ಕಾರ್ಯಕ್ರಮಕ್ಕಾಗಿ ಹೋಗಿದ್ದವರ ಮನೆಯ ಬೀಗ ಮುರಿದ ಕಳ್ಳರು ₹3.73 ಲಕ್ಷ ಮೌಲ್ಯದ ಚಿನ್ನ–ಬೆಳ್ಳಿ ಆಭರಣ ಕದ್ದು ಪರಾರಿಯಾಗಿದ್ದಾರೆ.</p>.<p>ನಗರದ ಕೆ.ಎಚ್.ಬಿ. ಗ್ರೀನ್ ಪಾರ್ಕ್ ಅಪಾರ್ಟ್ಮೆಂಟ್ ನಿವಾಸಿ, ಬಾಳೆಹಣ್ಣು ವ್ಯಾಪಾರಿ ರವಿ ಮಿರಕಲ್ ನಗದು, ಚಿನ್ನ–ಬೆಳ್ಳಿ ಆಭರಣ ಕಳೆದುಕೊಂಡವರು.</p>.<p>‘ಮಗನ ಮದುವೆ ಅಂಗವಾಗಿ ಬೀದರ್ ಜಿಲ್ಲೆಯ ಖೇಣಿರಂಜೋಳದ ಲಕ್ಷ್ಮೀದೇವಿ ಉಡಿತುಂಬುವ ಕಾರ್ಯಕ್ರಮಕ್ಕಾಗಿ ಮನೆಯವರೆಲ್ಲ ಹೋಗಿದ್ದೆವು. ಅ.18ರ ರಾತ್ರಿ 10ರಿಂದ ಅ.19ರ ನಸುಕಿನ 3 ಗಂಟೆ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲು ಮುರಿದು, ₹3,47,600 ಮೌಲ್ಯದ 97 ಗ್ರಾಂ ಚಿನ್ನಾಭರಣ, ₹26,200 ಮೌಲ್ಯದ 190 ಗ್ರಾಂ ಬೆಳ್ಳಿ ಆಭರಣ ಹಾಗೂ ₹2 ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ’ ಎಂದು ರವಿ ಮಿರಕಲ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>