<p><strong>ಕಲಬುರಗಿ</strong>: ‘ಹದಿವಯಸ್ಸಿನ ಯುವಕರು ವಾಹನಗಳ ಚಾಲನೆ, ಅತಿರೇಕಕ್ಕೆ ಹೋಗುವುದು, ವಿನಾ ಕಾರಣ ಕೋಪಿಸಿಕೊಳ್ಳುವುದು ಮಾಡಬಾರದು. ಶಿಕ್ಷಣ ಮುಗಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.</p>.<p>ನಗರದ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ಸುಂದರವಾಗಿಸಿಕೊಳ್ಳಬೇಕು’ ಎಂದ ಅವರು, ವಿದ್ಯಾರ್ಥಿಗಳಿಗಾಗಿ ಕಾನೂನು ಸೇವೆ, ಕಾನೂನು ಪ್ರಾಧಿಕಾರದ ವಿಶೇಷ ಸೌಲಭ್ಯಗಳನ್ನು ವಿವರಿಸಿದರು.</p>.<p>ಅತಿಥಿ ಬಸವರಾಜ ಬಿರಾದಾರ, ಕಾಲೇಜಿನ ಪ್ರಾಚಾರ್ಯ ಭುರ್ಲಿ ಪ್ರಹ್ಲಾದ, ಉಪಪ್ರಾಚಾರ್ಯ ಕೇದಾರ ದೀಕ್ಷಿತ್ ಇದ್ದರು. ಮಳೇಂದ್ರ ಹಿರೇಮಠ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಹದಿವಯಸ್ಸಿನ ಯುವಕರು ವಾಹನಗಳ ಚಾಲನೆ, ಅತಿರೇಕಕ್ಕೆ ಹೋಗುವುದು, ವಿನಾ ಕಾರಣ ಕೋಪಿಸಿಕೊಳ್ಳುವುದು ಮಾಡಬಾರದು. ಶಿಕ್ಷಣ ಮುಗಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.</p>.<p>ನಗರದ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ಸುಂದರವಾಗಿಸಿಕೊಳ್ಳಬೇಕು’ ಎಂದ ಅವರು, ವಿದ್ಯಾರ್ಥಿಗಳಿಗಾಗಿ ಕಾನೂನು ಸೇವೆ, ಕಾನೂನು ಪ್ರಾಧಿಕಾರದ ವಿಶೇಷ ಸೌಲಭ್ಯಗಳನ್ನು ವಿವರಿಸಿದರು.</p>.<p>ಅತಿಥಿ ಬಸವರಾಜ ಬಿರಾದಾರ, ಕಾಲೇಜಿನ ಪ್ರಾಚಾರ್ಯ ಭುರ್ಲಿ ಪ್ರಹ್ಲಾದ, ಉಪಪ್ರಾಚಾರ್ಯ ಕೇದಾರ ದೀಕ್ಷಿತ್ ಇದ್ದರು. ಮಳೇಂದ್ರ ಹಿರೇಮಠ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>