<p>ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನಗರದ ಸೂಪರ್ ಮಾರ್ಕೆಟ್ನಲ್ಲಿ ನಿರ್ಮಿಸಿರುವ ನೂತನ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನೆ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಸ್ ನಿಲ್ದಾಣವನ್ನು ಉದ್ಘಾಟಿಸುವರು. ಇದೇ ವೇಳೆ, ಕಲ್ಯಾಣರಥ (ಮಲ್ಟಿ ಎಕ್ಸೆಲ್ ಎ.ಸಿ ಸ್ಲೀಪರ್) ಹಾಗೂ ಅಮೋಘವರ್ಷ (ನಾನ್ ಎ.ಸಿ. ಸ್ಲೀಪರ್) ಬಸ್ಗಳ ಲೋಕಾರ್ಪಣೆ ನಡೆಯಲಿದೆ. </p>.<p>ಈ ಸಮಾರಂಭದಲ್ಲಿ ಕಲಬುರಗಿ ವಿಭಾಗ-1 ಹಾಗೂ ವಿಭಾಗ-2ರ ಒಟ್ಟು 121 ಚಾಲಕರು ಅಪಘಾತ ರಹಿತ ಸೇವೆ ಸಲ್ಲಿಸಿದ್ದು, ಅವರಿಗೆ ಬೆಳ್ಳಿ ಪದಕ ವಿತರಣೆಯೂ ಜರುಗಲಿದೆ.</p>.<p>ಸೇವಾ ಅವಧಿಯಲ್ಲಿ ಮೃತಪಟ್ಟ ನಿಗಮದ ನೌಕರರ ಅರ್ಹ ಅವಲಂಬಿತರಿಗೆ ನಿಗಮದಲ್ಲಿ ಕೆಲಸದ ನೇಮಕಾತಿ ಆದೇಶ ಪತ್ರಗಳನ್ನೂ ವಿತರಿಸಲಾಗುವುದು. ನಿಗಮದಲ್ಲಿ ಸೇವಾ ಅವಧಿಯಲ್ಲಿ ಮೃತಪಟ್ಟ 8 ಅಧಿಕಾರಿ/ಸಿಬ್ಬಂದಿ ಕುಟುಂಬದವರಿಗೆ ತಲಾ ₹10 ಲಕ್ಷ ಆಂತರಿಕ ಗುಂಪು ವಿಮಾ ಪರಿಹಾರದ ಮೊತ್ತದ ಚೆಕ್ಗಳನ್ನೂ ವಿತರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಪ್ರಕಟಣೆ ಮೂಲಕ ಕೋರಿದ್ದಾರೆ.</p>.<p>ಸೂಪರ್ ಮಾರ್ಕೆಟ್ನ ನೂತನ ಸಿಟಿ ಬಸ್ ನಿಲ್ದಾಣ ಪ್ರಯಾಣಿಕರ ಪಾಲಿಗೆ ವರದಾನವಾಗಿ ಹೊರಹೊಮ್ಮಲಿದೆ. ಜನರು ಸಮೂಹ ಸಾರಿಗೆಯನ್ನು ಹೆಚ್ಚೆಚ್ಚು ಬಳಸಬೇಕು </p><p>-ಅಲ್ಲಮಪ್ರಭು ಪಾಟೀಲ ಶಾಸಕ</p>.<p><strong>ಸಾರಿಗೆ ಸಚಿವ ನಗರಕ್ಕಿಂದು</strong> </p><p>ಕಲಬುರಗಿ: ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜ.25ರಂದು ಬೆಳಿಗ್ಗೆ 9.35ಕ್ಕೆ ಕಲಬುರಗಿಗೆ ಬರುವರು. ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿನ ನಗರ ಸಾರಿಗೆ ನೂತನ ಬಸ್ ನಿಲ್ದಾಣದ ಕಟ್ಟಡವನ್ನು ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನಗರದ ಸೂಪರ್ ಮಾರ್ಕೆಟ್ನಲ್ಲಿ ನಿರ್ಮಿಸಿರುವ ನೂತನ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನೆ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಸ್ ನಿಲ್ದಾಣವನ್ನು ಉದ್ಘಾಟಿಸುವರು. ಇದೇ ವೇಳೆ, ಕಲ್ಯಾಣರಥ (ಮಲ್ಟಿ ಎಕ್ಸೆಲ್ ಎ.ಸಿ ಸ್ಲೀಪರ್) ಹಾಗೂ ಅಮೋಘವರ್ಷ (ನಾನ್ ಎ.ಸಿ. ಸ್ಲೀಪರ್) ಬಸ್ಗಳ ಲೋಕಾರ್ಪಣೆ ನಡೆಯಲಿದೆ. </p>.<p>ಈ ಸಮಾರಂಭದಲ್ಲಿ ಕಲಬುರಗಿ ವಿಭಾಗ-1 ಹಾಗೂ ವಿಭಾಗ-2ರ ಒಟ್ಟು 121 ಚಾಲಕರು ಅಪಘಾತ ರಹಿತ ಸೇವೆ ಸಲ್ಲಿಸಿದ್ದು, ಅವರಿಗೆ ಬೆಳ್ಳಿ ಪದಕ ವಿತರಣೆಯೂ ಜರುಗಲಿದೆ.</p>.<p>ಸೇವಾ ಅವಧಿಯಲ್ಲಿ ಮೃತಪಟ್ಟ ನಿಗಮದ ನೌಕರರ ಅರ್ಹ ಅವಲಂಬಿತರಿಗೆ ನಿಗಮದಲ್ಲಿ ಕೆಲಸದ ನೇಮಕಾತಿ ಆದೇಶ ಪತ್ರಗಳನ್ನೂ ವಿತರಿಸಲಾಗುವುದು. ನಿಗಮದಲ್ಲಿ ಸೇವಾ ಅವಧಿಯಲ್ಲಿ ಮೃತಪಟ್ಟ 8 ಅಧಿಕಾರಿ/ಸಿಬ್ಬಂದಿ ಕುಟುಂಬದವರಿಗೆ ತಲಾ ₹10 ಲಕ್ಷ ಆಂತರಿಕ ಗುಂಪು ವಿಮಾ ಪರಿಹಾರದ ಮೊತ್ತದ ಚೆಕ್ಗಳನ್ನೂ ವಿತರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಪ್ರಕಟಣೆ ಮೂಲಕ ಕೋರಿದ್ದಾರೆ.</p>.<p>ಸೂಪರ್ ಮಾರ್ಕೆಟ್ನ ನೂತನ ಸಿಟಿ ಬಸ್ ನಿಲ್ದಾಣ ಪ್ರಯಾಣಿಕರ ಪಾಲಿಗೆ ವರದಾನವಾಗಿ ಹೊರಹೊಮ್ಮಲಿದೆ. ಜನರು ಸಮೂಹ ಸಾರಿಗೆಯನ್ನು ಹೆಚ್ಚೆಚ್ಚು ಬಳಸಬೇಕು </p><p>-ಅಲ್ಲಮಪ್ರಭು ಪಾಟೀಲ ಶಾಸಕ</p>.<p><strong>ಸಾರಿಗೆ ಸಚಿವ ನಗರಕ್ಕಿಂದು</strong> </p><p>ಕಲಬುರಗಿ: ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜ.25ರಂದು ಬೆಳಿಗ್ಗೆ 9.35ಕ್ಕೆ ಕಲಬುರಗಿಗೆ ಬರುವರು. ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿನ ನಗರ ಸಾರಿಗೆ ನೂತನ ಬಸ್ ನಿಲ್ದಾಣದ ಕಟ್ಟಡವನ್ನು ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>